ಆಕಾಶವಾಣಿಯಿಂದ ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ
Team Udayavani, Apr 20, 2018, 3:59 PM IST
ಧಾರವಾಡ: ಜಿಲ್ಲೆಯಾದ್ಯಂತ ಮತದಾನದ ಪ್ರಮಾಣ ಹೆಚ್ಚು ಮಾಡಲು ನಿರಂತರವಾಗಿ ಚಟುವಟಿಕೆಗಳನ್ನು ನಡೆಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿಯು ಆಕಾಶವಾಣಿ ಮೂಲಕ ಇವಿಎಂ ಮತ್ತು ವಿವಿ ಪ್ಯಾಟ್ ಯಂತ್ರಗಳ ಬಳಕೆ ಕುರಿತು ಕೇಳುಗರಿಗೆ ನೇರ ಪ್ರಸಾರದಲ್ಲಿ ಪ್ರಾತ್ಯಕ್ಷಿಕೆ ಒದಗಿಸುವ ವಿನೂತನ ಪ್ರಯತ್ನ ಮಾಡಿತು.
ಮಧ್ಯಾಹ್ನ 12:30ರಿಂದ 1ಗಂಟೆಯವರೆಗೆ ಮಹಿಳಾ ರಂಗ ಕಾರ್ಯಕ್ರಮದಲ್ಲಿ ಜನತಂತ್ರ ಮತಯಂತ್ರ ನೇರಫೋನ್
ಇನ್ ಕಾರ್ಯಕ್ರಮ ನಡೆಯಿತು. ಜಿಲ್ಲೆ ಹಾಗೂ ದೂರದ ಕೊಪ್ಪಳ, ರಾಯಚೂರು, ಕಲಬುರ್ಗಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕೇಳುಗರು ಕರೆ ಮಾಡಿ ಮಾಹಿತಿ ಪಡೆದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ಆರ್ ಸ್ನೇಹಲ್ ಅವರು, ಮತದಾನದ ಮಹತ್ವ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತಕ್ಕಿರುವ ಮೌಲ್ಯದ ಕುರಿತು ಪರಿಣಾಮಕಾರಿಯಾಗಿ ಮಾತನಾಡಿದರು. ಕಾರ್ಯಕ್ರಮ ನಿರ್ವಾಹಕಿ ಮಂಜುಳಾ ಪುರಾಣಿಕ ನಿರೂಪಿಸಿದರು. ನಂತರ ನಡೆದ ಇವಿಎಂ ಮತ್ತು ವಿವಿಪ್ಯಾಟ್ ಬಳಕೆ ಕುರಿತ ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಪ್ರೊಬೇಷನರಿ ಎ.ಸಿ. ಪಾರ್ವತಿ ರೆಡ್ಡಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.