ಮತ ಕೇಳಿದ ಜಲಮಂಡಳಿಸಿಬ್ಬಂದಿಗೆ ಅಮಾನತು ಶಿಕ್ಷೆ
Team Udayavani, Apr 19, 2018, 11:52 AM IST
ಯಲಹಂಕ: ಕ್ಷೇತ್ರದಲ್ಲಿ ಪಕ್ಷವೊಂದರ ಚುನಾವಣಾ ಪ್ರಚಾರ ವಾಹನ ಏರಿ ಮತ ಯಾಚನೆಗೆ ಸಾಥ್ ನೀಡಿದ ಜಲಮಂಡಳಿ
ಸಿಬ್ಬಂದಿಯನ್ನು ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಅಮಾನತು ಮಾಡಲಾಗಿದೆ. ಬಾಗಲಗುಂಟೆಯ ಜಲಮಂಡಳಿ ಉಪ ವಿಭಾಗದಲ್ಲಿ ಫಿಟ್ಟರ್ ಆಗಿರುವ ಎನ್.ಮಲ್ಲಯ್ಯ ಅಮಾನತುಗೊಂಡ ಸಿಬ್ಬಂದಿ. ಯಲಹಂಕ ವಿಧಾನಸಭಾ ಕ್ಷೇತ್ರದ ಹೆಸರಘಟ್ಟ ಹೋಬಳಿಯ ತರಬನಹಳ್ಳಿಯಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಬುಧವಾರ ತೆರೆದ ವಾಹನದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಎನ್. ಮಲ್ಲಯ್ಯ ಶಾಸಕರಿದ್ದ ವಾಹನ ಏರಿ ತಾವೂ ಪ್ರಚಾರ ನಡೆಸಿದ್ದಾರೆ. ಕರ್ತವ್ಯದ ಸಮಯದಲ್ಲಿ ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡುವ ಮೂಲಕ ಮಲ್ಲಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಚಿತ್ರ ಸಹಿತ ದೂರು ಬಂದಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಮಲ್ಲಯ್ಯನನ್ನು ಅಮಾನತು ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ಪ್ರಕರಣೆಯಲ್ಲಿ ತಿಳಿಸಿದ್ದಾರೆ.
ತನ್ನ ವಿರುದ್ಧದ ದೂರಿಗೆ ಸಮಜಾಯಿಷಿ ನೀಡಿರುವ ಮಲ್ಲಯ್ಯ, “ತರಬನಹಳ್ಳಿಗೆ ನೀರು ಸರಿಯಾಗಿ ಬಿಡುತ್ತಿಲ್ಲವಂತೆ ಎಂದು ಕೇಳುತ್ತಾ ಶಾಸಕರೇ ನನ್ನನ್ನು ವಾಹನಕ್ಕೆ ಹತ್ತಿಸಿಕೊಂಡರು. ತರಬನಹಳ್ಳಿಗೆ ನೀರು ಬಿಡುವ ಕೆಲಸ ನಾನ್ನದಲ್ಲ ಎಂದು ಹೇಳಿ ನಾನು ವಾಹನದಿಂದ ಇಳಿದೆ ಎಂದು ತಿಳಿಸಿದ್ದಾನೆ. ಆದರೆ ಈ ಸಮಜಾಯಿಷಿ ಒಪ್ಪದ ಚುನಾವಣಾಧಿಕಾರಿಗಳು ಶಿಸ್ತು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.