ಹೊಸ್ಮಠ ಸೇತುವೆ ಬಳಿ ವಾಹನ ತೊಳೆದು ನೀರು ಕಲುಷಿತ 


Team Udayavani, Apr 20, 2018, 11:46 AM IST

20-April-5.jpg

ಕಡಬ: ಇಲ್ಲಿನ ಹೊಸ್ಮಠ ಸೇತುವೆಯ ಬಳಿ ಗುಂಡ್ಯ ಹೊಳೆಗೆ ವಾಹನಗಳನ್ನು ಇಳಿಸಿ ತೊಳೆಯುತ್ತಿರುವುದರಿಂದಾಗಿ ನೀರು ಕಲುಷಿತಗೊಂಡು ಹೊಳೆಯ ನೀರನ್ನು ಉಪಯೋಗಿಸುತ್ತಿರುವವರಿಗೆ ತೊಂದರೆಯಾಗುತ್ತಿರುವುದರಿಂದ ಸಂಬಂಧಪಟ್ಟವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಬಿರು ಬೇಸಗೆಯಾಗಿರುವುದರಿಂದ ಹೊಳೆಯಲ್ಲಿ ನೀರಿನ ಹರಿವು ಕೂಡ ಕಡಿಮೆಯಾಗಿದೆ. ಹೊಳೆಯ ಬದಿಯ ನಿವಾಸಿಗಳು ತಮ್ಮ ಬಾವಿಗಳಲ್ಲಿ ನೀರಿನ ಕೊರತೆ ಎದುರಾಗಿರುವುದರಿಂದ ಕುಡಿಯುವುದಕ್ಕಾಗಿಯೂ ಹೊಳೆಯ ನೀರನ್ನು ಉಪಯೋಗಿಸುತ್ತಿದ್ದಾರೆ. ಅಡುಗೆಗೆ, ಜಾನುವಾರುಗಳಿಗೆ ಹಾಗೂ ಬಟ್ಟೆ ಒಗೆಯುವುದು ಇತ್ಯಾದಿಗಳಿಗೂ ಹೊಳೆಯ ನೀರನ್ನೇ ಆಶ್ರಯಿಸುವಂತಾಗಿದೆ.

ಆದರೆ ಇಂತಹ ಸಂದರ್ಭ ಹೊಳೆಗೆ ವಾಹನಗಳನ್ನು ಇಳಿಸಿ ತೊಳೆಯುವುದರಿಂದಾಗಿ ನೀರು ಕಲುಷಿತಗೊಳ್ಳುತ್ತಿದೆ. ವಾಹನ ತೊಳೆಯುವ ವೇಳೆ ನೀರಿನಲ್ಲಿ ಸೇರಿಕೊಳ್ಳುವ ತೈಲದ ಅಂಶವು ಆರೋಗ್ಯಕ್ಕೆ ಹಾನಿಕರವೂ ಹೌದು. ಆದುದರಿಂದ ಸ್ಥಳೀಯ ಕುಟ್ರಾಪ್ಪಾಡಿ ಗ್ರಾಮ ಪಂಚಾಯತ್‌ ವತಿಯಿಂದ ಈ ಕುರಿತು ಸೂಕ್ತ ಕ್ರಮ ಕೈಗೊಂಡು ಹೊಳೆಯ ನೀರನ್ನು ಮಲಿನಗೊಳಿಸದಂತೆ ತಡೆಗಟ್ಟಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆರೋಗ್ಯ ಕೆಡುವ ಭೀತಿ
ಎಲ್ಲೆಡೆ ನೀರಿನ ಕೊರತೆ ಎದುರಾಗಿರುವುದರಿಂದ ಸಾಕಷ್ಟು ಜನ ಹೊಳೆಯ ನೀರನ್ನೇ ಕುಡಿಯುವುದಕ್ಕಾಗಿ ಮತ್ತು ಅಡುಗೆಗೆ ಬಳಸುತ್ತಿದ್ದಾರೆ. ಆದರೆ ನೀರಿನ ಹರಿವು ಕಡಿಮೆ ಇರುವ ಹೊಳೆಯಲ್ಲಿ ವಾಹನ ತೊಳೆಯುವುದರಿಂದ ನೀರು ಮಲಿನಗೊಳ್ಳುತ್ತಿದೆ. ವಾಹನಗಳ ತೈಲಮಿಶ್ರೀತ ಕಲುಷಿತ ನೀರನ್ನು ಉಪಯೋಗಿಸುವ ಜನರು ಹಾಗೂ ಜಾನುವಾರುಗಳ ಆರೋಗ್ಯ ಕೆಡುವ ಭೀತಿಯೂ ಇದೆ. ಆದುದರಿಂದ ಸಂಬಂಧಪಟ್ಟವರು ಈ ಕುರಿತು ಗಮನಹರಿಸಬೇಕಿದೆ.
-ಡಾ| ರಾಜೇಶ್‌ ಬೀರಂತಡ್ಕ, ಪರಿಸರ ಅಧ್ಯಯನಕಾರರು

ಸೂಕ್ತ ಕ್ರಮ
ಹಿಂದೆ ಸಾರ್ವಜನಿಕರ ದೂರಿನಂತೆ ಹೊಳೆಯ ನೀರನ್ನು ಮಲಿನಗೊಳಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ವಾಹನಗಳನ್ನು ಹೊಳೆಗೆ ಇಳಿಸುವ ರಸ್ತೆಗೆ ಕಂದಕ ನಿರ್ಮಿಸಿ ವಾಹನ ಇಳಿಸದಂತೆ ತಡೆಯೊಡ್ಡಲಾಗಿತ್ತು. ಇದೀಗ ಮತ್ತೆ ಹೊಳೆಯ ನೀರು ಮಲಿನಗೊಳಿಸುವ ಕುರಿತು ಮಾಹಿತಿ ಲಭಿಸಿದೆ. ಹೊಳೆಯ ನೀರನ್ನು ಮಲಿನಗೊಳಿಸದಿರುವಂತೆ ಪಂಚಾಯತ್‌ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ವಿಲ್ಫ್ರೆಡ್ ಲಾರೆನ್ಸ್‌ ರೋಡ್ರಿಗಸ್‌,
ಕುಟ್ರುಪ್ಪಾಡಿ ಗ್ರಾ.ಪಂ. ಪಿಡಿಒ

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.