ಯುವತಿ ಜತೆ ಪುಂಡರ ಅಸಭ್ಯ ವರ್ತನೆ


Team Udayavani, Apr 17, 2018, 12:04 PM IST

yuvati.jpg

ಬೆಂಗಳೂರು: ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ ಹಾಡಹಗಲೇ ರಸ್ತೆಯಲ್ಲಿ ಪಾನಮತ್ತ ಪುಂಡರ ಗುಂಪೊಂದು ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದೆ. “ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಊಟ ಮುಗಿಸಿಕೊಂಡು ಕಚೇರಿಗೆ ವಾಪಾಸ್‌ ತೆರಳುತ್ತಿದ್ದ ವೇಳೆ ಬಾರ್‌ ಮುಂದೆ ನಿಂತಿದ್ದ ನಾಲ್ವರು ಪುಂಡರ ಗುಂಪಿನ ಪೈಕಿ ಒಬ್ಬ ನನ್ನ ಉತ್ತರ ಭಾರತ ಮೂಲದ ನನ್ನ ಸ್ನೇಹಿತೆಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.

ಇದರಿಂದ ವಿಚಲಿತಗೊಂಡ ಯುವತಿ ಆತನ ಕಪಾಳಕ್ಕೆ ಹೊಡೆದಿದ್ದು, ಯುವಕ ಆಕೆಯನ್ನು ನಿಂದಿಸಲಾರಂಭಿಸಿದ. ಬಳಿಕ ನಾವೆಲ್ಲರೂ ಆಕೆಯ ಸಹಾಯಕ್ಕೆ ಧಾವಿಸಿ ಅಲ್ಲಿಂದ ಕರೆದುಕೊಂಡು ಬಂದೆವು. ಆದರೆ, ಪಾನಮತ್ತ ಯುವಕ, ಯುವತಿಯ ಮೈ ಮುಟ್ಟಿ ಅಸಭ್ಯ ವರ್ತನೆ ತೋರಿದ. ಈ ವೇಳೆ ಉಂಟಾದ ಗಲಾಟೆಯನ್ನು ಸಾರ್ವಜನಿಕರು ಮನರಂಜನೆಯಂತೆ ನೋಡಿದರೇ ವಿನಾ ಯುವತಿಯ ನೆರವಿಗೆ ಬರಲಿಲ್ಲ,’ ಎಂದು ಸಂತ್ರಸ್ತೆಯ ಸ್ನೇಹಿತ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪೊಲೀಸರ ಅವಹೇಳನ: “ಯುವತಿಯ ಸಹಾಯಕ್ಕೆ ಹೋದಾಗ ದುಷ್ಕರ್ಮಿಗಳು ನನ್ನ ಟೀ ಶರ್ಟ್‌ ಹರಿದು ಹಲ್ಲೆಗೆ ಮುಂದಾದರು. ಕೂಡಲೇ ನನ್ನ ಇನ್ನೊಬ್ಬ ಸ್ನೇಹಿತ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದ. ಅಷ್ಟರಲ್ಲಾಗಲೇ ದುಷ್ಕರ್ಮಿಗಳು ಪರಾರಿಯಾಗಿದ್ದರು.

ಈ ಘಟನೆಯಿಂದ ನಮಗೆ ತೀವ್ರ ಆಘಾತವಾಗಿದೆ,’ ಎಂದು ಬರೆದಿರುವ ಯುವಕ, ಪೊಲೀಸರ ಬಗ್ಗೆ ಹಗುರವಾಗಿ ಮಾತನಾಡಿದ್ದು, “ಯೂಸ್‌ಲೆಸ್‌ ಬೆಂಗಳೂರು ಪೊಲೀಸ್‌’ ಎಂದು ಜರೆದಿದ್ದಾನೆ. ಪೊಲೀಸರನ್ನು ನಿಂದಿಸಿರುವ ಆತ, ಘಟನೆ ಕುರಿತು ದೂರು ನೀಡುವ ಬಗ್ಗೆ ಮಾತ್ರ ಪ್ರಸ್ತಾಪಿಸಿಲ್ಲ.

ದೂರೇ ನೀಡಿಲ್ಲ:ಈ ಕುರಿತಂತೆ ಪ್ರತಿಕ್ರಿಯಿಸಿರುವ ಜೀವನ್‌ಭೀಮಾನಗರ ಠಾಣೆ ಪೊಲೀಸರು, ಘಟನೆ ನಡೆದು ಮೂರು ದಿನ ಕಳೆದರೂ ಯಾರೊಬ್ಬರೂ  ಇದುವರೆಗೆ ದೂರು ನೀಡಿಲ್ಲ. ಫೇಸ್‌ಬುಕ್‌ ಮೂಲಕ ಪ್ರಕರಣ ಗೊತ್ತಾಗಿದೆ.

ಘಟನೆ ಸ್ಥಳದ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ತೊಂದರೆಗೆ ಒಳಗಾದ ಯುವತಿ ದೂರು ನೀಡಿದರೆ ನ್ಯಾಯ ದೊರಕಿಸಿಕೊಡುತ್ತೇವೆ. ಜತೆಗೆ ದುಷ್ಕರ್ಮಿಗಳ ಪತ್ತೆ ಮಾಡಲು ಯುವತಿಯ ಮಾಹಿತಿ ನಮಗೆ ನೆರವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

7-bng

Bengaluru: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಸೆರೆ, 4 ಬೈಕ್‌ ಜಪ್ತಿ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.