ಕೈ ಮೈತ್ರಿ: ಕಾರಟ್ ಯೆಚೂರಿ ಭಿನ್ನರಾಗ
Team Udayavani, Apr 20, 2018, 9:25 AM IST
ಹೈದರಾಬಾದ್: ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸಿಪಿಎಂನಲ್ಲಿ ಉದ್ಭವಿಸಿರುವ ಬಿಕ್ಕಟ್ಟು ತೀವ್ರಸ್ವರೂಪ ಪಡೆದಿದೆ. ಮುಂದಿನ ಮೂರು ವರ್ಷ ಪಕ್ಷ ಯಾವ ‘ಮಾರ್ಗ’ದಲ್ಲಿ ಹೋಗಬೇಕು ಎಂಬ ವಿಚಾರದಲ್ಲಿ ಸೀತಾರಾಂ ಯೆಚೂರಿ ಮತ್ತು ಪ್ರಕಾಶ್ ಕಾರಟ್ ಬಣಗಳಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ರಹಸ್ಯ ಮತದಾನವಾಗಬೇಕು ಎಂದು ಕೆಲವು ಪ್ರತಿನಿಧಿಗಳು ಆಗ್ರಹಿಸಿದ್ದಾರೆ.
ಹೈದರಾಬಾದ್ನಲ್ಲಿ ಸಿಪಿಎಂನ ಅಧಿವೇಶನ ನಡೆಯುತ್ತಿದ್ದು, ಬಿಜೆಪಿಯನ್ನು ಸೋಲಿಸುವ ಸಂಬಂಧ ಕಾಂಗ್ರೆಸ್ ಸೇರಿದಂತೆ ಎಲ್ಲ ಜಾತ್ಯತೀತ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದು ಯೆಚೂರಿ ಬಣದ ಚಿಂತನೆ. ಆದರಿದು ಚುನಾವಣಾ ದೃಷ್ಟಿಯಲ್ಲಿ ಇರಬಾರದೆಂದು ಸಭೆಯಲ್ಲಿ ಕೆಲ ಪ್ರತಿನಿಧಿಗಳು ಹೇಳಿದ್ದಾರೆ. ಇದಕ್ಕೆ ಪಶ್ಚಿಮ ಬಂಗಾಳ, ಕರ್ನಾಟಕ, ಪಂಜಾಬ್, ಹರ್ಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಬೆಂಬಲವಿದೆ ಎನ್ನಲಾಗಿದೆ. ಆದರೆ, ಪ್ರಕಾಶ್ ಕಾರಟ್ ಅವರು ಕಾಂಗ್ರೆಸ್ ಜತೆ ದೋಸ್ತಿ ಬೇಡ ಎಂದಿದ್ದು, ಕೇರಳ, ಆಂಧ್ರ, ತ್ರಿಪುರ, ಮಧ್ಯಪ್ರದೇಶ, ರಾಜಸ್ಥಾನ, ಹಿಮಾಚಲ ಪ್ರದೇಶ ರಾಜ್ಯಗಳು ಬೆಂಬಲ ನೀಡಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.