ಕಥೆ ಕಟ್ಟಿದವರ ಕಥೆ!


Team Udayavani, Apr 20, 2018, 6:10 AM IST

Kattu-Kathe_(129)-Soorya-,S.jpg

ಕನ್ನಡದಲ್ಲಿ ಈಗೀಗ ವಿಭಿನ್ನ ಶೀರ್ಷಿಕೆಗಳೊಂದಿಗೆ ಬರುತ್ತಿರುವ ಚಿತ್ರಗಳ ಸಾಲಿಗೆ “ಕಟ್ಟುಕಥೆ’ ಹೊಸ ಸೇರ್ಪಡೆ. ಈಗಾಗಲೇ ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಬಿಡುಗಡೆಗೆ ಅಣಿಯಾಗಿದೆ. ಈ ಚಿತ್ರಕ್ಕೆ “ಕಟ್ಟುಕಥೆ’ ಎಂಬ ಶೀರ್ಷಿಕೆ ಇಟ್ಟಿದ್ದರೂ, “ಎ ರಿಯಲ್‌ ಸ್ಟೋರಿ’ ಎಂಬ ಅಡಿಬರಹವಿದೆ. ರಾಜ್‌ಪ್ರವೀಣ್‌ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 

ಈಗಂತೂ ಯಾರಾದರೂ, ಒಂದು ವಿಷಯ ಹೇಳಿದರೆ, ಅದು ನಿಜವೋ, ಸುಳ್ಳೋ ಎಂಬ ಪ್ರಶ್ನೆಗಳು ಎದುರಾಗುತ್ತವೆ. ಅದರಲ್ಲೂ “ಕಟ್ಟುಕಥೆ’ ಇರಬಹುದೇನೋ ಎಂಬ ಮಾತುಗಳೇ ಹೆಚ್ಚು. ಇದು ನಿಜ ಬದುಕಿನ ಒಂದು ಎಳೆ ಇಟ್ಟುಕೊಂಡು ಕಥೆ ಕಟ್ಟಿದ್ದಾರೆ ನಿರ್ದೇಶಕರು. ನಾಯಕ ಇಲ್ಲಿ ಕಿವುಡ. ಅವನು ಹುಡುಗಿಯೊಬ್ಬಳನ್ನು ಪ್ರೀತಿಸುತ್ತಾನೆ. ಏನೋ ಹೇಳಿದರೆ, ಬೇರೆಯ್ದೆà ಅರ್ಥ ಮಾಡಿಕೊಂಡು, ಇಲ್ಲದ ಅವಾಂತರ ಹುಟ್ಟುಹಾಕುತ್ತಾನೆ. ಆಮೇಲೆ ಏನೆಲ್ಲಾ ನಡೆದುಹೋಗುತ್ತೆ ಎಂಬುದರ ಹೂರಣ “ಕಟ್ಟು ಕಥೆ’ಯಲ್ಲಿದೆ ಎಂಬುದು ನಿರ್ದೇಶಕರ ಹೇಳಿಕೆ.

ಚಿತ್ರದಲ್ಲಿ ರಾಜೇಶ್‌ ನಟರಂಗ ಅವರಿಗೊಂದು ಮುಖ್ಯವಾದ ಪಾತ್ರವಿದೆ. “ಕೆಂಡ ಸಂಪಿಗೆ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿ ಪಾತ್ರ ಮಾಡಿದ್ದರಿಂದ ಬಹುತೇಕ ಅಂತಹ ಪಾತ್ರಗಳೇ ಅವರನ್ನು ಹುಡುಕಿ ಬಂದವಂತೆ.  ಇಲ್ಲೂ ಅಂಥದ್ದೊಂದು ಪಾತ್ರವಿದೆ. ಈಗಿನ ವ್ಯವಸ್ಥೆ ಕುರಿತಾದ ಚಿತ್ರಣ ಇಲ್ಲಿದೆ. ನೋಡುವ ಪ್ರೇಕ್ಷಕರಿಗೆ ಕ್ಲೈಮ್ಯಾಕ್ಸ್‌ ಏನೆಂದು ಗೊತ್ತಾದರೂ, ಅಲ್ಲಿನ ಪಾತ್ರಗಳಿಗೆ ಮಾತ್ರ ಗೊತ್ತಾಗಲ್ಲ. ಇಲ್ಲಿನ ವಿಶೇಷವೆಂದರೆ, ಎಲ್ಲಾ ಪಾತ್ರಗಳ ಹೆಸರು ಭಿನ್ನವಾಗಿವೆ ಎಂಬುದು ಅವರ ಮಾತು.

ಮಸ್ತಿ ಇಲ್ಲಿ, ಸರಳ ಮಾತುಗಳನ್ನು ಪೋಣಿಸಿದ್ದಾರಂತೆ. ಸೂರ್ಯ ಚಿತ್ರದ ನಾಯಕ. ಅವರಿಗೆ ಸ್ವಾತಿ ಕೊಂಡೆ ನಾಯಕಿ. ಬಹುತೇಕ ಇಲ್ಲಿ ರಂಗಭೂಮಿ ಕಲಾವಿದರು ಕಾಣಿಸಿಕೊಂಡಿದ್ದಾರಂತೆ. ಮಿತ್ರ ಅವರಿಗೆ “ರಾಗ’ ನಂತರ ಬಂದ ಅವಕಾಶ ಇದಂತೆ. ಇಲ್ಲೊಂದು ವಿಶೇಷ ಪಾತ್ರವಿದ್ದು, ಅದನ್ನು ಸಿನಿಮಾದಲ್ಲೇ ನೋಡಬೇಕು ಎಂಬುದು ಅವರ ಮಾತು.

ಮಹದೇವ ಮೈಸೂರು ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ಅವರಿಗೆ ನಿರ್ದೇಶಕರು ಏನು ಮಾಡುತ್ತಾರೆ ಎಂಬ ಬಗ್ಗೆ ಗೊಂದಲವಿತ್ತಂತೆ. ಆದರೆ, ಈಗ ಹೇಗೆಲ್ಲಾ ಬಂದಿದೆಯಲ್ಲಾ ಅಂತ ಖುಷಿಯಾಗಿದ್ದಾರಂತೆ ನಿರ್ಮಾಪಕರು. ಇನ್ನು, ಈ ಚಿತ್ರದಿಂದ ಅವರು ಸಾಕಷ್ಟು ತಾಳ್ಮೆ ಕಲಿತಿದ್ದಾರಂತೆ. ಧಾರಾವಾಹಿಯೊಂದನ್ನು ನಿರ್ಮಿಸುವ ಯೋಚನೆ ಇದ್ದ ಸವಿತಾ ಅವರು, ಮಹದೇವ ಅವರನ್ನು ಭೇಟಿ ಮಾಡಿ, ಈ ಕಥೆ ಹೇಳಿದಾಗ, ಅವರು ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರಂತೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

ಇಂದಿನಿಂದ ತೆರೆಯಲ್ಲಿ ಅನ್ನ ಪ್ರಸಾದ

Anna Movie; ಇಂದಿನಿಂದ ತೆರೆಯಲ್ಲಿ ‘ಅನ್ನ’ ಪ್ರಸಾದ

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Sandalwood; 8 ತಿಂಗಳು 150 ಸಿನಿಮಾ.. ಗೆದಿದ್ದು ಕೆಲವು, ಸೋತಿದ್ದು ಹಲವು

Sandalwood; 8 ತಿಂಗಳು 150 ಸಿನಿಮಾ.. ಗೆದ್ದಿದ್ದು ಕೆಲವು, ಸೋತಿದ್ದು ಹಲವು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.