ಮಾರ್ಕ್‌-3 ಇವಿಎಂ ಬಳಕೆ ರಾಜಧಾನಿ ಸಜ್ಜು


Team Udayavani, Apr 17, 2018, 12:05 PM IST

mark-3.jpg

ಬೆಂಗಳೂರು: ದೇಶದಲ್ಲೇ ಮೊದಲ ಬಾರಿ “ಮಾರ್ಕ್‌-3′ ತಂತ್ರಜ್ಞಾನದ ಎಲೆಕ್ಟ್ರಾನಿಕ್‌ ವೋಟಿಂಗ್‌ ಮೆಷೀನ್‌ (ಇವಿಎಂ)ಗಳನ್ನು ಬೆಂಗಳೂರಿನಲ್ಲಿ ಬಳಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. 

ದೇಶದಾದ್ಯಂತ ಸದ್ಯ  ಮಾರ್ಕ್‌-2 ತಂತ್ರಜ್ಞಾನದ ಇವಿಎಂ ಬಳಸಲಾಗುತ್ತಿದ್ದು, ಭಾರತ್‌ ಎಲೆಕ್ಟ್ರಾನಿಕ್‌ ಲಿಮಿಟೆಡ್‌ (ಬಿಇಎಲ್‌) ಅಭಿವೃದ್ಧಿಪಡಿಸಿರುವ ಮಾರ್ಕ್‌-3 ತಂತ್ರಜ್ಞಾನದ ಇವಿಎಂಗಳನ್ನು ಇದೇ ಮೊದಲ ಬಾರಿಗೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬಳಸಲಾಗುತ್ತದೆ. ಬಿಇಎಲ್‌ನಿಂದ ಆಯೋಗಕ್ಕೆ ಮಂಗಳವಾರ 5 ಸಾವಿರ ಮಾರ್ಕ್‌-3 ಇವಿಎಂಗಳು ರವಾನೆಯಾಗಲಿವೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಬಿಇಎಲ್‌ನಿಂದ ಅಭಿವೃದ್ಧಿಪಡಿಸಲಾಗಿರುವ ಮಾರ್ಕ್‌-3 ತಂತ್ರಜ್ಞಾನದ ಇವಿಎಂಗಳನ್ನು ಇದೇ ಮೊದಲ ಬಾರಿಗೆ ಬಳಸಲಾಗುತ್ತಿದೆ. ಮಂಗಳವಾರ ಬಿಇಎಲ್‌ನಿಂದ 5 ಸಾವಿರ ಇವಿಎಂಗಳು ರವಾನೆಯಾಗಲಿದ್ದು, ಪ್ರಾಥಮಿಕ ಹಂತ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು. 

ಸದ್ಯ ಲಭ್ಯವಿರುವ ಮಾರ್ಕ್‌-2 ಇವಿಎಂನ ಕಂಟ್ರೋಲ್‌ ಯುನಿಟ್‌ಗಳಿಗೆ ತಲಾ 16 ಅಭ್ಯರ್ಥಿಗಳ ಹೆಸರಿರುವ 4 ಬ್ಯಾಲೆಟ್‌ ಯುನಿಟ್‌ಗಳನ್ನು ಜೋಡಣೆ ಮಾಡಬಹುದಾಗಿದೆ. ಆದರೆ, ಎಂ3 ಕಂಟ್ರೋಲ್‌ ಯುನಿಟ್‌ಗಳಿಗೆ 14 ಬ್ಯಾಲೆಟ್‌ ಯುನಿಟ್‌ಗಳನ್ನು ಜೋಡಣೆ ಮಾಡಬಹುದಾಗಿದ್ದು, 384 ಅಭ್ಯರ್ಥಿಗಳ ಹೆಸರುಗಳನ್ನು ಸೇರಿಸಬಹುದಾಗಿದೆ ಎಂದರು. 

ಎಂ3 ಕಂಟ್ರೋಲ್‌ ಯುನಿಟ್‌ ಹಾಗೂ ಬ್ಯಾಲೆಟ್‌ ಯುನಿಟ್‌ಗಳು ಬಿಇಎಲ್‌ ಹೊರತುಪಡಿಸಿ ಉಳಿದ ಯಾವುದೇ ಕಂಪೆನಿಯ ಹಾರ್ಡ್‌ವೇರ್‌ಗಳನ್ನು ಸ್ವೀಕರಿಸುವುದಿಲ್ಲ. ಒಂದೊಮ್ಮೆ ಯಾರಾದರೂ ಹಾರ್ಡ್‌ವೇರ್‌ ಅಳವಡಿಸಿದರೆ ಕೂಡಲೇ ಡಿಜಿಟಲ್‌ ಪ್ರಮಾಣೀಕರಣದ ಮೂಲಕ ಪತ್ತೆ ಮಾಡಿ ಸೂಚನೆ ನೀಡಲಿದೆ. ಜತೆಗೆ ಅತ್ಯಂತ ನಿಖರವಾದ ಫ‌ಲಿತಾಂಶವನ್ನು ನೀಡುವ ಸಾಮರ್ಥಯ ಹೊಂದಿದ್ದು, ವಿವಿ ಪ್ಯಾಟ್‌ಗಳ ಪರದೆಯ ಬ್ರೈಟ್‌ನೆಸ್‌ಅನ್ನು ಲೋ, ಮೀಡಿಯಂ ಹಾಗೂ ಹೈ ಮಾಡಿಕೊಳ್ಳಲು ಅವಕಾಶವಿದೆ ಎಂದು ಮಾಹಿತಿ ನೀಡಿದರು. 

ಬಿಇಎಲ್‌ನಿಂದ 5 ಸಾವಿರ ಎಂ3 ಇವಿಎಂಗಳು ಲಭ್ಯವಾಗಲಿರುವ ಹಿನ್ನೆಲೆಯಲ್ಲಿ ನಗರದ 3,250 ಮತಗಟ್ಟೆಗಳಲ್ಲಿ ಬಳಸಲು ಉದ್ದೇಶಿಸಲಾಗಿದ್ದು, ಉಳಿದವುಗಳನ್ನು ಕಾಯ್ದಿರಿಸಲಾಗುತ್ತದೆ. ಚುನಾವಣೆಯ ದಿನ ಯಾವುದೇ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದರೆ ಕೂಡಲೇ ಕಾಯ್ದಿರಿಸಿದ ಇವಿಎಂಗಳನ್ನು ಬಳಸಲಾಗುವುದು ಎಂದು ಮಂಜುನಾಥ ಪ್ರಸಾದ್‌ ತಿಳಿಸಿದರು. 

ಒಂದು ಮತಗಟ್ಟೆಯಲ್ಲಿ 1500 ಜನರಿಗೆ ಅವಕಾಶ: ನಗರದ 28 ಕ್ಷೇತ್ರದಲ್ಲಿ 1,500 ಮತದಾರರಿಗೆ ಒಂದು ಮತಗಟ್ಟೆ ಸ್ಥಾಪಿಸಲು ಆಯೋಗವು ಅವಕಾಶ ನೀಡಿದೆ. ಇದರಿಂದಾಗಿ ಹೆಚ್ಚುವರಿ ಮತಗಟ್ಟೆಗಳ ಸಂಖ್ಯೆ 806ರಿಂದ 350 ಇಳಿದಿದೆ. ಜತೆಗೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸಂಪೂರ್ಣ ಮಹಿಳಾ ಸಿಬ್ಬಂದಿ ಒಳಗೊಂಡ “ಪಿಂಕ್‌ ಮತಗಟ್ಟೆ’ ನಿರ್ಮಾಣಕ್ಕೂ ಆಯೋಗ ಒಪ್ಪಿಗೆ ನೀಡಿದೆ. ಈ ಮತಗಟ್ಟೆಗಳಲ್ಲಿ ಮಹಿಳೆಯರಿಗೆ ಮಾತ್ರವಲ್ಲದೆ, ಪುರುಷರಿಗೂ ಮತದಾನ ಮಾಡಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.