ಕೊಂಕಣಿ ವಚನ ಗಾಯನ ಕಾರ್ಯಾಗಾರ ಶ್ಲಾಘನಾರ್ಹ: ಕುಂಬಳೆ ಲಕ್ಷ್ಮಣ ಪ್ರಭು


Team Udayavani, Apr 20, 2018, 12:39 PM IST

20-April-7.jpg

ಮಹಾನಗರ: ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಸವ ಸಮಿತಿ ಸಹಯೋಗದಲ್ಲಿ ಕೊಂಕಣಿ ಭಾಷೆಯಲ್ಲಿರುವ ವಚನಗಳನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ 3 ದಿವಸ ನಡೆದ ‘ಕೊಂಕಣಿ ವಚನ ಗಾಯನ’ ಉಚಿತ ತರಬೇತಿ ಶಿಬಿರ ಸಮಾರೋಪವು ನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಬುಧವಾರ ಜರಗಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ| ನರಸಿಂಹಮೂರ್ತಿ ಆರ್‌. ಮಾತನಾಡಿ, ಸರ್ವಜ್ಞರಾದ ಭಕ್ತಿ ಭಂಡಾರಿ ಬಸವಣ್ಣರವರ ಹಾಗೂ ಇತರ ಹಲವು ವಚನ ಸಾಹಿತ್ಯದ ಬಗ್ಗೆ ಸಭಿಕರಿಗೆ ತಿಳಿಸಿದರು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ಕುಂಬಳೆ ಲಕ್ಷ್ಮಣ ಪ್ರಭು ಅಧ್ಯಕ್ಷತೆ ವಹಿಸಿ, ವಚನ ಸಾಹಿತ್ಯವನ್ನು ಕೊಂಕಣಿಯಲ್ಲಿ ಹಾಡಿಸುವಂತಹ ಶಿಬಿರವನ್ನು ಹಮ್ಮಿಕೊಂಡಿರುವ ವಿಶ್ವ ಕೊಂಕಣಿ ಕೇಂದ್ರವನ್ನು ಶ್ಲಾಘಿಸಿದರು.

ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕ ಅಧ್ಯಕ್ಷ ಬಸ್ತಿ ವಾಮನ ಶೆಣೈ ಸ್ವಾಗತಿಸಿ, ಲೆಕ್ಕ ಪರಿ ಶೋಧಕ ಸಿ. ಎ. ನಂದಗೋಪಾಲ ಶೆಣೈ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್‌ ಬಿ. ದೇವದಾಸ ಪೈ ಅತಿಥಿಗಳನ್ನು ಗೌರವಿಸಿದರು. 

ಕೊಂಕಣಿ ಭಾಷೆಗೆ ಅನುವಾದಗೊಂಡ ವಚನಗಳನ್ನು ಸಮಾಜ ಸೇವಕಿ ಮಾಲತಿ ಕಾಮತ್‌ ಅವರು ರಾಗ ಸಂಯೋಜನೆ ಮಾಡಿ, ಹಾಡಿ 3 ದಿವಸ ತರಬೇತಿ ನೀಡಿದ್ದು, ಇದೇ ಸಂದರ್ಭದಲ್ಲಿ ಅವರನ್ನು ಸಮ್ಮಾನಿಸಲಾಯಿತು.

ಶಿಬಿರಾರ್ಥಿಗಳು ಶಿಬಿರದಲ್ಲಿ ಕಲಿತಿರುವ ವಚನ ಗಾಯನ ಪ್ರಾತ್ಯಕ್ಷಿಕೆ ನೀಡಿ, ಅನುಭವಗಳನ್ನು ಹಂಚಿಕೊಂಡರು. ಶಿಬಿರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಕೊಂಕಣಿ ವಚನ ಗಾಯನ ಶಿಬಿರಾರ್ಥಿಗಳು ವಚನ ಹಾಡಿ ಪ್ರಾರ್ಥನೆಗೈದರು. ಈ ಸಂದರ್ಭದಲ್ಲಿ ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್‌ ಹೊಲಿಗೆ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು.

ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್‌ ಸಂಚಾಲಕಿ ಗೀತಾ ಸಿ. ಕಿಣಿ, ವಿಶ್ವ ಕೊಂಕಣಿ ಕೇಂದ್ರ ಕಾರ್ಯದರ್ಶಿ ಶಕುಂತಳಾ ಆರ್‌. ಕಿಣಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಬಿ. ಪ್ರಭಾಕರ ಪ್ರಭು ವಂದಿಸಿದರು. ಎಂ. ಆರ್‌. ಕಾಮತ್‌ ಅವರು ನಿರೂಪಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.