ಸಾಮಾಜಿಕ ಮೌಲ್ಯ ಪಡೆಯಲು ಶಿಬಿರ ಸಹಕಾರಿ: ನಿರ್ಮಲ್‌ ಕುಮಾರ್‌


Team Udayavani, Apr 20, 2018, 12:22 PM IST

20-April-6.jpg

ಮಹಾನಗರ: ನಗರದ ಯಾಂತ್ರೀಕೃತ ಬದುಕಿನಲ್ಲಿ ಬಾಲ್ಯದ ಮುಗ್ಧತೆ ಕಳೆದುಕೊಳ್ಳುತ್ತಿರುವ ಮಕ್ಕಳಿಗೆ ಮನೋರಂಜನೆ, ಜೀವನ ಶಿಕ್ಷಣ ಹಾಗೂ ಸಾಮಾಜಿಕ ಮೌಲ್ಯಗಳನ್ನು ಪಡೆಯುವಲ್ಲಿ ಶಿಬಿರಗಳು ಉಪಯುಕ್ತವಾಗಿವೆ. ಈ ನಿಟ್ಟಿನಲ್ಲಿ ಜೈನ್‌ ಮಿಲನ್‌ ಪ್ರಯತ್ನ ಶ್ಲಾಘನೀಯ ಎಂದು ಕರ್ಣಾಟಕ ಬ್ಯಾಂಕ್‌ ಉಪ ಮಹಾಪ್ರಬಂಧಕ ನಿರ್ಮಲ್‌ ಕುಮಾರ್‌ ಹೆಗ್ಡೆ ಹೇಳಿದರು.

ಎಸ್‌ಡಿಎಂ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆದ ಭಾರತೀಯ ಜೈನ್‌ ಮಿಲನ್‌ ಮಂಗಳೂರು ಮತ್ತು ಮಂಗಳೂರು ಯುವ ಜೈನ್‌ ಮಿಲನ್‌ ಜಂಟಿ ಆಶ್ರಯದಲ್ಲಿ ನಗರದ ಸುತ್ತಮುತ್ತಲಿನ ಪರಿಸರದ ಜೈನ ಸಮಾಜದ ಮಕ್ಕಳಿಗೆ ನಡೆದ ಬೌದ್ಧಿಕ ಹಾಗೂ ಮಾನಸಿಕ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನೊಳಗೊಂಡ ಮೂರು ದಿನಗಳ ಬೇಸಗೆ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ನಿವೃತ್ತ ಪ್ರಾಧ್ಯಾಪಕ ಪ್ರೊ| ವೃಷಭರಾಜ್‌ ಜೈನ್‌ ಮಾತನಾಡಿ, ಪೋಷಕರಿಗೆ ಹಾಗೂ
ಮಕ್ಕಳಿಗೆ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಆಪ್ತಸಲಹೆ, ತರಬೇತಿ ಹಾಗೂ ಸಂವಹನ ಕಲೆಯ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಲಯದ ಉಪಾಧ್ಯಕ್ಷ ಪುಷ್ಪರಾಜ್‌ ಜೈನ್‌ ಅವರು ಕರಾವಳಿ ಜಿಲ್ಲೆಗಳ ಜೈನ್‌ ಮಿಲನ್‌ಗಳ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು.

ನ್ಯಾಯವಾದಿ ರವಿವರ್ಮ, ಮಯೂರ ಕೀರ್ತಿ, ಯುವ ಉದ್ಯಮಿ ದರ್ಶನ್‌ ಜೈನ್‌, ಯುವಮಿಲನ್‌ನ ವಲಯದ ನಿರ್ದೇಶಕ ಜಿತೇಶ್‌ ಜೈನ್‌, ವಿಕಾಸ್‌ ಜೈನ್‌, ಉದ್ಯಮಿ ಹಿತೇಂದ್ರ ಕೊಟ್ಟಾರಿ, ಮಂಗಳೂರು ಜೈನ್‌ ಮಿಲನ್‌ ನ ಅಧ್ಯಕ್ಷ ಸುಕುಮಾರ್‌ ಬಲ್ಲಾಳ್‌ ಎನ್‌., ಕಾರ್ಯದರ್ಶಿ ಅರಿಂಜಯ ಜೈನ್‌, ಯುವ ಮಿಲನ್‌ ಅಧ್ಯಕ್ಷ ಪವನ್‌ ಮಂಜೇಶ್ವರ, ಕಾರ್ಯದರ್ಶಿ ಶ್ರೀವೀರ್‌ ಉಪಸ್ಥಿತರಿದ್ದರು. ಶಿಬಿರದ ಸಂಯೋಜಕ ಸಚಿನ್‌ ಜೈನ್‌ ವಂದಿಸಿದರು.

ವಿವಿಧ ತರಬೇತಿ
ಮೂರು ದಿನಗಳ ಶಿಬಿರದಲ್ಲಿ ಭಾಗವಹಿಸಿದ್ದ 56 ಮಕ್ಕಳು ವ್ಯಕ್ತಿತ್ವ ವಿಕಸನ ತರಬೇತಿ, ಗಾಳಿಪಟ ತಯಾರಿ ಹಾಗೂ ಪಣಂಬೂರಿನ ಬೀಚಿನಲ್ಲಿ ಗಾಳಿಪಟ ಹಾರಾಡಿಸುವ ಪ್ರಾತ್ಯಕ್ಷಿಕೆ, ಪಿಲಿಕುಳದ ಗುತ್ತಿನಮನೆ, ಪ್ರಾಣಿಸಂಗ್ರಹಾಲಯ ಮತ್ತು ಪ್ಲಾನೆಟೋರಿಯಂಗೆ ಭೇಟಿ, ಡ್ರಾಯಿಂಗ್‌ ತರಬೇತಿ, ಕ್ಲೇ ಮಾಡೆಲಿಂಗ್‌, ಮಿಮಿಕ್ರಿ, ಸಂವಹನ ಕಲೆಯ ತರಬೇತಿಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. 

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.