ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಒಣಗಿದ ಮರ 


Team Udayavani, Apr 18, 2018, 11:43 AM IST

18-April-9.jpg

ಗಂಜಿಮಠ : ಮಂಗಳೂರು- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗಂಜಿಮಠದಲ್ಲಿ ಒಣಗಿದ ಮಾವಿನ ಮರದ ತುಂಡುಗಳು ಹೆದ್ದಾರಿಗೆ ಬೀಳುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಈ ಮಾವಿನ ಮರ ಹೆದ್ದಾರಿಗೆ ತಾಗಿಕೊಂಡೇ ಇದೆ. 5 ತಿಂಗಳ ಹಿಂದೆ ಈ ಮರ ಕ್ಕೆ ಬೆಂಕಿ ತಗುಲಿದ್ದು, ಅಗ್ನಿಶಾಮಕದಳದವರು ಬಂದು ನಂದಿಸಿದ್ದರು. ಬಳಿಕ ಈ ಮರ ಒಣಗುತ್ತಾ ಬಂದಿದೆ. ಎರಡು ತಿಂಗಳ ಹಿಂದೆ ಇದರ ಗೆಲ್ಲುಗಳು ತುಂಡಾಗಿ ಹೆದ್ದಾರಿ ಮೇಲೆ ಬಿದ್ದಿತ್ತು.

ಪ್ರತಿ ಸಲ ತಪ್ಪಿದ ದುರಂತ
ಕಳೆದ ಎರಡು ತಿಂಗಳಿನಿಂದ ಈ ಮರದ ಗೆಲ್ಲುಗಳು ಹೆದ್ದಾರಿಗೆ 5 ಬಾರಿ ಬಿದ್ದಿದೆ. ಪ್ರತಿ ಬಾರಿ ವಾಹನ ಹೋದ ಮೇಲೆ ಗೆಲ್ಲುಗಳು ಬಿದ್ದಿತ್ತು. ಶುಕ್ರವಾರ ಮಧ್ಯಾಹ್ನ 1ಗಂಟೆಯ ವೇಳೆಯಲ್ಲಿ ಒಣಗಿದ ಗೆಲ್ಲೊಂದು ಸ್ಕೂಟರ್‌ ಹೋದ ಅನಂತರ ಬಿದ್ದಿತ್ತು. 

ಸ್ವಲ್ಪದರಲ್ಲೇ ದುರಂತವೊಂದು ತಪ್ಪಿದಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಇದು ಆಗಿರುವ ಕಾರಣ ಇಲ್ಲಿ ವಾಹನಗಳು ವೇಗವಾಗಿ ಸಂಚರಿಸು ತ್ತವೆ. ಆ ವೇಳೆ ಮರದ ಗೆಲ್ಲು ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಅಲ್ಲದೇ ಈ ಮರದ ಸಮೀಪದಲ್ಲಿಯೇ ವಿದ್ಯುತ್‌ ಕಂಬ, ಎಚ್‌ಟಿ ತಂತಿಗಳು ಹಾದು ಹೋಗುತ್ತಿದ್ದು ಅಪಾಯದ ಸಾಧ್ಯತೆಯನ್ನು ಹೆಚ್ಚು ಮಾಡಿದೆ. ಈ ಮರ ತೆರವಿಗೆ ಈಗಾಗಲೇ ಗಂಜಿಮಠ ಗ್ರಾಮ ಪಂಚಾಯತ್‌ನ ಅಧಿಕಾರಿಗಳ ಗಮನ ತರಲಾಗಿದೆ. ಪಂಚಾಯತ್‌ನಿಂದ ಮರ ಕಡಿಯಲು ಸಾಧ್ಯವಿಲ್ಲ. ಅವರು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ ಎನ್ನುತ್ತಾರೆ ಗ್ಯಾರೇಜ್‌ನಲ್ಲಿ ಕೆಲಸ ಮಾಡುವ ಕಾರ್ಮಿಕ ಚಂದ್ರಹಾಸ.

ಮರದ ಬಗ್ಗೆ ಹಾಗೂ ಇದರಿಂದ ಸಂಭವಿಸಬಹುದಾದ ಅಪಾಯದ ಬಗ್ಗೆ ಗ್ರಾಮ ಪಂಚಾಯತ್‌ನಿಂದ ಯಾವುದೇ ಮನವಿ ಬಂದಿಲ್ಲ. ವರದಿ ಬಂದ ಬಳಿಕ ಮರ ಕಡಿಯಲು ಕ್ರಮಕೈಗೊಳ್ಳುವುದಾಗಿ ಕೈಕಂಬ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಧೀರ್‌ ತಿಳಿಸಿದ್ದಾರೆ.

ತಿರುವಿನಲ್ಲಿರುವ ಮರ
ಮೂಡಬಿದಿರೆ ಕಡೆಯಿಂದ ಮಂಗಳೂರಿಗೆ ಬರು ವಾಗ ಸಿಗುವ ತಿರುವಿನ ಬಲಬದಿಯಲ್ಲಿರುವ ಈ ಮರ ಎದುರು ಬರುವ ವಾಹನ ಸವಾರರಿಗೆ ಕಾಣುವುದಿಲ್ಲ. ಅಲ್ಲದೇ ಹೆದ್ದಾರಿಯಲ್ಲಿ ಎತ್ತು ತಗ್ಗುಗಳೂ ಇವೆ. ಈಗಾಲೇ ಇಲ್ಲಿ ಎರಡು ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿದ್ದರು. 

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.