ಕೈ ಶಾಸಕ ಎನ್.ವೈ.ಗೋಪಾಲಕೃಷ್ಣ ಸೆಳೆದ ರೆಡ್ಡಿ, ರಾಮುಲು
Team Udayavani, Apr 17, 2018, 2:17 PM IST
ಬಳ್ಳಾರಿ : ಕಾಂಗ್ರೆಸ್ನಿಂದ ಟಿಕೆಟ್ ತಪ್ಪಿರುವ ಬಳ್ಳಾರಿ ಗ್ರಾಮಾಂತರ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರನ್ನು ಸೆಳೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅವರಿಗೆ ಕೂಡ್ಲಿಗಿ ಕ್ಷೇತ್ರದ ಟಿಕೆಟ್ ನೀಡುವ ಭರವಸೆಗಳನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮೊಳಕಾಲ್ಮೂರು ಮತ್ತು ಬಳ್ಳಾರಿಯಲ್ಲಿ ಬೆಂಬಲಿಗರನ್ನು ಹೊಂದಿರುವ ಗೋಪಾಲಕೃಷ್ಣ ಸೇರ್ಪಡೆ ಕಾಂಗ್ರೆಸ್ಗೆ ಹೊಡೆತ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಸಂಸದ ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಅವರು ಸೋಮವಾರ ರಾತ್ರಿ ಗೋಪಾಲಕೃಷ್ಣ ಅವರ ನಿವಾಸಕ್ಕೆ ಆಗಮಿಸಿ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾದಿದ್ದಾರೆ.
ಬುಧವಾರ ಅವರು ಪಕ್ಷಕ್ಕೆ ಸೇರ್ಪಡೆಯಾಗಿ ಅಧಿಕೃತವಾಗಿ ಪ್ರಚಾರದಲ್ಲಿ ನಿರತರಾಗಲಿದ್ದಾರೆ ಎಂದು ಹೇಳಲಾಗಿದೆ.
ಬಳ್ಳಾರಿ ಗ್ರಾಮಾಂತರ ಮೀಸಲು ಕ್ಷೇತ್ರದಲ್ಲಿ ಬಿ.ನಾಗೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ.
ಗೋಪಾಲಕೃಷ್ಣ ಅವರು 2013 ರ ಚುನಾವಣೆಯಲ್ಲಿ ಮೊಳಕಾಲ್ಮೂರಿನಲ್ಲಿ ತಿಪ್ಪೇಸ್ವಾಮಿ ವಿರುದ್ದ ಸೋಲನುಭವಿಸಿದ್ದರು. ಬಳಿಕ ಶ್ರೀರಾಮುಲು ಸಂಸದರಾಗಿ ಆಯ್ಕೆಯಾಗಿ ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ಬಳಿಕ ತೆರವಾದ ಸ್ಥಾನಕ್ಕೆ ಸ್ಪರ್ಧಿಸಿ ಜಯ ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.