ರಾಕೆಟ್‌ ಹುಡುಗಿ ರಿಟರ್ನ್ಸ್


Team Udayavani, Apr 19, 2018, 6:16 PM IST

Aishani-Shetty-(16).jpg

ಐಶಾನಿ ಶೆಟ್ಟಿ ಈಗ ಖುಷಿಯಾಗಿದ್ದಾರೆ. ಸಡನ್‌ ಆಗಿ ಐಶಾನಿ ಶೆಟ್ಟಿ ಅಂದರೆ ನೆನಪಾಗೋದು ಕಷ್ಟ. ಆದರೆ, “ವಾಸ್ತು ಪ್ರಕಾರ’ ಹಾಗು “ರಾಕೆಟ್‌’ ಚಿತ್ರಗಳನ್ನೊಮ್ಮೆ ನೆನಪಿಸಿಕೊಂಡರೆ ಐಶಾನಿ ಶೆಟ್ಟಿ ಗೊತ್ತಾಗುತ್ತಾರೆ. ಅವರಿಗೇಕೋ ಸಿನಿಮಾ “ವಾಸ್ತು’ ಸರಿಯಾಗಲಿಲ್ಲ. ಆದರೂ “ರಾಕೆಟ್‌’ ಏರಿದರು. ಆದರೆ, ಅವರಂದುಕೊಂಡಷ್ಟು ಎತ್ತರಕ್ಕೆ “ರಾಕೆಟ್‌’ ಹಾರಲಿಲ್ಲ. ಅದ್ಯಾವದನ್ನೂ ಲೆಕ್ಕಿಸದೆ, ತನ್ನ ಪಾಡಿಗೊಂದು ಕಿರುಚಿತ್ರ ನಿರ್ದೇಶಿಸಿಬಿಟ್ಟರು. ಅದೀಗ ಸದ್ದಿಲ್ಲದೆಯೇ ದಾದಾ ಸಾಹೇಬ್‌ ಫಾಲ್ಕೆ ಅಕಾಡೆಮಿ ಫಿಲ್ಮ್ ಫೆಸ್ಟಿವಲ್‌ಗೆ ಆಯ್ಕೆಯಾಗಿದೆ. ಹಾಗಾಗಿ, ಐಶಾನಿ ಶೆಟ್ಟಿ ಅವರಿಗೀಗ ಖುಷಿಗೆ ಪಾರವೇ ಇಲ್ಲ.

ಐಶಾನಿ ಶೆಟ್ಟಿ ಸ್ವತಃ ಕಥೆ ಬರೆದು, ಚಿತ್ರಕಥೆಯನ್ನೂ ಮಾಡಿಕೊಂಡು ನಿರ್ದೇಶಿಸಿದ ಚಿತ್ರದ ಹೆಸರು “ಕಾಜಿ’. ಕೇವಲ 17 ನಿಮಿಷದ ಈ ಕಿರುಚಿತ್ರ, ಈಗಾಗಲೇ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಿರುಚಿತ್ರೋತ್ಸವದಲ್ಲೂ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ಆ ಖುಷಿಯಲ್ಲಿದ್ದ ಐಶಾನಿ ಶೆಟ್ಟಿಗೆ, ದೆಹಲ್ಲಿಯಲ್ಲಿ ನಡೆಯುತ್ತಿರುವ 8ನೇ ದಾದಾ ಸಾಹೇಬ್‌ ಫಾಲ್ಕೆ ಅಕಾಡೆಮಿ ಫಿಲ್ಮ್ ಫೆಸ್ಟಿವಲ್‌ಗೆ ಆಯ್ಕೆ ಆಗಿರುವುದರಿಂದ ಎಂದಿಗಿಂತ ಖುಷಿಯಾಗಿದ್ದಾರೆ ಐಶಾನಿ ಶೆಟ್ಟಿ.

“ನನಗೆ ನಟನೆ ಜೊತೆಗೆ ಕಥೆ ಬರೆಯುವುದು, ನಿರ್ದೇಶನ ಮಾಡುವ ಬಗ್ಗೆ ಹೆಚ್ಚು ಆಸಕ್ತಿ ಇತ್ತು. ಹಾಗಾಗಿ “ಕಾಜಿ’ ಚಿತ್ರಕ್ಕೆ ನಾನೇ ಕಥೆ ಬರೆದು, ಚಿತ್ರಕಥೆ ರಚಿಸಿ ನಿರ್ದೇಶಿಸಿದ್ದೆ. ಅದೊಂದು ನೈಜ ಘಟನೆಗಳ ತುಣುಕುಗಳನ್ನೆಲ್ಲಾ ಇಟ್ಟುಕೊಂಡು ಹೆಣೆದ ಕಥೆ. 

ಸಮಾಜದ ವಾಸ್ತವತೆ, ಬಡತನ, ದಾರಿದ್ರé ಹೀಗೆ ಒಂದಷ್ಟು ಸಮಾಜದೊಳಗಿರುವ ಕರಾಳ ಚಿತ್ರಣವನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದ್ದೇನೆ. ಒಂದು ಕುಟುಂಬದಲ್ಲಿ ಬಡತನ ಎಂಬುದು ಹಾಸು ಹೊದ್ದು ಮಲಗಿದರೆ, ಹೇಗೆಲ್ಲಾ ಆ ಕುಟುಂಬ ಯಾತನೆ ಅನುಭವಿಸುತ್ತದೆ ಎಂಬುದನ್ನು ತೋರಿಸಿದ್ದೇನೆ. ಹಿತ ಚಂದ್ರಶೇಖರ್‌ ಮುಖ್ಯ ಪಾತ್ರಧಾರಿ. ಅವರ ಜೊತೆ ಮಧುರ ಚನ್ನಿಗ ಸುಬ್ಬಣ್ಣ ಮತ್ತು ಇಂಚರ ಎಂಬ ಮಕ್ಕಳು ಕೂಡ ಮುಖ್ಯವಾಗಿ ಕಾಣಿಸಿಕೊಂಡಿದ್ದಾರೆ. ಕನಕಪುರ ಸುತ್ತಮುತ್ತ ಸುಮಾರು ಮೂರು ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇನೆ ಎಂದು ವಿವರ ಕೊಡುತ್ತಾರೆ ನಿರ್ದೇಶಕಿ ಐಶಾನಿ ಶೆಟ್ಟಿ. ಚಿತ್ರಕ್ಕೆ ಪ್ರೀತಂ ತಗ್ಗಿನ ಮನೆ ಛಾಯಾಗ್ರಹಣವಿದೆ. “ಒಂದು ಮೊಟ್ಟೆಯ ಕಥೆ’ ಚಿತ್ರಕ್ಕೆ ಸಂಗೀತ ನೀಡಿದ್ದ ಮಿದುನ್‌ ಮುಕುಂದನ್‌ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ.

ಎಲ್ಲವೂ ಸರಿ, ಐಶಾನಿ ಶೆಟ್ಟಿ ಯಾಕೆ ಇಷ್ಟು ದಿನ ಸುದ್ದಿಯೇ ಇರಲಿಲ್ಲ? ಈ ಪ್ರಶ್ನೆಗೆ, ಪರೀಕ್ಷೆ ಎಂಬ ಉತ್ತರ ಕೊಡುತ್ತಾರೆ ಅವರು. ಅಂತಿಮ ವರ್ಷದ ಮಾಸ್ಟರ್‌ ಡಿಗ್ರಿ ಪರೀಕ್ಷೆ ಗುರುವಾರ (ಇಂದು) ಮುಗಿಯಲಿದ್ದು, ಐಶಾನಿ ಶೆಟ್ಟಿ, ಇನ್ನು ಮುಂದೆ ಫ್ರೀ ಬರ್ಡ್‌. “ಪರೀಕ್ಷೆ ಇದ್ದ ಕಾರಣ, ಚಿತ್ರರಂಗದಿಂದ ದೂರ ಇರಬೇಕಾಗಿ ಬಂತು. ಈಗ ಪರೀಕ್ಷೆ ಮುಗಿದಿರುವುದರಿಂದ ಒಂದಷ್ಟು ಕಥೆಗಳು ಹುಡುಕಿ ಬರುತ್ತಿವೆ. ಕಥೆ ಕೇಳುತ್ತಿದ್ದೇನೆ. ಈ ಮಧ್ಯೆ “ನಡುವೆ ಅಂತರವಿರಲಿ’ ಎಂಬ ಚಿತ್ರದಲ್ಲಿ ನಟಿಸಿದ್ದೇನೆ. ಕಥೆ ಚೆನ್ನಾಗಿದ್ದರಿಂದ ನಟಿಸಿದೆ. ಆ ಚಿತ್ರಕ್ಕೆ ಪ್ರಖ್ಯಾತ್‌ ಎಂಬ ಹೊಸ ಪ್ರತಿಭೆ ಹೀರೋ. ರವೀನ್‌ ನಿರ್ದೇಶನ ಮಾಡಿದ್ದಾರೆ. ಜೂನ್‌ ಹೊತ್ತಿಗೆ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ’ ಎನ್ನುತ್ತಾರೆ ಐಶಾನಿ.

ಅದೆಲ್ಲಾ ಓಕೆ, ನಟನೆ ಜೊತೆಗೆ ನಿರ್ದೇಶನವೂ ಮುಂದುವರೆಯುತ್ತಾ? ಎಂಬ ಪ್ರಶ್ನೆ ಬರಬಹುದು. ಅದನ್ನು ಇಷ್ಟಕ್ಕೆ ಬಿಡಲು ಸಾಧ್ಯವೇ? ಎಂಬ ಉತ್ತರ ಪ್ರಶ್ನೆಯ ರೂಪದಲ್ಲಿ ಕೇಳಿಬರುತ್ತದೆ. ಅವರಿಗೆ ಕಥೆ ಬರೆಯೋದು, ನಿರ್ದೇಶನ ಮಾಡೋದು ಅಂದರೆ ಇಷ್ಟ. ಕ್ರಿಯೇಟಿವ್‌ ಫೀಲ್ಡ್‌ನಲ್ಲಿ ಏನಾದರೊಂದು ಸಾಧನೆ ಮಾಡುವ ಬಯಕೆ ಅವರದು. “ನಿರ್ದೇಶನ ಸುಲಭವಲ್ಲ. ಅಲ್ಲಿ ಕಲಿಯುವುದು ತುಂಬಾ ಇದೆ. ಕನ್ನಡದಲ್ಲಿ ಮಹಿಳಾ ನಿರ್ದೇಶಕರು ಕಡಿಮೆ. ಮುಂದೆ ಆ ಬಗ್ಗೆಯೂ ಗಮನಹರಿಸುತ್ತೇನೆ’ ಎನ್ನತ್ತಾರೆ ಐಶಾನಿ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.