ಮತಯಾಚನೆಗೆ ಪಾದಯಾತ್ರೆ !


Team Udayavani, Apr 19, 2018, 6:20 AM IST

Election-campaign-Dakshina.jpg

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಸ್ವಾರಸ್ಯವಾಗಿರುತ್ತದೆ. ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಎಷ್ಟೊಂದು ತೀವ್ರವಾಗಿದ್ದರೂ ಪ್ರಚಾರ ಕಾರ್ಯ ಮಾತ್ರ ಶಾಂತಿಯುತವಾಗಿ ನಡೆಯುವುದು ಇಲ್ಲಿನ ವೈಶಿಷ್ಟé. ಮತದಾನದ ಪ್ರಕ್ರಿಯೆಯೂ ಇಲ್ಲಿ ಶಾಂತಿಯುತ ವಾಗಿಯೇ ಇರುತ್ತದೆ. ಆದ್ದರಿಂದ ಇಲ್ಲಿನ ಚುನಾವಣಾ ರಾಜಕೀಯ ಪರಂಪರೆ ಶ್ಲಾಘನೀಯವಾಗಿದೆ.

ವಿವಿಧ ಪಕ್ಷಗಳ ರಾಷ್ಟ್ರೀಯ – ರಾಜ್ಯ ನಾಯಕರು ಈ ಪ್ರದೇಶಕ್ಕೆ ಸ್ವಾತಂತ್ರ್ಯಪೂರ್ವ ದಿನಗಳಿಂದಲೇ ಮಹತ್ವ ನೀಡು
ತ್ತಿದ್ದರು. ಈ ಬಾರಿಯೂ  ಈ ಪರಂಪರೆ ಮುಂದುವರಿಯುತ್ತಿದೆ. ಇನ್ನು ಚುನಾವಣೆ ಪ್ರಕ್ರಿಯೆ ಆರಂಭವಾದ ಬಳಿಕ ಮತ್ತಷ್ಟು ರಾಷ್ಟ್ರೀಯ ನಾಯಕರನ್ನು ನಿರೀಕ್ಷಿಸಲಾಗುತ್ತಿದೆ.ಸಾರ್ವಜನಿಕ ಸಭೆಗಳು ಜಿಲ್ಲೆಯಾದ್ಯಂತ ಸಂಘಟನೆ ಯಾಗುತ್ತಿದ್ದು ಪ್ರಭಾವೀ ನಾಯಕರು ಇರುವಲ್ಲಿ ಹೆಚ್ಚಿನ ಸಭೆಗಳು ಸಾಮಾನ್ಯ.

90ರ ದಶಕದಲ್ಲಿ ಆಗಿನ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್‌.  ಶೇಷನ್‌ ಅವರು ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದರು. ಅದಕ್ಕೆ ಮೊದಲು, ಜಿಲ್ಲೆಯಲ್ಲಿ ನಡುರಾತ್ರಿ ಕಳೆದು ಮುಂಜಾನೆಯ ವೇಳೆಗೂ ಸಾರ್ವಜನಿಕ ಸಭೆಗಳು ವಿಸ್ತರಣೆಯಾದ ಘಟ‌ನೆಗಳು ಸಂಭವಿಸಿದ್ದವು.

ಶೇಷನ್‌ ಪರಿಣಾಮವೆಂದರೆ ಈ ಎಲ್ಲ ದುಂದುವೆಚ್ಚಗಳ ನಿಯಂತ್ರಣ. ಸಂಜೆ ಏಳರೊಳಗೆ ಸಾರ್ವಜನಿಕ ಪ್ರಚಾರ ಸಭೆಗಳ ಮುಕ್ತಾಯ. ಪ್ರತೀ ದಿನ ಅಭ್ಯರ್ಥಿಗಳು ತಮ್ಮ ಖರ್ಚು ವೆಚ್ಚಗಳ ಬಗ್ಗೆ ಮಾಹಿತಿ ದಾಖಲಿಸುವ ಅನಿವಾರ್ಯತೆ. ನೀತಿಸಂಹಿತೆ ಉಲ್ಲಂಘಿಸಿದರೆ ಚುನಾ ವಣಾ ಆಯೋಗದಿಂದ ಶಿಸ್ತುಕ್ರಮ.

ಸರಕಾರಿ ವಾಹನಗಳ (ದುರ್‌) ಬಳಕೆಗೆ ನಿಷೇಧ. ಇವೆಲ್ಲವು ಗಳಿಂದಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಪ್ರಚಾರದ ಶೈಲಿಯೇ ಬದಲಾಯಿತು. ಮೊದಲೇ ಶಾಂತಿ ಯುತವಾಗಿದ್ದ ಪರಂಪರೆ ಮತ್ತಷ್ಟು ಶಿಸ್ತುಬದ್ಧವಾಯಿತು.

ಪಾದಯಾತ್ರೆ
90ರ ದಶಕದಲ್ಲಿ ಜಿಲ್ಲೆಯಲ್ಲಿ ಹೆಚ್ಚು ಪ್ರಚಲಿತ ವಾದದ್ದು ಚುನಾವಣಾ ಸಂದರ್ಭದ ಪಾದಯಾತ್ರೆ. ಬಹುತೇಕ ಅಭ್ಯರ್ಥಿಗಳು ಪಾದಯಾತ್ರೆಯ ಕ್ರಮವನ್ನು ಇಲ್ಲಿ ರೂಢಿಸಿಕೊಂಡರು. ಈ ಮೂಲಕ ಮನೆ ಮನೆಗಳಿಗೆ ತೆರಳಿ ಮತದಾರರನ್ನು ಭೇಟಿಯಾಗತೊಡಗಿದರು. ಈ ಮೂಲಕ ಅಭ್ಯರ್ಥಿಗಳಿಗೆ ಮತದಾರರೊಂದಿಗೆ ನೇರ ಸಂವಹನ ನಡೆಸಲು ಸಾಧ್ಯವಾಯಿತು. ಮತದಾರರು ಕೂಡ ತಮ್ಮ ಸಮಸ್ಯೆಗಳನ್ನು (ಪರಿಹಾರದ ವಿಷಯ ತಾರ್ಕಿಕ) ನೇರವಾಗಿ ಅಭ್ಯರ್ಥಿಗಳಲ್ಲಿ ಹೇಳಿಕೊಳ್ಳಲು ಸಾಧ್ಯವಾಯಿತು. ಕಡಿಮೆ ಮತದಾರರಿರುವ ಕ್ಷೇತ್ರಗಳಲ್ಲಿ ಇದು ಹೊಸ ಜಾಗೃತಿಯನ್ನು ಮೂಡಿಸುವಲ್ಲಿಯೂ ಸಫಲವಾಯಿತು. ಅಭ್ಯರ್ಥಿಗಳು ಕೂಡ ಈ ಮೂಲಕ ಸಾಕಷ್ಟು ಸಾಮಾಜಿಕ ಕಾಳಜಿಯನ್ನು ರೂಢಿಸಿಕೊಳ್ಳಲು ಸಾಧ್ಯವಾಯಿತು. ವಿಸ್ತಾರವಾದ ಕ್ಷೇತ್ರಗಳಲ್ಲಿ ಇದು ಸುಲಭ ಸಾಧ್ಯವಲ್ಲವಾದರೂ ಅಂತಹ ಪ್ರದೇಶಗಳಲ್ಲಿ ಸಾರ್ವಜನಿಕ ಸಭೆಗಳ ಮೂಲಕ ಅಭ್ಯರ್ಥಿಗಳು, ಮತದಾರರ ನಡುವಣ ಸಂವಹನ ಸಾಧ್ಯವಾಗುತ್ತದೆ.

ವಿಜೇತ-ಪರಾಜಿತರೆನ್ನದೆ ಅಭ್ಯರ್ಥಿಗಳು ಚುನಾವಣೆಯ ಬಳಿಕವೂ ನಿರ್ದಿಷ್ಟ ಪ್ರದೇಶಗಳ ಮೂಲ ಸೌಕರ್ಯಗಳ ಬಗ್ಗೆ ಸ್ಪಂದಿಸಿದ ಮತ್ತು ಸ್ಪಂದಿಸುತ್ತಿರುವ ನಿದರ್ಶನಗಳಿವೆ. ಇದು 90ರ ದಶಕದ ಪಾದಯಾತ್ರೆ ಪರಿಕಲ್ಪನೆಯಿಂದಾದ ಲಾಭ. 

ಅಂದ ಹಾಗೆ …
ಈ ಬಾರಿ ಸ್ಪರ್ಧಿಸಲು ತೀವ್ರ ಆಕಾಂಕ್ಷಿಯಾಗಿರುವ “ಅವರು’ ತಮ್ಮ ಪರವಾಗಿ ಬೆಂಬಲಿಗರಿಂದ, ಕೆಲವು ನಾಯಕರ ಮೂಲಕ ಪಕ್ಷದ ವರಿಷ್ಠರಿಗೆ ಸತತವಾಗಿ ಶಿಫಾರಸು ಪತ್ರಗಳನ್ನು ಕಳುಹಿಸುತ್ತಿದ್ದಾರೆ. ಕೆಲವು ಪತ್ರಗಳಲ್ಲಿ “ಅವರು’ ಜಯಿಸಿದರೆ ಕನಿಷ್ಠ ಐದು ಲಕ್ಷ ಮತಗಳ ಅಂತರದಿಂದ ಜಯಿಸುವರೆಂದು ಶಿಫಾರಸು ಮಾಡಲಾಗಿದೆ. ನಿಜಕ್ಕಾದರೆ, ಪ್ರಸ್ತುತ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆಯೇ ಎರಡು ಲಕ್ಷ ಮೀರಿಲ್ಲ !

 - ಮನೋಹರ ಪ್ರಸಾದ್‌

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.