ಮಗಳಿಗೆ ವರದಕ್ಷಿಣೆ ಹಿಂಸೆ; ಪೊಲೀಸ್ ನಿಷ್ಕ್ರಿಯತೆ; ತಂದೆ ಅತ್ಮಹತ್ಯೆ
Team Udayavani, Apr 17, 2018, 11:48 AM IST
ಮುಜಫರನಗರ: ತನ್ನ ಮಗಳಿಗೆ ಆಕೆಯ ಅತ್ತ ನೀಡುತ್ತಿದ್ದ ವರದಕ್ಷಿಣೆ ಹಿಂಸೆ ಬಗ್ಗೆ ತಾನು ಎಷ್ಟೇ ದೂರು ನೀಡಿದರೂ ಪೊಲೀಸರು ಎಫ್ಐಆರ್ ದಾಖಲಿಸದೆ ನಿಷ್ಕ್ರಿಯತೆ ತೋರಿದ ಕಾರಣಕ್ಕೆ ಹತಾಶರಾದ 60 ವರ್ಷ ಪ್ರಾಯದ ಅಖ್ತರ್ ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಜಫರನಗರ ಜಿಲ್ಲೆಯ ಪುರ್ಬಾಲಿಯಾ ಗ್ರಾಮದಲ್ಲಿ ನಡೆದಿದೆ.
ಅಖ್ತರ್ ಅವರು ತಮ್ಮ ಮಗಳನ್ನು 2012ರಲ್ಲಿ ಮೀರ್ ಹಸನ್ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದಂದಿನಿಂದಲೂ ಅತ್ತೆ ಮಾವ ವರದಕ್ಷಿಣೆಗಾಗಿ ಸೊಸೆಯನ್ನು ಹಿಂಸಿಸುತ್ತಿದ್ದರು. ಇದರಿಂದ ಬೇಸತ್ತ ಆಕೆ, ಪತಿಯ ಮನೆಯನ್ನು ತೊರೆದು ಇದೇ ಎಪ್ರಿಲ್ 1ರಿಂದ ಹೆತ್ತವರ ಜತೆಗೆ ವಾಸಿಸಿಕೊಂಡಿದ್ದಳು.
ಮಗಳು ಅನುಭವಿಸುತ್ತಿರುವ ವರದಕ್ಷಿಣೆ ಹಿಂಸೆ ಬಗ್ಗೆ ತಾನು ಎಷ್ಟೇ ದೂರು ಕೊಟ್ಟರೂ ಪೊಲೀಸರು ಎಫ್ಐಆರ್ ದಾಖಲಿಸದಿದ್ದುಕ್ಕೆ ಹತಾಶರಾದ ಅಖ್ತರ್ ಆತ್ಮಹತ್ಯೆ ಮಾಡಿಕೊಂಡರು. ಈ ಘಟನೆಯನ್ನು ಅನುಸರಿಸಿ ಅಖ್ತರ್ ಅವರ ಅಳಿಯ ಸೇರಿದಂತೆ ಒಟ್ಟು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸರ್ಕಲ್ ಪೊಲೀಸ್ ಆಫೀಸರ್ ರಾಜೀವ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಎಫ್ಐಆರ್ ದಾಖಲಿಸದ ಪೊಲೀಸ್ ನಿಷ್ಕ್ರಿಯತೆಯ ಬಗ್ಗೆಯೂ ತನಿಖೆಗೆ ಆದೇಶಿಸಲಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.