ಪುತ್ತೂರು ದೇಗುಲದ ಗದ್ದೆಯಲ್ಲಿ ಜನಸಂದಣಿ


Team Udayavani, Apr 21, 2018, 9:05 AM IST

Jaathre-20-4.jpg

ನಗರ: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಸಮಾಪನಗೊಂಡಿದೆ. ಆದರೆ ದೇವರಮಾರು ಗದ್ದೆಯಲ್ಲಿ ಸಂತೆ ವ್ಯಾಪಾರದ ಉತ್ಸಾಹ ಇನ್ನೂ ಕಡಿಮೆಯಾಗಿಲ್ಲ. ಶುಕ್ರವಾರ ಸಂಜೆ ದೇಗುಲದ ಗದ್ದೆಯಲ್ಲಿ ಜನಸಂದಣಿ ಕಂಡುಬಂತು. ಜಾತ್ರೆಯ ಸಂದರ್ಭ ದೊಡ್ಡ ಪ್ರಮಾಣದಲ್ಲಿ ಜನರು ಆಗಮಿಸುತ್ತಾರೆ. ಆಗ ಸಂತೆಯಿಂದ ಖರೀದಿ ಮಾಡುವುದು ಕಷ್ಟವೇ. ಹೀಗೆ ಹಿಂದೆ ಹೋದವರು, ಇದೀಗ ಸಂತೆಗೆ ಆಗಮಿಸುತ್ತಿದ್ದಾರೆ. ಸರಾಗವಾಗಿ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ.

ಗುರುವಾರ ರಾತ್ರಿ ಪುತ್ತೂರು ಪೇಟೆಯಲ್ಲಿ ಉತ್ತಮ ಮಳೆಯಾಗಿತ್ತು. ಕೆಲ ಗಂಟೆಗಳ ಕಾಲ ವಿದ್ಯುತ್‌ ಸ್ಥಗಿತಗೊಂಡಿತ್ತು. ಆದರೆ ಮಳೆ ಸಂತೆ ವ್ಯಾಪಾರಕ್ಕೆ ಅಡ್ಡಿ ಮಾಡಿಲ್ಲ. ಮಳೆಯನ್ನು ಎದುರಿಸಿ ನಿಂತ ಸಂತೆ ವ್ಯಾಪಾರ, ಶುಕ್ರವಾರ ಬೆಳಿಗ್ಗೆ ಮತ್ತೆ ಚಿಗಿತುಕೊಂಡಿವೆ. ಮಧ್ಯಾಹ್ನದ ಬಳಿಕ ಇನ್ನಷ್ಟು ಆಸಕ್ತರನ್ನು ಕೈಬೀಸಿ ಕರೆಯತೊಡಗಿತು. ಜಾತ್ರೆಯ ಬಳಿಕ ಒಂದಷ್ಟು ಸಮಯ ಸಂತೆ ಇರುವುದು ಸಾಮಾನ್ಯ. ಆರಾಮವಾಗಿ ಖರೀದಿ ಮಾಡಬಹುದು. ಇದರ ಜತೆಗೆ ಚೌಕಾಸಿ ನಡೆಸಲು ಅವಕಾಶ ಇದೆ. ಜಾತ್ರೆಯ ಸಂದರ್ಭದಲ್ಲಾದರೆ ವ್ಯಾಪಾರಿಗಳು ಹೇಳಿದ ದರ. ಆದರೆ ಈಗ ಗ್ರಾಹಕರು ಪಟ್ಟು ಹಿಡಿದ ದರ. ಬೇಕಾದಂತೆ ಚೌಕಾಸಿ ಮಾಡಿ, ವಸ್ತುಗಳ ಖರೀದಿ ಮಾಡುವವರಿದ್ದಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆ ಸುಮಾರು 8 ಎಕರೆ ಜಾಗದಲ್ಲಿ ಹರಡಿಕೊಂಡಿದೆ. ಇದು ವ್ಯಾಪಾರಿಗಳಿಗೂ ಅನುಕೂಲವಾಗಿದೆ. ಮಾತ್ರವಲ್ಲ ಗ್ರಾಹಕರು ತಮ್ಮ ವಾಹನಗಳನ್ನು ಬೇಕಾದಂತೆ ಪಾರ್ಕ್‌ ಮಾಡಿಕೊಳ್ಳಲು ಅವಕಾಶವಿದೆ. ಆದ್ದರಿಂದ ಒಂದು ವಾರ ಹೆಚ್ಚು ನಿಂತರೂ ಯಾವುದೇ ತೊಂದರೆ ಎದುರಾಗದು. ವ್ಯಾಪಾರಿಗಳು ಎಷ್ಟು ಲಾಭ ಬರುತ್ತದೋ ಅಷ್ಟನ್ನು ಬಾಚಿಕೊಳ್ಳುವ ಉತ್ಸಾಹದಲ್ಲಿರುತ್ತಾರೆ. ಗ್ರಾಹಕರು ತಮಗೆ ಎಷ್ಟು ಕಡಿಮೆಗೆ ಉತ್ಕೃಷ್ಟ ವಸ್ತು ಸಿಗುತ್ತದೋ ಎಂಬ ತವಕದಲ್ಲಿರುತ್ತಾರೆ. ಪುತ್ತೂರು ಜಾತ್ರೆಯ ಗದ್ದೆಯಲ್ಲಿ ಎಲ್ಲ ರೀತಿಯ ಕ್ರಾಫ್ಟ್‌, ಬಟ್ಟೆ- ಬರೆ, ಪಾದರಕ್ಷೆ, ಫ್ಯಾನ್ಸಿ ಸಾಮಾಗ್ರಿ, ತಿನಿಸು, ಮನರಂಜನೆ ವಸ್ತುಗಳಿವೆ. ಆದ್ದರಿಂದ ಈ ದಿನಗಳಲ್ಲಿ ಹೆಚ್ಚಾಗಿ ಮಹಿಳೆಯರೇ ಇಲ್ಲಿ ಆಗಮಿಸಿ, ಖರೀದಿಯಲ್ಲಿ ಭಾಗಿಯಾಗುತ್ತಾರೆ. ಸಾಧಾರಣೆ ಸಂಜೆ ಆಗುತ್ತಲೇ ಶುರುವಾಗುವ ವ್ಯಾಪಾರ, ಸರಿರಾತ್ರಿ ವರೆಗೂ ಮುಂದುವರಿದೇ ಇರುತ್ತದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.