‘ಶೇ. 85ಕ್ಕೂ ಹೆಚ್ಚು ಮತದಾನವಾಗಲು ಶ್ರಮಿಸಿ’


Team Udayavani, Apr 19, 2018, 11:35 AM IST

19-April-6.jpg

ಬೆಳ್ತಂಗಡಿ: ತಾ|ನಲ್ಲಿ ಈ ಬಾರಿ ಶೇ. 85ಕ್ಕಿಂತಲೂ ಹೆಚ್ಚು ಮತ ದಾನವಾಗಲು ಮತದಾನ ಜಾಗೃತಿ ಸಮಿತಿ ಸದಸ್ಯರು ಶ್ರಮಿಸಬೇಕು. ಪ್ರತಿ ಮತಗಟ್ಟೆಗಳಲ್ಲಿ ಮತದಾರರು ಭಾಗವಹಿಸಿ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯ ಮಾಡಬೇಕಿದೆ ಎಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ ಹೇಳಿದರು.

ಅವರು ಚುನಾವಣೆ ಪ್ರಯುಕ್ತ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಭಾರತ ಚು.ಆಯೋಗ, ದ.ಕ. ಜಿಲ್ಲಾ ಸ್ವೀಪ್‌ ಸಮಿತಿ, ಸೆಕ್ಟರ್‌ ಅಧಿಕಾರಿಗಳು, ತಾ| ಆರೋಗ್ಯಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತದ ಎಲ್ಲ ಬಿಎಲ್‌ಒಗಳು ಹಾಗೂ ಬ್ಯಾಗ್‌ ತಂಡದ ಸದಸ್ಯರಿಗೆ ಹಮ್ಮಿಕೊಂಡಿದ್ದ ಬನ್ನಿ ಮತದಾನ ಕೇಂದ್ರಕ್ಕೆ ಇವಿಎಂ ಹಾಗೂ ವಿವಿ ಪ್ಯಾಟ್‌ ಬಳಕೆ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲೂಕಿನಲ್ಲಿ ಹೆಚ್ಚಿನ ಮತದಾನ ನಡೆಯುವಂತೆ ಮಾಡಲು ಬಿಎಲ್‌ ಒಗಳು ಸಹಿತ ಬ್ಯಾಗ್‌ ಸಮಿತಿ ಸದಸ್ಯರು ಶ್ರಮಿಸಬೇಕು. ಮುಖ್ಯವಾಗಿ ಚುನಾವಣೆಗೂ ಮುನ್ನವೇ ಅಣಕು ಮತದಾನ ಮಾಡುವ ಮೂಲಕ ಜನರು ಮತದಾನ ಧೈರ್ಯವಾಗಿ ಮಾಡಲು ಪ್ರೇರಣೆ ನೀಡಬೇಕು. ಜನರು ಹೆಚ್ಚಾಗಿ ಸೇರುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮತದಾನದ ಆರಿವು ಮೂಡಿಸಬೇಕು. ಜಾತ್ರೆ, ಸಭೆ, ಸಮಾರಂಭಗಳಲ್ಲಿ ಅರಿವು ಮೂಡಿಸುವ ಕಾರ್ಯ ನಡೆಸಬೇಕು. ಹಿರಿಯರು, ಅಂಗವಿಕಲರು ಮತಗಟ್ಟೆಗೆ ಆಗಮಿಸಿದಲ್ಲಿ ವಿಶೇಷ ಕಾಳಜಿ ವಹಿಸಿ ಅವರಿಗೆ ಪ್ರಥಮ ಪ್ರಾತಿನಿಧ್ಯ ನೀಡಬೇಕು. ಸಂವಿಧಾನಬದ್ಧ ಹಕ್ಕುಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು ಎಂದರು.

ಆತುರ ತೋರದಿರಿ
ಮತಯಂತ್ರದ ಬಗ್ಗೆ ಅಪಸ್ವರ ಕೇಳಿಬಂದ ಹಿನ್ನೆಲೆ ವಿವಿ ಪ್ಯಾಟ್‌ ಯಂತ್ರ ಈ ಬಾರಿ ಚುನಾವಣೆಯಲ್ಲಿ ಉಪಯೋಗಿಸಲಾಗುತ್ತಿದೆ. ಇದು ಮುದ್ರಣ ಯಂತ್ರದಂತೆ ಕಾರ್ಯ ನಿರ್ವಹಿಸಲಿದೆ. ಮತದಾನ ವೇಳೆ ಯಾರೂ ಆತುರ ತೋರಬಾರದು. ಇವಿಎಂ ಯಂತ್ರದಲ್ಲಿ ಮತ ಹಾಕಿದ ಬಳಿಕ ವಿವಿ ಪ್ಯಾಟ್‌ನಲ್ಲಿ ಮತ ಚಲಾಯಿಸಿದ ದೃಢೀಕರಣ ಲಭಿಸುತ್ತದೆ. 7 ಸೆಕುಂಡುಗಳ ದೃಢೀಕರಣ ಮತದಾರರಿಗೆ ಕಾಣಲಿದ್ದು, ಬಳಿಕ ಪೆಟ್ಟಿಗೆಯೊಳಗೆ ಮುದ್ರಣಗೊಂಡು ಶೇಖರಣೆಯಾಗಲಿದೆ. ಮತದಾನ ಪ್ರಕ್ರಿಯೆ ಮುಗಿದ ಬಳಿಕ ಯಾವುದಾದರೂ ಒಂದು ಬೂತ್‌ನ ಮತದಾನದ ಕುರಿತು ಪರಿಶೀಲಿಸುವ ಕಾರ್ಯವೂ ನಡೆಯಲಿದೆ ಎಂದರು. 

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಚುನಾವಣಾಧಿಕಾರಿ ಎಚ್‌.ಆರ್‌. ನಾಯ್ಕ, ಇಒ ಬಸವರಾಜ ಅಯ್ಯಣ್ಣನವರ್‌, ಮಾಸ್ಟರ್‌ ಟ್ರೈನರ್‌ ಧರಣೇಂದ್ರ ಕುಮಾರ್‌ ಜೈನ್‌, ತಾ.ಪಂ. ಸಹಾಯಕ ನಿರ್ವಹಣಾಧಿಕಾರಿ ಕುಸುಮಾಕರ್‌, ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿವಿಧೆಡೆಗಳಿಂದ ಅಧಿಕಾರಿಗಳು ಚುನಾವಣೆ ಹಿಂದಿನ ದಿನ ಮತಗಟ್ಟೆಗೆ ಆಗಮಿಸಲಿದ್ದಾರೆ. ಜತೆಗೆ ಬಿಲ್‌ಒ ಸಹಿತ ಇತರ ಸಿಬಂದಿಯ ಅನುಕೂಲಕ್ಕೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. ಅಕ್ಷರ ದಾಸೋಹ ಸಿಬಂದಿ ಇದರ ಜವಾಬ್ದಾರಿ ವಹಿಸಲಿದ್ದಾರೆ ಎಂದು ಡಾ| ಎಂ.ಆರ್‌. ರವಿ ತಿಳಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.