ಸದಭಿರುಚಿಯ ಸಿನೆಮಾಗಳು ಬೆಳೆಯಲಿ: ಸುವರ್ಣ


Team Udayavani, Apr 17, 2018, 7:45 AM IST

Film-Festival-15-4.jpg

ಮಂಗಳೂರು: ನಿಟ್ಟೆ ವಿಶ್ವವಿದ್ಯಾಲಯದ ವತಿಯಿಂದ ಮಂಗಳೂರಿನ ಭಾರತ್‌ ಮಾಲ್‌ ನ ಭಾರತ್‌ ಸಿನಿಮಾಸ್‌ ನಲ್ಲಿ ನಾಲ್ಕು ದಿನಗಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ ಚಾಲನೆ ದೊರಕಿತು. ಎ. 19ರ ವರೆಗೆ ವಿವಿಧ ಭಾಷೆಗಳ ಚಿತ್ರಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ. ಹಿರಿಯ ಚಲನಚಿತ್ರ ನಿರ್ಮಾಪಕ ಹಾಗೂ ರಂಗಕರ್ಮಿ ಸದಾನಂದ ಸುವರ್ಣ ಅವರು ಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಸದಭಿರುಚಿಯ ಸಿನೆಮಾಗಳು ಇನ್ನಷ್ಟು ಬರಬೇಕಿವೆ. ಪ್ರೇಕ್ಷಕರು ಕೂಡ ಉತ್ತಮ ಅಭಿರುಚಿಯ ಸಿನೆಮಾಗಳನ್ನೇ ಬಯಸುತ್ತಾರೆ. ಆಸಕ್ತಿದಾಯಕ ಸಿನೆಮಾ ಪ್ರದರ್ಶನಗಳನ್ನು ವೀಕ್ಷಿಸುವ ಮೂಲಕ ಸಿನೆಮಾಗಳಿಗೆ ಪ್ರೇಕ್ಷಕರಿಗೆ ಕೊರತೆ ಇಲ್ಲ ಎಂಬುದನ್ನು ಕರಾವಳಿ ಜನತೆ ತೋರಿಸಿಕೊಡಬೇಕಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆಯಿಂದ ಮಂಗಳೂರಿಗರಿಗೆ ಒಳ್ಳೆಯ ಚಿತ್ರಗಳನ್ನು ನೋಡುವ ಭಾಗ್ಯ ದೊರೆತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ವಿ.ವಿ. ಉಪ ಕುಲಪತಿ ಡಾ| ಸತೀಶ್‌ ಕುಮಾರ್‌ ಭಂಡಾರಿ ಅವರು  ಮಾತನಾಡಿ, ಈ ಚಲನಚಿತ್ರೋತ್ಸವವು ಚಲನಚಿತ್ರ ನಿರ್ಮಾಪಕರಿಗೆ ಮತ್ತು ಚಿತ್ರ ವೀಕ್ಷಕರಿಗೆ ಸೂಕ್ತವಾದ ವೇದಿಕೆ ಒದಗಿಸಲಿದೆ, ಮಂಗಳೂರಿನ ಜನರಿಗೆ ಜಾಗತಿಕ ಮಟ್ಟದಲ್ಲಿ ವಿಮರ್ಶಾತ್ಮಕವಾಗಿ ಪ್ರಶಂಸೆ ಪಡೆದ ಚಲನಚಿತ್ರಗಳನ್ನು ಪ್ರದರ್ಶಿಸಲು ಉದ್ದೇಶಿಸಿದೆ ಎಂದರು. ಚಿತ್ರೋತ್ಸವದ ಸಂಘಟಕ ಪ್ರೊ| ರವಿರಾಜ್‌ ಕಿಣಿ, ವಿದ್ಯಾರ್ಥಿ ಸಂಘಟಕ ಮೈತ್ರೇಯ್‌ ದೇಶಪಾಂಡೆ ಉಪಸ್ಥಿತರಿದ್ದರು.

4 ದಿನ, 60 ಸಿನೆಮಾ
ಸಂಘಟಕ ಪ್ರೊ| ರವಿರಾಜ್‌ ಕಿಣಿ ಮಾತನಾಡಿ, ಭಾರತ್‌ ಸಿನೆಮಾಸ್‌ನಲ್ಲಿ ಎ. 19ರವರೆಗೆ 4ದಿನಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ವಿವಿಧ ಭಾಷೆಯ 60 ಸಿನೆಮಾಗಳು ಪ್ರದರ್ಶನ ಕಾಣಲಿವೆ. 3 ಸ್ಕ್ರೀನ್‌ಗಳಲ್ಲಿ ದಿನಕ್ಕೆ ತಲಾ ಐದು ಅಥವಾ ಆರು ಪ್ರದರ್ಶನಗಳಿರುತ್ತವೆ. 40 ಮಂದಿ ಸಿನೆಮಾ ನಿರ್ಮಾಪಕರು ಪಾಲ್ಗೊಳ್ಳಲಿದ್ದಾರೆ. ಹಿಂದಿ, ಕನ್ನಡ, ಕೊಂಕಣಿ, ಮಲಯಾಳ, ಬಂಗಾಲಿ, ಗುಜರಾತಿ, ತಮಿಳು, ಫ್ರೆಂಚ್‌, ಚೀನೀ ಭಾಷೆಗಳ ಸಿನೆಮಾಗಳು ಪ್ರದರ್ಶನಗೊಳ್ಳಲಿವೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಮಕ್ಕಳ ಸಿನೆಮಾವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಲವು ಮಕ್ಕಳ ಚಿತ್ರಗಳ ಪ್ರದರ್ಶನವಿದೆ. ಚಿತ್ರ ನಿರ್ಮಾಪಕರ ಜತೆ ಪ್ರೇಕ್ಷಕರಿಗೆ ಸಂವಾದಕ್ಕೆ ಅವಕಾಶವಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಿನೆಮಾಗಳು ಕೂಡ ಇರುತ್ತವೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.