ನವಲೂರಿನ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ 


Team Udayavani, Apr 19, 2018, 4:38 PM IST

19-April-19.jpg

ಹುಬ್ಬಳ್ಳಿ: ಬಿಆರ್‌ಟಿಎಸ್‌ ಯೋಜನೆಯ ಬೃಹತ್‌ ಕಾಮಗಾರಿಗಳ ಪೈಕಿ ಒಂದಾಗಿರುವ ನವಲೂರು ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಾಯೋಗಿಕವಾಗಿ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಐದು ವರ್ಷಗಳ ಕಾಮಗಾರಿ ಪ್ರತೀಕವಾಗಿ ಒಂದು ಸೇತುವೆ ಮಾತ್ರ ಪೂರ್ಣಗೊಂಡಿದೆ.

ಸೇತುವೆ ಕಾಮಗಾರಿ ವಿಳಂಬದಿಂದ ಈ ಭಾಗದ ಜನರು ರೋಸಿಹೋಗಿದ್ದರು. ನಿತ್ಯವೂ ಧೂಳಿನ ಸಮಸ್ಯೆ ಅನುಭವಿಸುವಂತಾಗಿತ್ತು. ವಾಹನ ದಟ್ಟಣೆ ತೊಂದರೆಯಂತೂ ಹೇಳುವುದೇ ಬೇಡ. ಅಂತೂ ಐದು ವರ್ಷಗಳ ಕಾಮಗಾರಿಯಿಂದ ಎರಡು ಸೇತುವೆಗಳ ಪೈಕಿ ಒಂದು ಪೂರ್ಣಗೊಂಡಿದೆ. ಇನ್ನೊಂದು ಸೇತುವೆ ಶೇ. 85ರಷ್ಟು ಪೂರ್ಣಗೊಂಡಿದೆ. ಹುಬ್ಬಳ್ಳಿಯಿಂದ ಧಾರವಾಡ ಹೋಗುವ ಮಾರ್ಗದ ಎಡಗಡೆ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಾಹನದ ದಟ್ಟಣೆಗೆ ಬ್ರೇಕ್‌ ಬಿದ್ದಂತಾಗಿದೆ.

ಸುಗಮ ಸಂಚಾರ: ಕಾಮಗಾರಿ ನಡೆಯುತ್ತಿರುವ ಕಾರಣ ವಾಹನಗಳ ಓಡಾಟಕ್ಕೆ ದೊಡ್ಡ ಸಮಸ್ಯೆಯಾಗಿತ್ತು. ಇದೀಗ ಒಂದು ಸೇತುವೆ ಪೂರ್ಣಗೊಂಡು ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವುದು ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಸದ್ಯಕ್ಕೆ ಹಳೆ ಹಾಗೂ ಹೊಸ ಸೇತುವೆ ಮೇಲೆ ವಾಹನಗಳ ಓಡಾಟ ನಡೆಯುತ್ತಿದ್ದು, ಹಳೇ ಸೇತುವೆ ಮೇಲಿನ ವಾಹನ ಸಂಚಾರವನ್ನು ಬಂದ್‌ ಮಾಡಿ ಹೊಸ ಸೇತುವೆ ಮೇಲೆಯೇ ದ್ವಿಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಚಿಂತನೆ ನಡೆದಿದೆ.

ಬಿಆರ್‌ಟಿಎಸ್‌ಗೆ ಹಳೆ ಸೇತುವೆ: 43 ವರ್ಷ ಹಳೆಯ ಸೇತುವೆ ಬಳಕೆಗೆ ಯೋಗ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇದನ್ನು ಬಿಆರ್‌ಟಿಎಸ್‌ ಬಸ್‌ಗಳ ಸಂಚಾರಕ್ಕೆ ಬಳಕೆಯಾಗಲಿದ್ದು, ದ್ವಿಮುಖ ಬಸ್‌ ಸಂಚಾರಕ್ಕೆ ಅನುಕೂಲವಾಗಿರುವುದರಿಂದ ಶೀಘ್ರದಲ್ಲಿ ಈ ಸೇತುವೆಗೆ ಒಂದಿಷ್ಟು ಮಾರ್ಪಾಡು ಮಾಡುವ ಕೆಲಸ ಬಿಆರ್‌ಟಿಎಸ್‌ ಕಂಪನಿಯಿಂದ ನಡೆಯಲಿದೆ. ಈ ಕಾರ್ಯ ಮುಗಿಯುವಷ್ಟರೊಳಗೆ ಇನ್ನೊಂದು ಹೊಸ ಸೇತುವೆ ಕಾಮಗಾರಿಯೂ ಪೂರ್ಣಗೊಳ್ಳಲಿದ್ದು, ಎರಡನ್ನೂ ವಾಹನಗಳ ಸಂಚಾರಕ್ಕೆ ಒದಗಿಸುವ ಯೋಜನೆ ಬಿಆರ್‌ಟಿಎಸ್‌ ಅಧಿಕಾರಿಗಳಲ್ಲಿದೆ.

ವಿಳಂಬ ಯಾಕೆ?
ಸೇತುವೆ ನಿರ್ಮಾಣ ಕಾರ್ಯಕ್ಕೆ ಭೂಸ್ವಾಧೀನ ಪ್ರಕ್ರಿಯೆ ವಿಳಂಬಕ್ಕೆ ಪ್ರಮುಖ ಕಾರಣ. ಅಗತ್ಯ ಭೂಮಿಗೆ ಪರಿಹಾರ ನೀಡಲು ಬಿಆರ್‌ಟಿಎಸ್‌ ತಯಾರಿದ್ದರು ಸ್ಥಳೀಯರು ಆರಂಭದಲ್ಲಿ ಸ್ಥಳೀಯರಿಂದ ವಿರೋಧ ನಿರ್ಮಾಣ ಕಾರ್ಯದ ಮೇಲೆ ಪರಿಣಾಮ ಬೀರಿತು. ಇನ್ನೂ ನಿತ್ಯವೂ ಸಂಚಾರ ದಟ್ಟಣೆಯಿಂದ ಕೂಡಿದ್ದ ರಸ್ತೆಯಾಗಿದ್ದರಿಂದ ನಿರ್ಮಾಣ ಕಾರ್ಯಕ್ಕೆ ಮತ್ತೂಂದು ತೊಂದರೆಯಾಗಿ ಪರಿಣಿಮಿಸಿದೆ. ಹೀಗಾಗಿ 2017 ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳ್ಳಬೇಕಾಗಿದ್ದ ಸೇತವೆ ಬರೋಬ್ಬರಿ ಒಂದು ವರ್ಷ ವಿಳಂಬವಾಗಿದ್ದು, ಇನ್ನೊಂದು ಸೇತುವೆ ಇನ್ನೂ ನಿರ್ಮಾಣದ ಹಂತದಲ್ಲಿದೆ.

ಹೀಗಿದೆ ಸೇತುವೆ 
ಸೇತುವೆ ನಿರ್ಮಾಣಕ್ಕಾಗಿ ಸುಮಾರು 8.13 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. 53 ಮೀಟರ್‌ ಸೇತುವೆ ಸೇರಿದಂತೆ ಒಟ್ಟು 1.3 ಕಿಮೀ ಉದ್ದವಿದೆ. 7.5 ಮೀಟರ್‌ ಅಗಲವಿದ್ದು, ಬೃಹತ್‌ ವಾಹನಗಳ ಸಂಚಾರಕ್ಕೆ ಉತ್ತಮವಾಗಿದೆ. ಎರಡು ಸೇತುವೆಗಳ ನಿರ್ಮಾಣದ ಅಂದಾಜು ವೆಚ್ಚ 44 ಕೋಟಿ ರೂ. ಹೈದರಬಾದ್‌ ಮೂಲದ ಕೆಎಂಇ ಪ್ರೊಜೆಕ್ಟ್ಸ್ ಕಂಪನಿ ನಿರ್ಮಾಣ ಕಾರ್ಯ ಮಾಡುತ್ತಿದ್ದು, ಸರಕಾರಿ ಸ್ವಾಮ್ಯದ ಕೆಆರ್‌ಡಿಸಿಎಲ್‌ ಕಾಮಗಾರಿಗೆ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದೆ.

ರಸ್ತೆ ಅಗಲೀಕರಣದಿಂದ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ರಸ್ತೆ ಅಪಘಾತಗಳ ಪ್ರಮಾಣ ಕಡಿಮೆಯಾಗಿದೆ. ಹಳೆ ಸೇತುವೆ ಬಿಆರ್‌ಟಿಎಸ್‌ ಬಸ್‌ಗಳ ಓಡಾಟಕ್ಕೆ ಬಳಕೆಯಾಗಲಿದ್ದು, ಒಂದೆರಡು ದಿನಗಳಲ್ಲಿ ಹಳೆ ಸೇತುವೆ ಮೇಲಿನ ವಾಹನ ಸಂಚಾರ ತಡೆಯಲಾಗುವುದು. ದುರಸ್ತಿ ನಂತರ ಹಳೆ ಸೇತುವೆ ಹಾಗೂ ಇನ್ನೊಂದು ಹೊಸ ಸೇತುವೆ ಏಕಕಾಲಕ್ಕೆ ಸಂಚಾರಕ್ಕೆ ಮುಕ್ತವಾಗಲಿವೆ.  
ಬಸವರಾಜ ಕೇರಿ, ಉಪ ಪ್ರಧಾನ ವ್ಯವಸ್ಥಾಪಕ

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.