ಆದಿವಾಸಿಗಳಿಂದ ಮತದಾನ ಬಹಿಷ್ಕರಿಸುವ ಎಚ್ಚರಿಕೆ


Team Udayavani, Apr 20, 2018, 12:48 PM IST

m5-adivasi.jpg

ಹುಣಸೂರು: ಕಾಡಿನಿಂದ ನಾಡಿಗೆ ಕರೆತಂದವರು ಸೌಲಭ್ಯ ನೀಡುವಲ್ಲಿ ವಿಫ‌ಲರಾಗಿದ್ದಾರೆಂದು ಆರೋಪಿಸಿ, ಹೆಬ್ಬಳ್ಳ ಗಿರಿಜನ ಪುನರ್ವಸತಿ ಕೇಂದ್ರದ 340ಕ್ಕೂ ಹೆಚ್ಚು ಆದಿವಾಸಿಗಳು ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು. ಹುಣಸೂರು ತಾಲೂಕು ಹೆಬ್ಬಳ್ಳ ಗಿರಿಜನ ಪುನರ್ವಸತಿ ಕೇಂದ್ರದ ಚಂದ್ರ ಅಧ್ಯಕ್ಷತೆಯಲ್ಲಿ ಆದಿವಾಸಿಗಳು ಗುರುವಾರ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದರು. 

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಗೋಣಿಗದ್ದೆ, ಕೊಡಗಿನ ಕೊಳಂಗೇರಿ, ಚೇಣಿಹಡ್ಲು, ಆಯರಹೊಸಳ್ಳಿ ಹಾಡಿಗಳು, ಎಚ್‌.ಡಿ.ಕೋಟೆ ತಾಲೂಕಿನ ಮಚ್ಚಾರು ಮತ್ತು ಕೆರೆ ಹಾಡಿಗಳಿಂದ 2013 ಹಾಗೂ 2014ರಲ್ಲಿ ಹಂತಹಂತವಾಗಿ ಈ ಕೇಂದ್ರಕ್ಕೆ ಆಗಮಿಸಿ ಒಟ್ಟು 130 ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದೇವೆ. ಕುಟುಂಬಕ್ಕೊಂದು ಮನೆ ಮತ್ತು ತಲಾ ಮೂರು ಎಕರೆ ಭೂಮಿ ನೀಡಿರುವುದು ಬಿಟ್ಟರೆ, ಮತ್ಯಾವ ಸೌಲಭ್ಯಗಳನ್ನು ಕಲ್ಪಿಸಿಲ್ಲ ಎಂದು ದೂರಿದರು. 

ಕಂದಾಯ ಗ್ರಾಮವಾಗಿಲ್ಲ: ಇಲ್ಲಿ ಪುನರ್ವಸತಿಗೊಂಡು ನಾಲ್ಕು ವರ್ಷಗಳು ಕಳೆದರೂ ಇದುವರೆಗೂ ಕೇಂದ್ರವನ್ನು ಕಂದಾಯ ಗ್ರಾಮವಾಗಿಸಿಲ್ಲ, ಇದರಿಂದಾಗಿ ಗ್ರಾಮ ಪಂಚಾಯ್ತಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ಕೃಷಿ ಚಟುವಟಿಕೆಗೆ ಬಿತ್ತನೆ ಬೀಜ ಸೇರಿದಂತೆ ಸವಲತ್ತುಗಳು ಪಡೆಯಲಾಗುತ್ತಿಲ್ಲ. ಮನವಿ ಮಾಡಿದರೂ ಅಧಿಕಾರಿಗಳಾರೂ ಕ್ಯಾರೆ ಅನ್ನುತ್ತಿಲ್ಲವೆಂದು ಆರೋಪಿಸಿದರು. 

ಭೂಮಿಗೂ ಹಕ್ಕುಪತ್ರವಿಲ್ಲ: ಪುನರ್ವಸತಿ ಯೋಜನೆಯ ಪ್ಯಾಕೇಜ್‌ನಡಿ ತಲಾ 3 ಎಕರೆ ಭೂಮಿ ವಿತರಿಸಲಾಗಿದೆ. ಆದರೆ ನೀಡಿರುವ ಭೂ ಒಡೆತನ ಪತ್ರಕ್ಕೆ ಯಾವುದೇ ಸಾಲ ಸೌಲಭ್ಯ-ಸವಲತ್ತುಗಳು ಸಿಗುತ್ತಿಲ್ಲ, ಒಂದೇ ಒಂದು ಬೋರ್‌ವೆಲ್‌ ಕೊರೆಸಿ ಪಂಪ್‌ಸೆಟ್‌ ಅಳವಡಿಸಿಲ್ಲ. ಇನ್ನು ಭೂಮಿ ಅಲ್ಲಲ್ಲಿ ಒತ್ತುವರಿಯಾಗಿದೆ, ದನಕರುಗಳಿಗೆ ಗೋಮಾಳ ನಿಗದಿಪಡಿಸಿಲ್ಲ, ಅಳತೆ ಮಾಡಿಸಿ ಕಂದಕ ಹಾಗೂ ಸುತ್ತ ಬೇಲಿ ನಿರ್ಮಿಸದೆ ಅಕ್ಕಪಕ್ಕದ ಹಳ್ಳಿಗಳ ಜಾನುವಾರುಗಳಿಗೆ ಇಲ್ಲಿನ ಭೂಮಿ ಮೇವಿನ ತಾಣವಾಗಿದೆ. ಕೆರೆ-ಕಟ್ಟೆಯೂ ಇಲ್ಲಿಲ್ಲ ಎಂದು ಅಳಲು ತೋಡಿಕೊಂಡರು.

ನೀರಿನ ಸಮಸ್ಯೆ: ಈ ಪುನರ್ವಸತಿಗೊಂಡಿರುವ ಆದಿವಾಸಿಗಳ ಪ್ಯಾಕೇಜ್‌ ಹಣದಲ್ಲೇ ಉಡುವೆಪುರ ಬಳಿಯಿಂದ ಕೇಂದ್ರಕ್ಕೆ ಓವರ್‌ ಹೆಡ್‌ ಟ್ಯಾಂಕ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಇದು 130 ಕುಟುಂಬಗಳಿಗೆ ಸಾಲುತ್ತಿಲ್ಲ, ಅಕ್ಕಪಕ್ಕ ಕೆರೆ-ಕಟ್ಟೆ ಇದ್ದರೂ ನೀರಿಲ್ಲ, ಜಾನುವಾರು ದಾಹ ತೀರಿಸಲು ಪರದಾಡುವಂತಾಗಿದೆ.

ಭರಪೂರ ಭರವಸೆ: ಕೇಂದ್ರದ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ, ಅರಣ್ಯ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಸಮಸ್ಯೆಗಳಿಗೆ ಸ್ಪಂದಿಸದ ಜಿಲ್ಲಾಡಳಿತ, ಜನಪ್ರತಿನಿಧಿಗಳು ಪ್ರತಿಬಾರಿ ಮನವಿ ಮಾಡಿದಾಗಲೂ ಭರಪೂರ ಭರವಸೆ ನೀಡುತ್ತಾರೆ. ಆದರೆ ಯಾವುದೇ ಕೆಲಸ ಮಾತ್ರ ಮಾಡಿಕೊಟ್ಟಿಲ್ಲ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಮತ ಬಹಿಷ್ಕಾರ ಮಾಡುವುದಾಗಿ ಎಚ್ಚರಿಸಿದರು. 

ಕೇಂದ್ರದಲ್ಲಿ 40ಕ್ಕೂ ಹೆಚ್ಚು ಮಕ್ಕಳಿದ್ದು, ಅಂಗನವಾಡಿ ಕಟ್ಟಡ ನಿರ್ಮಿಸಿಲ್ಲ. ಸಮುದಾಯದ ಯಾವುದೇ ಚಟುವಟಿಕೆ ನಡೆಸಲು ಭವನವಿಲ್ಲದೆ ಮರದ ಕೆಳಗೆ ಸಭೆ ನಡೆಯುತ್ತಿದೆ. ನಿರ್ಮಿಸಿರುವ ಮನೆಗಳು ಕಳಪೆಯಾಗಿ ಸೋರುತ್ತಿವೆ. ನೆಲಹಾಸು ಬಿರುಕು ಬಿಟ್ಟಿದೆ
-ಕಮಲಾ, ಆದಿವಾಸಿ

ಟಾಪ್ ನ್ಯೂಸ್

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.