ಸಚಿವರಿಂದ ಕ್ಷೇತ್ರದ ಅಭಿವೃದ್ಧಿ ಕಡೆಗಣನೆ


Team Udayavani, Apr 20, 2018, 12:48 PM IST

m3-sachiva.jpg

ತಿ.ನರಸೀಪುರ: ಅಧಿಕಾರದ ಅಹಂನಲ್ಲಿ ಕ್ಷೇತ್ರದ ಜನರನ್ನು ಕಡೆಗಣಿಸಿದ್ದರಿಂದ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮತದಾರರ ಮೇಲಿನ ವಿಶ್ವಾಸ ಮತ್ತು ಕಾರ್ಯಕರ್ತರ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ಕ್ಷೇತ್ರ ಉಸ್ತುವಾರಿ ಬಿ.ಆರ್‌.ಪುಟ್ಟಸ್ವಾಮಿ ಹೇಳಿದರು.

ಪಟ್ಟಣದ ಬಿಎಸ್ಪಿ$ಕಚೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಬಸವ ಜಯಂತಿ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ಅಧಿಕಾರವಿದ್ದಾಗ ಜನರನ್ನು ಇರುವೆಗಳಿಗಿಂತಲೂ ಕಡೆಯಾಗಿ ಕಂಡದ್ದರಿಂದ ಸರ್ಕಾರದ ಅಂತ್ಯಕಾಲ ಸಮೀಪವಾಗಿ ಚುನಾವಣೆ ಬರುತ್ತಿದ್ದಂತೆ ಜನರನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ. ಕಾರ್ಯಕರ್ತರು ಸಚಿವರ ಕೈಗೆ ಸಿಗುತ್ತಿಲ್ಲವೆಂದು ಟೀಕಿದರು.

ಸಚಿವ ಮಹದೇವಪ್ಪ ಅವರಿಂದ ಉಪಕಾರವನ್ನು ಪಡೆದುಕೊಂಡವರೂ ಕೂಡ ತಲೆ ಮರೆಸಿಕೊಂಡು ಓಡಾಡುವ ಪರಿಸ್ಥಿತಿಯನ್ನು ನೋಡಿದಾಗ ಕ್ಷೇತ್ರದಲ್ಲಿ ಕಾಂಗ್ರೆಸ್‌ ದುರ್ಬಲವಾಗಿರುವುದು ತಿಳಿಯುತ್ತದೆ. ಜೆಡಿಎಸ್‌ ಮತ್ತು ಬಿಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಸಂಘಟಿತರಾಗಿ ದುಡಿಯಬೇಕು. ಜೆಡಿಎಸ್‌ ಕಾರ್ಯಕರ್ತರೊಂದಿಗೆ ಸಮನ್ವಯತೆ ಕಾಯ್ದುಕೊಂಡು ಗೆಲ್ಲಲಿಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಪುಟ್ಟಸ್ವಾಮಿ ಕರೆ ನೀಡಿದರು.

ಬಿಎಸ್‌ಪಿ ಜಿಲ್ಲಾ ಕಾರ್ಯದರ್ಶಿ ಕೆ.ಎನ್‌.ಪ್ರಭುಸ್ವಾಮಿ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅನೇಕ ಅಭ್ಯರ್ಥಿಗಳು ಸ್ಪರ್ಧಿಸಿ ಪಕ್ಷದ ಸಾಂಪ್ರದಾಯಿಕ ಮತಗಳನ್ನು ಪಡೆದು ಪರಾಭವಗೊಂಡಿದ್ದರು. ಈ ಚುನಾವಣೆಯಲ್ಲಿ ಅಷ್ಟೂ ಮತಗಳನ್ನು  ಜೆಡಿಎಸ್‌ ಅಭ್ಯರ್ಥಿಗೆ ಕೊಡಿಸಬೇಕು. ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬಲ ಪ್ರದರ್ಶಿಸಬೇಕು ಎಂದು ಹೇಳಿದರು. 

25ಕ್ಕೆ ಮಾಯಾವತಿ ಆಗಮನ: ಮೈಸೂರು ನಗರಕ್ಕೆ ಏ.25ಕ್ಕೆ ಪಕ್ಷದ ವರಿಷ್ಠರಾದ ಮಾಜಿ ಸಿಎಂ ಮಾಯಾವತಿ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ 1 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ತಾಲೂಕಿನಿಂದಲೂ ಕನಿಷ್ಠ 10 ಬಸ್‌ಗಳಲ್ಲಿ  ಜನರನ್ನು ಕರೆದೊಯ್ಯಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಎನ್‌.ಶಿವಪ್ರಕಾಶ್‌, ಸದಸ್ಯ ಪುಟ್ಟಸ್ವಾಮಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಸ್‌.ಆರ್‌.ರಾಜಶೇಖರ್‌, ಜಿಲ್ಲಾ ಸಂಘಟನಾ ಸಂಚಾಲಕ ಬನ್ನಳ್ಳಿ ಸೋಮಣ್ಣ,

ಬಿಎಸ್‌ಪಿ ಜಿಲ್ಲಾ ಕಾರ್ಯದರ್ಶಿ ಯರಗನಹಳ್ಳಿ ಬಿ.ಮಹದೇವಸ್ವಾಮಿ, ಕ್ಷೇತ್ರಾಧ್ಯಕ್ಷ ಎಸ್‌.ಕೆ.ರಾಜೂಗೌಡ, ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ, ಉಪಾಧ್ಯಕ್ಷರಾದ ನಾಜೀರ್‌, ಸೀನಪ್ಪ, ಮುಖಂಡರಾದ ಇಮ್ರಾನ್‌, ಕೆಬ್ಬೇಹುಂಡಿ ನಾಗರಾಜು, ಪುಟ್ಟಸ್ವಾಮಿ, ಮಹೇಂದ್ರ, ಕರೋಹಟ್ಟಿ ನಟರಾಜು, ಪ್ರವೀಣ್‌, ಮರಿಮಾದಯ್ಯ, ಶಿವಮೂರ್ತಿ, ಜಗದೀಶ, ಮಹದೇವ ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.