ಬಿಜೆಪಿ ಸೇರಿದ ಉಪ್ಪಾರ ಸಮಾಜದ ಮುಖಂಡರು
Team Udayavani, Apr 20, 2018, 12:48 PM IST
ಮೈಸೂರು: ಸಮಾಜದಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಉಪ್ಪಾರ ಸಮಾಜ ಸೇರಿದಂತೆ ಇನ್ನಿತರ ಸಮಾಜಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಬದ್ಧತೆ ಬಿಜೆಪಿ ಹೊಂದಿದೆ ಎಂದು ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಹೇಳಿದರು.
ವರುಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಉಪ್ಪಾರ ಸಮಾಜದ ಮುಖಂಡರನ್ನು ಸ್ವಾಗತಿಸಿ ಮಾತನಾಡಿದ ಅವರು, ಈ ಹಿಂದೆ ಬಿ.ಎಸ್.ಯಡಿಯೂರಪ್ಪಆಡಳಿತಾವಧಿಯಲ್ಲಿ ಹಿಂದುಳಿದ ಸಮಾಜಗಳ ಅಭಿವೃದ್ಧಿಗೆ ಹಾಗೂ ಈ ಸಮುದಾಯಗಳು ಎಲ್ಲಾ ಕ್ಷೇತ್ರಗಳಲ್ಲಿ ಸಾಮರ್ಥ್ಯ ತೋರುವಂತೆ ಮಾಡಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಉಪ್ಪಾರ ಸಮಾಜ ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ ಎಂಬುದನ್ನು ತಾವು ಅರಿತಿದ್ದು, ಈ ಸಮಾಜಕ್ಕೆ ಸಮರ್ಥ ರಾಜಕೀಯ ನಾಯಕತ್ವ ರೂಪಿಸುವ ಜತೆಗೆ ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಮೇಲೆತ್ತುವ ಜವಾಬ್ದಾರಿ ತಮ್ಮದಾಗಲಿದೆ.
ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಅಸಂಘಟಿತ ಹಿಂದುಳಿದ ಸಮಾಜಗಳನ್ನು ಕಾಂಗ್ರೆಸ್ ಮತಬ್ಯಾಂಕ್ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ನ ಮತಬ್ಯಾಂಕ್ ರಾಜಕಾರಣಕ್ಕೆ ಅಂತ್ಯ ಹಾಡಲು ಈ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಹೀಗಾಗಿ ವರುಣಾ ಕ್ಷೇತ್ರದ ಉಪ್ಪಾರ ಸಮಾಜದ ಮುಖಂಡರು ಚುನಾವಣೆಯಲ್ಲಿ ತಮ್ಮ ಕೈಹಿಡಿಯಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸ್ಲಂ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆರ್.ರಘು, ಉಪ್ಪಾರ ಸಮಾಜದ ಶಿವಕುಮಾರ್, ಮಹದೇವಶೆಟ್ಟಿ, ಉಪ್ಪಾರ ಯುವ ವೇದಿಕೆಯ ಸೋಮಶೇಖರ್, ಹೆಮ್ಮರಗಾಲ ಸೋಮಣ್ಣ, ತಾಪಂ ಸದಸ್ಯರಾದ ವೆಂಕಟೇಶ್, ಗಿರೀಶ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.