ಬಾಯಾರಿದ ಜನರ ಕಾವೇರಿ ಕನಸು


Team Udayavani, Apr 17, 2018, 12:05 PM IST

bayarida.jpg

ಬೆಂಗಳೂರು: ಇಲ್ಲಿ ನೀರು ಅಕ್ಷರಶಃ ಖಾಸಗೀಕರಣವಾಗಿದೆ. ಕುಡಿಯಲು ಮತ್ತು ನಿತ್ಯದ ಬಳಕೆಗೆ ಖಾಸಗಿ ನೀರು ಸರಬರಾಜು ಏಜೆನ್ಸಿಗಳೇ ಯಲಹಂಕ ವಲಯದ ಜನರಿಗೆ ಆಧಾರ!

ಎಂಟು ದಿನಗಳಿಗೊಮ್ಮೆ ಕೇವಲ ಎರಡು ತಾಸು ಬಿಬಿಎಂಪಿ ನೀರು ಬರುತ್ತದೆ. ಅದಕ್ಕೂ ತಿಂಗಳಿಗೊಮ್ಮೆ ನೀರು ಗಂಟಿ “ಖುಷಿಗೆ’ ಅಂತಾ ಇಂತಿಷ್ಟು ಹಣ ಕೊಡಬೇಕು. ಆದರೆ, ಒಂದೊಂದು ಕಟ್ಟಡದಲ್ಲಿ ನಾಲ್ಕಾರು ಮನೆಗಳಿರುವುದರಿಂದ ಎರಡು ದಿನಗಳಲ್ಲಿ ಆ ನೀರು ಖಾಲಿ. ಹಾಗಾಗಿ, ಟ್ಯಾಂಕರ್‌ಗಳ ಅವಲಂಬನೆ ಅನಿವಾರ್ಯ.

ಅದೇ ರೀತಿ, ಕುಡಿಯುವ ನೀರಿಗೆ “ಕಾವೇರಿ ಕನೆಕ್ಷನ್‌’ ಇದೆ. ಆದರೆ, ಅದರಲ್ಲಿ ನೀರು ಹರಿಯುವುದಿಲ್ಲ. ಆದ್ದರಿಂದ ಉಳ್ಳವರು ಮನೆಗೆ 30 ರೂ. ಕೊಟ್ಟು ಕ್ಯಾನ್‌ ನೀರು ತರಿಸಿಕೊಳ್ಳುತ್ತಾರೆ. ಬಡವರು, ಖಾಸಗಿ ಏಜೆನ್ಸಿಯೊಂದು ತೆರೆದಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ 10 ರೂ. ಕೊಟ್ಟು 20 ಲೀ. ನೀರು ಪಡೆಯುತ್ತಾರೆ.

ಇದು ಯಲಹಂಕ ವಲಯದ ಮಾರುತಿನಗರದ ನೀರಿನ ಸ್ಥಿತಿ. ಸುಮಾರು ಒಂದು ಲಕ್ಷ ಜನಸಂಖ್ಯೆ ಹೊಂದಿರುವ ಈ ವಾರ್ಡ್‌ನಲ್ಲಿ ಮೂರು ಮುಖ್ಯ ರಸ್ತೆಗಳಿದ್ದು, ಅದರಲ್ಲಿ 40ಕ್ಕೂ ಅಧಿಕ ಟ್ಯಾಂಕರ್‌ಗಳಿವೆ. ಇದು ಇಲ್ಲಿನ ಟ್ಯಾಂಕರ್‌ಗಳಿಗೆ ಇರುವ ಬೇಡಿಕೆಯನ್ನು ಸೂಚಿಸುತ್ತದೆ. 350 ರೂ.ಗೆ ಒಂದು ಟ್ಯಾಂಕರ್‌ ನೀರು ಬರುತ್ತದೆ.

ಮಾರುತಿನಗರದ ಕೊನೆಯಲ್ಲಿ ದೊಡ್ಡ ಪ್ರಮಾಣದ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಾಣಗೊಳ್ಳುತ್ತಿದೆ. ಮನೆ ಮುಂದೆ ಪೈಪ್‌ಲೈನ್‌ ಹಾದುಹೋಗಿದೆ. ಅಲ್ಲದೆ, ಮನೆ-ಮನೆಗೆ ಸಮೀಕ್ಷೆ ನಡೆಸಿ, ನಲ್ಲಿ ಸಂಪರ್ಕಕ್ಕೆ ಇಂತಿಷ್ಟು ಖರ್ಚಾಗಲಿದೆ ಎಂದೂ ಅಧಿಕಾರಿಗಳು ಹೇಳಿ ಹೋಗಿದ್ದಾರೆ. ಇದೆಲ್ಲವೂ “ಕಾವೇರಿ ಕನಸು’ ಚಿಗುರೊಡೆಯುವಂತೆ ಮಾಡಿದೆ ಎಂದು 1ನೇ ಮುಖ್ಯರಸ್ತೆ ನಿವಾಸಿ ಪ್ರಸಾದ್‌ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಎಲೆಕ್ಷನ್‌ಗೆ ಜಯವಾಗಲಿ!: ಈ ಮೊದಲು 10-15 ದಿನಗಳಿಗೊಮ್ಮೆ ನೀರು ಬರುತ್ತಿತ್ತು. ಚುನಾವಣೆ ಘೋಷಣೆಯಾದ ನಂತರ ವಾರಕ್ಕೊಮ್ಮೆ ಪೂರೈಕೆಯಾಗುತ್ತಿದೆ. ಆದರೆ, ಆ ನೀರು ಯಾವುದಕ್ಕೂ ಸಾಕಾಗುವುದಿಲ್ಲ. ಕೊಳವೆಬಾವಿಗಳಂತೂ ಒಂದೊಂದಾಗಿ ಬತ್ತುತ್ತಿವೆ. ಈ ಸಂದಿಗ್ಧ ಸ್ಥಿತಿಯಲ್ಲಿ ಮಳೆ ತುಸು ಬೇಗ ಬಂದಿದ್ದರಿಂದ ನಿಟ್ಟುಸಿರುವ ಬಿಡುವಂತಾಗಿದೆ ಎಂದು ಮೊದಲ ಮುಖ್ಯರಸ್ತೆ 23ನೇ ಅಡ್ಡರಸ್ತೆಯ ಮಂಜುನಾಥ್‌ ಹೇಳುತ್ತಾರೆ.

ಯಲಹಂಕ ನ್ಯೂಟೌನ್‌ನಲ್ಲಿ ಕಳೆದ ವರ್ಷಗಳಿಗೆ ಹೋಲಿಸಿದರೆ, ಸಮಸ್ಯೆ ಗಂಭೀರವಾಗಿಲ್ಲ. ಆದರೆ, ಕಳೆದ ತಿಂಗಳು ಎರಡು ದಿನಗಳಿಗೊಮ್ಮೆ ಬರುತ್ತಿದ್ದ ನೀರು ಈಗ ಮೂರು ದಿನಗಳಿಗೆ ವಿಸ್ತರಣೆ ಆಗಿದೆ. ನೀರು ಬಿಡುವ ಅವಧಿ ಕೂಡ ತಗ್ಗಿದೆ.

ಬೇಸಿಗೆ ಇನ್ನೂ ಎರಡು ತಿಂಗಳು ಇರುವುದರಿಂದ ಆಗ ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂದು ಡಾ.ವೆಂಕಟೇಶಯ್ಯ ಆತಂಕ ವ್ಯಕ್ತಪಡಿಸುತ್ತಾರೆ. ಅಟ್ಟೂರಿನಲ್ಲಿ ಕೂಡ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಮೂರು ದಿನಗಳಿಗೊಮ್ಮೆ ನೀರು ಪೂರೈಕೆ ಆಗುತ್ತಿದೆ. ಆದರೆ, ಅಲ್ಪ ಸಮಯ ಮಾತ್ರ ಸರಬರಾಜು ಆಗುತ್ತಿದ್ದು, ಸಾಕಾಗುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ಆರೋಪಿಸುತ್ತಾರೆ. 

ಪೂರೈಕೆಯಲ್ಲೂ ತಾರತಮ್ಯ?: ಬೇಸಿಗೆ ಬಂದರೆ ಸಾಕು, ನೀರುಗಂಟಿ ರಾಷ್ಟ್ರಪತಿಗಿಂತ ಬ್ಯುಸಿ ಆಗುತ್ತಾನೆ. ಕರೆ ಸ್ವೀಕರಿಸಲು ಅವರಿಗೆ ಸಮಯವೇ ಇರುವುದಿಲ್ಲ. ವಿಚಿತ್ರವೆಂದರೆ, ಮೂಲನಿವಾಸಿಗಳಿಗೆ ನೀರಿನ ಸಮಸ್ಯೆ ಆಗುವುದೇ ಇಲ್ಲ.

ಆದರೆ, ಬೇರೆ ಕಡೆಯಿಂದ ಇಲ್ಲಿಗೆ ಬಂದವರನ್ನು ಕಡೆಗಣಿಸಲಾಗುತ್ತದೆ. ತಿಂಗಳಿಗೆ ಪ್ರತಿ ಮನೆಯಿಂದ ನೀರು ಬಿಡುವವನಿಗೆ 50-100 ರೂ. “ಖುಷಿಗಾಗಿ’ ಕೊಡಬೇಕು. ಅಂದರೆ ಮಾತ್ರ ನೀರು ಬಿಡುತ್ತಾರೆ ಎಂದು ಹೆಸರು ಹೇಳಲಿಚ್ಛಿಸದ ಮಾರುತಿನಗರದ ನಿವಾಸಿಯೊಬ್ಬರು ಅಸಹಾಯಕತೆ ತೋಡಿಕೊಂಡರು.  

ಸಮಸ್ಯೆ ಇಲ್ಲ: “ಯಲಹಂಕ ವಲಯದಲ್ಲಿ ನೀರಿನ ಸಮಸ್ಯೆ ಇದೆ ಎಂದು ಜಲಮಂಡಳಿ ಸಿಬ್ಬಂದಿಗೆ ಯಾವುದೇ ದೂರು ನೀಡಿಲ್ಲ. ಇದರರ್ಥ ಸಮಸ್ಯೆ ಇಲ್ಲ ಎಂದಾಯಿತು. ಎರಡು-ಮೂರು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಮಾರುತಿನಗರದಲ್ಲೂ ಶೀಘ್ರದಲ್ಲೇ ಕಾವೇರಿ ನೀರು ಪೂರೈಕೆ ಆಗಲಿದೆ’ ಎಂದು ಜಲಮಂಡಳಿ ಅಧಿಕಾರಿಯೊಬ್ಬರು ತಿಳಿಸುತ್ತಾರೆ.

* ವಿಜಯಕುಮಾರ ಚಂದರಗಿ 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.