ಕೃಷಿಕರು, ಬಡವರಿಗೆ ಆದ್ಯತೆ ಕಡಿಮೆಯಾಗುತ್ತಿದೆ


Team Udayavani, Apr 18, 2018, 9:30 AM IST

Sinakar-Ullal-17-4.jpg

1983ರ ತನಕ ಸಿಪಿಐಎಂ ಪ್ರಾಬಲ್ಯ ಇದ್ದ ಉಳ್ಳಾಲ ಕ್ಷೇತ್ರ ಬಳಿಕ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೆ 1994ರ ಚುನಾವಣೆ ಉಳ್ಳಾಲದ ರಾಜಕೀಯ ಲೆಕ್ಕಾಚಾರವನ್ನೇ ಬದಲಾಯಿಸಿತು. ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸಿ ಬಿಜೆಪಿಯ ಜಯರಾಮ ಶೆಟ್ಟಿ ಶಾಸಕರಾದರು. ಈ ಸಂದರ್ಭದಲ್ಲಿ ಅಂದು ಕಾಂಗ್ರೆಸ್‌ ಮುಖಂಡರಾಗಿದ್ದ ಚಂದಪ್ಪ ಉಳ್ಳಾಲ ಅವರ ಪುತ್ರ ದಿನಕರ ಉಳ್ಳಾಲ ಪಕ್ಷೇತರರಾಗಿ ಎರಡೆಲೆ ಚಿಹ್ನೆಯಲ್ಲಿ ಸ್ಪರ್ಧಿಸಿ ಸೋತು ಪರೋಕ್ಷವಾಗಿ ಬಿಜೆಪಿ ಗೆಲುವಿಗೆ ಕಾರಣರಾಗಿದ್ದರು. ಮಾತಿನ ಮತದಲ್ಲಿ ಅವರು…

ಅಂದು ಸೋಲಿಗೆ ಕಾರಣವೇನು?
ಸೋಲು ನಿರೀಕ್ಷಿತವಾಗಿತ್ತು. ಆದರೆ ಪಕ್ಷೇತರನಾಗಿ ಅತ್ಯಧಿಕ ಮತ ಗಳಿಸಿದ್ದು ಬಳಿಕ ಯಾವುದೇ ಪಕ್ಷೇತರ ಅಭ್ಯರ್ಥಿ ಅಷ್ಟು ದೊಡ್ಡ ಪ್ರಮಾಣದಲ್ಲಿ ಮತ ಗಳಿಸಿಲ್ಲ.

ಈ ಬಾರಿ ನಿಮ್ಮ ರಾಜಕೀಯ ಲೆಕ್ಕಾಚಾರ ಹೇಗೆ ?
ಅಂದಿನ ಚುನಾವಣೆ ಬಳಿಕ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಬಳಿಕ ಉಳ್ಳಾಲ ಪಟ್ಟಣ ಪಂಚಾಯತ್‌ ಉಪಾಧ್ಯಕ್ಷ , ಪುರಸಭೆಯ ಅಧ್ಯಕ್ಷನಾಗಿ ಪಕ್ಷದಲ್ಲಿ ಜಿಲ್ಲಾ ಮಟ್ಟದ ಜವಾಬ್ದಾರಿ ನಿರ್ವಹಿಸಿದ್ದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯ ಸೌಹಾರ್ದ ವಾತಾವರಣ ಇಲ್ಲಿಲ್ಲ ಮತ್ತು ಕೃಷಿಕರಿಗೆ ಮತ್ತು ಬಡವರಿಗೆ  ಹೆಚ್ಚಿನ ಆದ್ಯತೆ ಲಭಿಸದಿರುವುದರಿಂದ ಕಳೆದ ಐದು ವರ್ಷಗಳಿಂದ ರಾಜಕೀಯದಿಂದ ದೂರವಿದ್ದು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ.

ಈ ಬಾರಿ ಸ್ಪರ್ಧಾಕಾಂಕ್ಷಿಯಾಗಿದ್ದಿರಾ ?
ತಮ್ಮ ಪಕ್ಷ ಸೇರುವಂತೆ ರಾಷ್ಟ್ರೀಯ ಪಕ್ಷಗಳಿಂದ ಆಹ್ವಾನ ಬಂದಿದೆ. ಆದರೆ ಈ ಬಾರಿ ಜಾತ್ಯತೀತ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಉತ್ಸುಕನಾಗಿದ್ದೇನೆ.

ನಿಮ್ಮ ಪ್ರಕಾರ ರಾಜ್ಯ ಮತ್ತು  ಕ್ಷೇತ್ರದಲ್ಲಿ ಈ ಬಾರಿಯ ಫಲಿತಾಂಶ ಹೇಗಿರಬಹುದು?
ರಾಜ್ಯದಲ್ಲಿ ಈ ಬಾರಿ ಅತಂತ್ರ ಸ್ಥಿತಿ ಸೃಷ್ಟಿಯಾಗುವ ಸಾಧ್ಯತೆ ಕಾಣಿಸುತ್ತಿದೆ. ಜೆಡಿಎಸ್‌ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯೇ ಹೆಚ್ಚು. ಕ್ಷೇತ್ರದಲ್ಲಿಯೂ ಈ ಬಾರಿ ಕಠಿನ ಸವಾಲುಗಳಿದ್ದು, ಜೆಡಿಎಸ್‌ ಮತ್ತು ಬಿಜೆಪಿಯ ಅಭ್ಯರ್ಥಿಯನ್ನು ಹೊಂದಿಕೊಂಡು ಫಲಿತಾಂಶದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.

ಹಿಂದಿನ ಚುನಾವಣಾ ಪ್ರಚಾರಕ್ಕೂ ಈಗಿನ ಪ್ರಚಾರ ವೈಖರಿಗೂ ವ್ಯತ್ಯಾಸ ?
ಹಿಂದೆ ಅಬ್ಬರದ ಪ್ರಚಾರವಿತ್ತು. ಹಣಕಾಸಿನ ವಿಚಾರ ಇರಲಿಲ್ಲ; ನೈಜ ಕಾರ್ಯಕರ್ತರಿದ್ದರು. ಈಗ ಧರ್ಮಾಧಾರಿತವಾಗಿ, ಜಾತಿ ಆಧಾರಿತವಾಗಿ ಚುನಾವಣೆ ಪ್ರಚಾರಗಳಾಗುತ್ತಿವೆ. ಚುನಾವಣಾ ನೀತಿಸಂಹಿತೆಯಿಂದ ಅಬ್ಬರಕ್ಕೆ ತೆರೆ ಬಿದ್ದಿದ್ದು, ಹಣಕ್ಕೆ ಪ್ರಾಮುಖ್ಯತೆ ಬಂದಿದೆ.

– ದಿನಕರ ಉಳ್ಳಾಲ, ಉಳ್ಳಾಲ ಕ್ಷೇತ್ರದಲ್ಲಿ 1994ರಲ್ಲಿ ಪಕ್ಷೇತರ ಪರಾಜಿತ ಅಭ್ಯರ್ಥಿ

— ವಸಂತ ಕೊಣಾಜೆ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.