ಗೇರು ಹಣ್ಣಿನಿಂದ ಜ್ಯೂಸ್‌, ಹಲ್ವಾ, ಜಾಮ್‌ ತಯಾರಿ


Team Udayavani, Apr 20, 2018, 11:36 AM IST

20-April-4.jpg

ಕೆಂಚನಕೆರೆ: ಹೆಚ್ಚು ಆದಾಯ ಕೊಡುವ ಕೃಷಿಯಲ್ಲಿ ಒಂದಾಗಿರುವ ಗೇರು ಬೀಜಕ್ಕೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಹೆಚ್ಚಾಗಿ ವ್ಯರ್ಥವಾಗಿ ಹೋಗುವ ಗೇರು ಹಣ್ಣಿನಿಂದ ಜ್ಯೂಸ್‌ ಮಾಡಿ ಮಾರಾಟ ಮಾಡಿದರೆ ಸಾಕಷ್ಟು ಲಾಭಗಳಿಸಬಹುದು ಎಂಬುದನ್ನು ಕೆಂಚನಕೆರೆಯ ಯುವಕ ಕೆನ್ಯೂಟ್‌ ಅರಾಹ್ನ ಮಾಡಿ ತೋರಿಸಿದ್ದಾರೆ.

ಸಾವಿರಾರು ಬಾಟಲಿಗಳಲ್ಲಿ ಗೇರು ಹಣ್ಣಿನ ಜ್ಯೂಸ್‌ ಮಾಡಿ ಕಿನ್ನಿಗೋಳಿ, ಮೂಲ್ಕಿ, ಸುರತ್ಕಲ್‌, ಹಳೆಯಂಗಡಿ, ಪಡುಬಿದ್ರೆ, ಎರ್ಮಾಳು ಹಾಗೂ ಮಣಿಪಾಲ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದಾರೆ. 

ಕೃಷಿಯಲ್ಲಿ ಡಿಪ್ಲೋಮಾ ಪದವಿ ಪಡೆದಿರುವ ಇವರು, ಐದು ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು, ಮೂರು ಎಕರೆಯಲ್ಲಿ ಐನೂರರಷ್ಟು ಗೇರು ಗಿಡಗಳನ್ನು ನೆಟ್ಟಿದ್ದಾರೆ. ಉಳ್ಳಾಲ 1, 2, 3, ಸ್ಥಳೀಯ ತಳಿ, ಭಾಸ್ಕರ ಹೀಗೆ 12 ತಳಿಗಳನ್ನು ಕೃಷಿ ಮಾಡು ತ್ತಿದ್ದು, ಕೆಲವು ಜನವರಿಯಲ್ಲಿ ಫಲ ನೀಡಿದರೆ, ಇನ್ನು ಕೆಲವು ಫೆಬ್ರವರಿಯಿಂದ ಮೇ ತಿಂಗಳವರೆಗೆ ಇಳುವರಿ ನೀಡುತ್ತಿವೆ.

ಮಕ್ಕಳು ಮುಂಜಾನೆ ಮರದಿಂದ ಬಿದ್ದ ಗೇರುಹಣ್ಣನ್ನು ಸಂಗ್ರಹಿಸಿ, ಚೆನ್ನಾಗಿರುವ ಹಣ್ಣುಗಳನ್ನು ಪ್ರತ್ಯೇಕಿಸಿ, ಸ್ವಚ್ಛಗೊಳಿಸಿ, ತುಂಡರಿಸಿದ ಬಳಿಕ ಕೆನ್ಯೂಟ್‌ ಅವರೇ ತಯಾರಿಸಿದ ಪುಟ್ಟ ಯಂತ್ರದಲ್ಲಿ ಹಾಕಿ, ರಸ ಸಂಗ್ರಹಿಸುತ್ತಾರೆ. ಬಳಿಕ ಅದರಿಂದ ಜ್ಯೂಸ್‌, ಹಲ್ವ ಹಾಗೂ ಜಾಮ್‌ ತಯಾರಿಸಲಾಗುತ್ತದೆ. ಜ್ಯೂಸ್‌ ಅನ್ನು ಬಾಟಲಿಗಳಲ್ಲಿ ತುಂಬಿಸಿ ಮಾರಾಟ ಮಾಡುವ ಕೆನ್ಯೂಟ್‌, ಗೇರುಬೀಜಕ್ಕಿಂತ ಎರಡು ಪಟ್ಟು ಹೆಚ್ಚು ಆದಾಯ ಇದರಲ್ಲಿದೆ ಎನ್ನುತ್ತಾರೆ.

ಕೃಷಿ ಇಲಾಖೆಯವರೊಂದಿಗೆ ಕೃಷಿ ಪ್ರವಾಸಕ್ಕೆ ಹೋಗಿದ್ದಾಗ ಗೇರುಹಣ್ಣಿನ ಜ್ಯೂಸ್‌ ಬಗ್ಗೆ ಮಾಹಿತಿ ಸಿಕ್ಕಿತು. ಆಮೇಲೆ ಮಂಗಳೂರು ಹಾಗೂ ಬ್ರಹ್ಮಾವರ ಕೃಷಿ ಅಧ್ಯಯನ ಕೇಂದ್ರದವರ ಮಾರ್ಗದರ್ಶನದಲ್ಲಿ ಜ್ಯೂಸ್‌ ತಯಾರಿಸಲು ಆರಂಭಿಸಿದೆ. ಕಳೆದ ಮೂರು ವರ್ಷ  ದಿಂದ ಯಶಸ್ಸು ಕೂಡ ಸಿಕ್ಕಿದೆ. ಕಾಲು ಲೀಟರ್‌ ಗೇರುಹಣ್ಣಿನ ಜ್ಯೂಸ್‌ಗೆ ಪ್ರಸ್ತುತ ಮಾರುಕಟ್ಟೆಯಲ್ಲಿ 15 ರೂ. ಇದೆ ಎನ್ನುತ್ತಾರೆ. ಕೆನ್ಯೂಟ್‌ ಅರಾಹ್ನ.

ಗೇರು ಕೃಷಿಯಷ್ಟೇ ಅಲ್ಲದೆ ತೆಂಗು, ಅಡಿಕೆ, ಅನಾನಸು, ಹಲಸು, ವಿವಿಧ ತಳಿಯ ಮಾವು ಕೃಷಿಯನ್ನೂ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಾವಿನ ಜ್ಯೂಸ್‌, ಪಲ್ಪ್ ತಯಾರಿಸುವ ಯೋಜನೆಯಿದೆ ಎನ್ನುತ್ತಾರೆ. ಮಳೆಗಾಲದಲ್ಲಿ ಗಾರ್ಡನಿಂಗ್‌ ಕೆಲಸ ಮಾಡುವ ಇವರ ನರ್ಸರಿಯಲ್ಲಿ ಅಂಥೋರಿಯಮ್‌ ಜತೆಗೆ ಬೇರೆ ಬೇರೆ ಗಿಡಗಳನ್ನೂ ಬೆಳೆಸುತ್ತಿದ್ದಾರೆ. ಕೃಷಿಗೆ ಪೂರಕವಾಗಿ ಎಂಟು ದನಗಳನ್ನು ಸಾಕಿದ್ದು, ಇದರಿಂದಲೂ ಆದಾಯಗಳಿಸುತ್ತಿದ್ದಾರೆ.

ಇಳುವರಿ ಕಡಿಮೆ
ಕಳೆದ ವರ್ಷಕ್ಕಿಂತ ಈ ಬಾರಿ ಇಳುವರಿ ತುಂಬ ಕಡಿಮೆ. ಹಾಗಾಗಿ ಬೇಡಿಕೆ ಇದ್ದಷ್ಟು ಜ್ಯೂಸ್‌ ಪೂರೈಕೆ ಮಾಡಲಾಗುತ್ತಿಲ್ಲ. ಈ ಜ್ಯೂಸ್‌ ಆರೋಗ್ಯದಾಯಕವೂ ಹೌದು. ಅಸ್ತಮಾ ಹಾಗೂ ಗರ್ಭಿಣಿಯರಿಗೆ ಇದು ಅತ್ಯುತ್ತಮ ಎನ್ನುತ್ತಾರೆ ಅವರು. 

ಮಕ್ಕಳಿಗೆ ರಜೆಯಲ್ಲಿ ಕೈತುಂಬಾ ಕೆಲಸ
ಮಕ್ಕಳಿಗೆ ಬೇಸಗೆ ರಜೆ ಕಳೆಯಲು ಸ್ಥಳೀಯರು ಹೆಚ್ಚಾಗಿ ಇವರ ಮನೆಗೆ ಗೇರು ಹಣ್ಣಿನ ಜ್ಯೂಸ್‌ ಮಾಡಲು ಕಳುಹಿಸುತ್ತಾರೆ. ಎರಡು ತಿಂಗಳ ಕಾಲ ಇಲ್ಲಿ ನೆರವಾಗುವ ಮಕ್ಕಳ ಶಿಕ್ಷಣದ ಖರ್ಚಿಗೆ ಕೆನ್ಯೂಟ್‌ ಕೂಡ ಸಹಕರಿಸುತ್ತಾರೆ. 

ಟಾಪ್ ನ್ಯೂಸ್

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.