ಜಗತ್ತಿನ ಉದ್ಧಾರಕ್ಕೆ ಬುದ್ಧನ ತತ್ವಗಳು ಅನಿವಾರ್ಯ


Team Udayavani, Apr 18, 2018, 12:46 PM IST

m5 jagattina.jpg

ಮೈಸೂರು: ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಎಲ್ಲಾ ಕಾಲಕ್ಕೂ ಸಲ್ಲುವವರಾಗಿದ್ದು, ವಿಶ್ವಕ್ಕೆ ಇಂದಿಗೂ ಬಸವಣ್ಣ ಪ್ರಸ್ತುತವಾದರೆ, ಜಗತ್ತಿನ ಉದ್ಧಾರಕ್ಕೆ ಬುದ್ಧನ ತತ್ವಾದರ್ಶನಗಳು ಅನಿವಾರ್ಯ ಎಂದು ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಂವಹನ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಪಿ.ಮಹೇಶ್‌ ಚಂದ್ರಗುರು ಹೇಳಿದರು.

ಮೈಸೂರು ವಿವಿ ಸಮಾಜ ಕಾರ್ಯ ಅಧ್ಯಯನ ವಿಭಾಗದಿಂದ ಮಂಗಳವಾರ ಆಯೋಜಿಸಿದ್ದ ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಕತ್ತಲು ಹಾಗೂ ಅಜ್ಞಾನದಲ್ಲಿ ಸಿಲುಕಿದ್ದ ಭಾರತೀಯರನ್ನು ಪರಿವರ್ತನೆಯತ್ತ ಕೊಂಡೊಯ್ಯುವ ಜತೆಗೆ ಮಹಿಳೆಯರಿಗೆ ಸಮಾನತೆ ನೀಡಿದ ಕೀರ್ತಿ ಬುದ್ಧನಿಗೆ ಸಲ್ಲುತ್ತದೆ. ಹೀಗಾಗಿ ವಿಶ್ವದ ರಕ್ಷಣೆ ಬುದ್ಧನಿಂದಲೇ ಆಗಲಿದೆ ಎಂಬುದು ಅನಿವಾರ್ಯ ಎಂದು ಹೇಳಿದರು. 

ಪ್ರಜ್ಞಾವಂತರ ಕೊರತೆ: ಇಂದು ವಿಶ್ವದ ನಾಗರಿಕತೆ ಬೆಳೆದಿದ್ದರೂ, ಹೃದಯವಂತಿಕೆ ಬೆಳೆದಿಲ್ಲ. ಬುದ್ದಿವಂತರು ಸಾಕಷ್ಟು ಸಂಖ್ಯೆಯಲ್ಲಿ ಬೆಳೆದರೂ, ಪ್ರಜ್ಞಾವಂತರ ಕೊರತೆ ಇದೆ. ಅಲ್ಲದೆ ಸಮಾಜದಲ್ಲಿ ಸ್ವಾರ್ಥ ಮನೋಭಾವ ಹೆಚ್ಚಾಗಿದ್ದು, ಅನ್ಯರ ಉದ್ಧಾರಕ್ಕಾಗಿ ಶ್ರಮಿಸುವವರ ಸಂಖ್ಯೆ ಕಡಿಮೆ ಆಗಿದೆ.

ಈ ಎಲ್ಲದರ ಪರಿಣಾಮ ಆಧುನಿಕತೆ ಎಂಬುದು ಪಾಶ್ಚಾತ್ಯವಾಗಿದ್ದು, ಪಾಶ್ಚಿಮಾತ್ಯ ಎಂಬುದೇ ಆಧುನಿಕತೆಯಾಗಿದೆ. ಇಂತಹ ಕವಲುದಾರಿಯ ಸಂದರ್ಭದಲ್ಲಿ ಜಗತ್ತಿನ ಉದ್ಧಾರಕ್ಕೆ ಬುದ್ಧನ ಸಂದೇಶಗಳು ಅನಿವಾರ್ಯವಾಗಿದೆ ಎಂದರು. ಇಂದು ಸಮಾಜದ ಬುದ್ಧನ ಯೋಗ ಸಂಸ್ಕೃತಿಯನ್ನು ಮರೆತು ಪಾಶ್ಚಿಮಾತ್ಯರ ಭೋಗ ಸಂಸ್ಕೃತಿಯತ್ತ ಸಾಗುತ್ತಿರುವುದು ಮಾರಕ ಬೆಳವಣಿಗೆ.

ಸಮಾಜದಲ್ಲಿಂದು ಬುದ್ಧ, ಬಸವ ಹಾಗೂ ಅಂಬೇಡ್ಕರ್‌ರಂತಹ ಮಹನೀಯರನ್ನು ಕಡೆಗಣಿಸಲಾಗುತ್ತಿದೆ. ಇಂದಿನ ಯುವಜನತೆ ಹಾಗೂ ಜಗತ್ತಿಗೆ ಬುದ್ಧನ ಸಂದೇಶದ ಅಗತ್ಯವಿದೆ. ಜಗತ್ತಿನಲ್ಲಿ ಜಾತಿ ರಾಜಕೀಯ ಮಾಡಿದವರ್ಯಾರು ಉದ್ಧಾರವಾಗಿಲ್ಲ. ಸಮಾಜದಲ್ಲಿ ಜನರನ್ನು ಒಗ್ಗೂಡಿಸಬೇಕಿದ್ದು, ಸಮಾಜವನ್ನು ಒಡೆಯಬಾರದು. ಜಾತೀವಾದ ಶಾಶ್ವತವಲ್ಲ ಕೇವಲ ಕಾಲ್ಪನಿಕ ಎಂದು ಹೇಳಿದರು.

ಮನುಕುಲಕ್ಕೆ ಸೀಮಿತ: 12ನೇ ಶತಮಾನದಲ್ಲಿ ಕಲ್ಯಾಣ ಕರ್ನಾಟಕವನ್ನು ನಿರ್ಮಿಸಿದ ಬಸವಣ್ಣ, ಕೇವಲ ವೀರಶೈವ, ಲಿಂಗಾಯತ ಧರ್ಮಕ್ಕೆ ಸೀಮಿತವಾಗದೆ, ಇಡೀ ಮನುಕುಲಕ್ಕೆ ಸೀಮಿತವಾಗಿದ್ದಾರೆ. ಅಲ್ಲದೆ ಅಂತರ್ಜಾತಿ ವಿವಾಹದ ಮೂಲಕ ಸಮಾಜದಲ್ಲಿ ಜಾತಿವಿನಾಶಕ್ಕೆ ಬಸವಣ್ಣ ಶ್ರಮಿಸಿದ್ದು, ದೇಶದಲ್ಲಿರುವ ಜಾತಿ ವಿನಾಶವಾದರೆ ಅಮೆರಿಕಾ, ರಷ್ಯಾ, ಚೀನಾ ರಾಷ್ಟ್ರಗಳನ್ನು ಮೀರಿಸಬಹುದಾಗಿದೆ.

ಇಂದು ಬಸವಣ್ಣನ ಹೆಸರಿನಲ್ಲಿ ರಾಜಕೀಯ ಮಾಡಲಾಗುತ್ತಿದ್ದು, ಲಿಂಗಾಯತ ಮತ್ತು ವೀರಶೈವರನ್ನು ಇಬ್ಭಾಗ ಮಾಡಲಾಗುತ್ತಿದೆ. ಆದರೆ ಈ ಇಬ್ಬರೂ ಬಸವಣ್ಣನ ಅನುಸರಿಸಬೇಕಿದ್ದು, ಇಲ್ಲವಾದಲ್ಲಿ ವೀರಶೈವರು ಯಾರಿಗೂ ಬೇಡದ ಶೋಷಿತರಾಗುವುದು ಕಟ್ಟಿಟ್ಟಬುತ್ತಿ ಎಂದರು.

ಕಾರ್ಯಕ್ರಮದಲ್ಲಿ ಎಂಬಿಎ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಡಿ.ಆನಂದ್‌, ಸಮಾಜಕಾರ್ಯ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ಆರ್‌.ಶಿವಪ್ಪ, ಸಹಾಯಕ ಪ್ರಾಧ್ಯಾಪಕರಾದ ಚಂದ್ರಮೌಳಿ, ಡಾ.ಎಚ್‌.ಪಿ.ಜ್ಯೋತಿ ಹಾಜರಿದ್ದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.