ಬಂಡಾಯದ ನೆಲ ನವಲಗುಂದದಲ್ಲಿ ಗಡ್ಡಿ, ದ್ಯಾಮಕ್ಕನವರ ಕಹಳೆ


Team Udayavani, Apr 18, 2018, 12:47 PM IST

h4.jpg

ನ‌ವಲಗುಂದ: ಮೂರು ಬಾರಿ ಸೋತಿದ್ದೇನೆಂದು ನನಗೆ ಟಿಕೆಟ್‌ ನೀಡಿಲ್ಲ. ಆದರೆ ಅಜೀಂಪೀರ ಖಾದ್ರಿ ಮತ್ತು ಆರ್‌.ಬಿ. ತಿಮ್ಮಾಪುರ ಮೂರು ಬಾರಿ  ಸೋತರೂ ಅವರಿಗೆ ಟಿಕೆಟ್‌ ನೀಡಿದ್ದಾರೆ. ತಿಮ್ಮಾಪುರ ಸೋತಾಗ ಎಂಎಲ್‌ಸಿ ಮಾಡಿದ್ದರು. ಆದರೆ ನನಗೆ ಯಾವುದೇ ಹುದ್ದೆ ಕೇಳಿಲ್ಲ, ಕೇವಲ ಪಕ್ಷದ  ಟಿಕೆಟ್‌ ಮಾತ್ರ ಕೇಳಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್‌. ಗಡ್ಡಿ ಹೇಳಿದರು. 

ಪಟ್ಟಣದ ತಮ್ಮ ಹತ್ತಿ ಜಿನ್ನಿಂಗ್‌ ಫ್ಯಾಕ್ಟರಿಯಲ್ಲಿ ಅಭಿಮಾನಿಗಳ  ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನಿಷ್ಠೆಯಿಂದ ದುಡಿದಿದ್ದೇನೆ. ಆದರೆ, ಪಕ್ಷ ಮತ್ತು  ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ನನಗೆ ಮೋಸವಾಗಿದೆ ಎಂದು ವಿಷಾದಿಸಿದರು. 

ಪಕ್ಷದಲ್ಲಿದ್ದುಕೊಂಡೇ ನನ್ನ ಬೆನ್ನಿಗೆ ಚೂರಿ ಹಾಕಿರುವವರು ಬಹಳ  ಜನ ಇದ್ದಾರೆ. ಆದರೆ, ನಾನು ಯಾರೊಬ್ಬರಿಗಾದರೂ ಮೋಸ, ವಂಚನೆ ಮಾಡಿದ್ದರೆ ಅಥವಾ ಜಾತಿ ಆಧಾರದ ಮೇಲೆ ಇವನಿಗೆ ಮತ ಹಾಕಿ-ಹಾಕಬೇಡಿ  ಎಂದಿದ್ದರೆ ಒಬ್ಬರನ್ನಾದರೂ ತೋರಿಸಿ ಎಂದು ಸವಾಲು ಹಾಕಿದರು. 

ನನ್ನ ಪಕ್ಷ ನಿಷ್ಠೆಗೆ ಬೇರೆಯ ಪ್ರಮಾಣ ಪತ್ರ ಬೇಕಿಲ್ಲ. ಮುಂದಿನ ದಿನಗಳಲ್ಲಿ ನನ್ನ  ಅಭಿಮಾನಿಗಳಲ್ಲಿ ಒಬ್ಬರನ್ನು ಶಾಸಕರನ್ನಾಗಿ ಮಾಡುವ ತಾಕತ್ತು ನನ್ನಲ್ಲಿ ಇದೆ. ಅಭಿಮಾನಿಗಳು ಸ್ವಲ್ಪ ದಿನ ಕಾಯಬೇಕು. ನಾನು ಯಾರಿಗೂ ನನ್ನ  ಪರವಾಗಿ ರಾಜೀನಾಮೆ ನೀಡುವಂತೆ ಹೇಳಲ್ಲ ಎಂದರು.

ಜಿಲ್ಲಾಧ್ಯಕ್ಷ ಎಚ್‌.ವಿ. ಮಾಡಳ್ಳಿ. ಬಿ.ಕೆ. ಮಹೇಶ, ಸದುಗೌಡ ಪಾಟೀಲ, ವೆಂಕಮ್ಮ ಚಾಕಲಬ್ಬಿ, ಎ.ಎಂ. ನದಾಫ್‌ ಮಾತನಾಡಿ, ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಎಂದರೆ ಗಡ್ಡಿಯವರು, ಗಡ್ಡಿಯವರೆಂದರೆ ಕಾಂಗ್ರೆಸ್‌ ಪಕ್ಷ ಎಂಬುದಾಗಿದೆ. ಚುನಾವಣೆ ನಿಮ್ಮ ನೇತೃತ್ವದಲ್ಲೇ ಎದುರಿಸೋಣ. ಪಕ್ಷದಲ್ಲಿ ನಿಮ್ಮ ಗೌರವಕ್ಕೆ ಧಕ್ಕೆ ಬರದಂತೆ ಹಿರಿಯ ಮುಖಂಡರೊಂದಿಗೆ ಚರ್ಚಿಸಿ  ಸ್ಥಾನಮಾನ ದೊರಕಿಸಿ ಕೊಡುತ್ತೇವೆ ಎಂದರು. ಗಡ್ಡಿ ಅವರು ಅದಕ್ಕೂ ಒಪ್ಪಲಿಲ್ಲ. 

ಗಡ್ಡಿ ನೇತೃತ್ವದಲ್ಲೇ ಚುನಾವಣೆ
ನವಲಗುಂದ:
ಕೆ.ಎನ್‌.ಗಡ್ಡಿ ಪಕ್ಷಕ್ಕೆ ರಾಜೀನಾಮೆ ನೀಡಿದರೂ ಅವರನ್ನು ಮತ್ತೆ ಕರೆತಂದು ಅವರ ನೇತೃತ್ವದಲ್ಲೇ ವಿಧಾನಸಭಾ ಚುನಾವಣೆ ಎದುರಿಸಲಿದ್ದೇವೆ  ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ವಿ. ಮಾಡಳ್ಳಿ ಹೇಳಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಾನಂದ  ಕರಿಗಾರ ಅವರು ಪಕ್ಷ ಸೇರ್ಪಡೆಗೊಂಡ ಸಂದರ್ಭದಲ್ಲಿ ಅವರಿಗೆ ಟಿಕೆಟ್‌ ನೀಡಬಾರದು, ನಮ್ಮ ಹತ್ತು ಜನರಲ್ಲಿ ಯಾರಾದರೂ ಒಬ್ಬರಿಗೆ ಟಿಕೆಟ್‌ ನೀಡಿದರೂ ಎಲ್ಲರೂ ಕೂಡಿಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಮಾತುಕತೆ ನಡೆಸಲಾಗಿತ್ತು. ಮಾಜಿ ಸಚಿವರ ನೇತೃತ್ವದಲ್ಲಿ ಚುನಾವಣೆ  ನಡೆಸಬೇಕೆಂದು ಈ ಮೊದಲೇ ನಿರ್ಧರಿಸಲಾಗಿತ್ತು.

ಮಾಜಿ ಸಚಿವ ಕೆ.ಎನ್‌. ಗಡ್ಡಿ ಹಿರಿಯ ಮುತ್ಸದ್ದಿ ರಾಜಕಾರಣಿ. ಅವರಿಗೆ ಪಕ್ಷದ ಟಿಕೆಟ್‌ ನೀಡಿದರೆ ಈ  ಬಾರಿ ಗೆಲುವು ಸಾಧಿಸಲಿದ್ದಾರೆಂದು ಎಲ್ಲ ಹಿರಿಯ ಮುಖಂಡರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಲಾಗಿತ್ತು. ಆದರೆ  ಹೈಕಮಾಂಡ್‌ ಯುವಕರಿಗೆ ಆದ್ಯತೆ ನೀಡುವ ದೃಷ್ಟಿಯಿಂದ ವಿನೋದ ಅಸೂಟಿ ಅವರಿಗೆ ಟಿಕೆಟ್‌ ನೀಡಿದೆ. ಎಲ್ಲರೂ ಕೂಡಿಕೊಂಡು ಕಾಂಗ್ರೆಸ್‌ ಜಯ ಗಳಿಸಲು ಶ್ರಮಿಸೋಣ ಎಂದು ಹೇಳಿದರು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.