ಪ್ರಯಾಣಿಕರ ಬ್ಯಾಗಿನಲ್ಲಿದ್ದ 63.54 ಲಕ್ಷ ರೂ. ವಶ


Team Udayavani, Apr 20, 2018, 11:47 AM IST

prayanikara.jpg

ದೇವನಹಳ್ಳಿ: ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಮತ್ತು ಪೊಲೀಸರ ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದು, ದಾಖಲೆಗಳಿಲ್ಲದೆ ಬಸ್‌ನಲ್ಲಿ ಸಾಗಿಸುತ್ತಿದ್ದ 63.26 ಲಕ್ಷ ನಗದು ದೇವನಹಳ್ಳಿಯ ರಾಣಿ ಸರ್ಕಲ್‌ನ ಚೆಕ್‌ಪೋಸ್ಟ್‌ನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಖಾಸಗಿ ಟ್ರಾವೆಲ್ಸ್‌ನ ಬಸ್‌ಗಳಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ತರುತ್ತಿದ್ದ 52.54 ಲಕ್ಷ ರೂ. ಹಾಗೂ ಹೈದರಾಬಾದ್‌ನಿಂದ ಮೈಸೂರಿಗೆ ಕೊಂಡೊಯ್ಯುತ್ತಿದ್ದ  10.72 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೈದರಾಬಾದ್‌ನಿಂದ ಖಾಸಗಿ ಬಸ್‌ನಲ್ಲಿ ತಡರಾತ್ರಿ 12 ಗಂಟೆ ಸುಮಾರಿಗೆ ರಾಣಿ ಸರ್ಕಲ್‌ ಚೆಕ್‌ಪೋಸ್ಟ್‌ನಲ್ಲಿ ಬಸ್‌ನ ಎಲ್ಲ ಪ್ರಯಾಣಿಕರ ಬ್ಯಾಗ್‌ಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ತಮಿಳುನಾಡು ಮೂಲದ ಕಾರ್ತಿಕೇಯನ್‌ ಮತ್ತು ವೆಂಕಟೇಶ್‌ ಪ್ರಭು ಹಾಗೂ ಶಿವಕಾಶಿ ಎಂಬುವವರಿಗೆ ಸೇರಿದ ಬ್ಯಾಗಿನಲ್ಲಿ ರೂ.500 ಮುಖಬೆಲೆಯ 5,024 ನೋಟುಗಳು ಹಾಗೂ ರೂ.2000 ಮುಖಬೆಲೆಯ 1,371 ನೋಟುಗಳು ಸೇರಿದಂತೆ ದಾಖಲೆಯಿಲ್ಲದ ಒಟ್ಟು 52.54 ಲಕ್ಷ ರೂ. ಪತ್ತೆಯಾಗಿದೆ. ಹೀಗಾರಿ ಅವರನ್ನೂ ವಶಕ್ಕೆ ಪಡೆಯಲಾಗಿದೆ. ಚುನಾವಣಾಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ.

ಮತ್ತೂಂದು ಪ್ರಕರಣದಲ್ಲಿ ಇದೇ ಚೆಕ್‌ಪೋಸ್ಟ್‌ನಲ್ಲಿ ನಸುಕಿನ 4.30ರ ಸುಮಾರಿಗೆ ಹೈದರಾಬಾದ್‌ನಿಂದ ಮೈಸೂರಿಗೆ ಹೋಗುತ್ತಿದ್ದ ಖಾಸಗಿ ಬಸ್‌ ತಪಾಸಣೆ ಮಾಡಿ, ಬೆಂಗಳೂರಿನ ಫ್ರೆàಜರ್‌ ಟೌನ್‌ ನಿವಾಸಿ ಜಮೀರ್‌ ಅಹ್ಮದ್‌ ಎಂಬುವವರ ಬ್ಯಾಗ್‌ನಲ್ಲಿ 2000 ರೂ. ಮುಖಬೆಲೆಯ 450 ನೋಟುಗಳು ಹಾಗೂ 500ರೂ. ಮುಖಬೆಲೆಯ 345 ನೋಟುಗಳು ಸೇರಿದಂತೆ ದಾಖಲೆಯಿಲ್ಲದ ಒಟ್ಟು 10.72 ಲಕ್ಷ  ನಗದನ್ನು ವಶಪಡಿಸಿಕೊಂಡಿದ್ದಾರೆ. ಅಹ್ಮದ್‌ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಗಳ ಕುರಿತಂತೆ ಜಿಲ್ಲಾಧಿಕಾರಿ ಎಸ್‌.ಪಾಲಯ್ಯ ಮಾತನಾಡಿ, ಚೆಕ್‌ಪೋಸ್ಟ್‌ನಲ್ಲಿ ಸ್ಟಾಟಿಕ್‌ ಸರ್ವೇಲೆನ್ಸ್‌ ಟೀಮ್‌ (ಎಸ್‌ಎಸ್‌ಟಿ) ತಂಡ ಪರಿಶೀಲನೆ ವೇಳೆ ಬಸ್ಸನಲ್ಲಿ ದೊರೆತ ಹಣ ವಶಕ್ಕೆ ಪಡೆಯಲಾಗಿದೆ. ಈಗಾಗಲೇ ಹಣದ ಮೂಲ ಪತ್ತೆಗೆ ಪರಿಶೀಲನೆ ನಡೆಸಲಾಗುತ್ತಿದೆ.

ಎರಡು ಪ್ರಕರಣಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಮೊತ್ತ ಪತ್ತೆಯಾಗಿರುವುದರಿಂದ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿ ತನಿಖೆ ಮುಂದುವರಿಸಲಾಗಿದೆ. ದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಎಸ್‌ಪಿ ಭೀಮ್‌ ಶಂಕರ್‌ ಗುಳದ್‌, ಚುನಾವಣಾಧಿಕಾರಿ ಮಂಜುನಾಥ್‌, ತಹಸೀಲ್ದಾರ್‌ ಎಂ.ರಾಜಣ್ಣ, ದೇವನಹಳ್ಳಿ ಠಾಣೆ ಇನ್ಸ್‌ಪೆಕ್ಟರ್‌ ಶಿವಕುಮಾರ್‌, ರೇಷ್ಮೆ ಇಲಾಖಾಧಿಕಾರಿ ಶ್ರೀನಿವಾಸ್‌ ಮೂರ್ತಿ, ಪಿಡಿಓ ಆದರ್ಶಕುಮಾರ್‌ ಇದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.