ಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ?
Team Udayavani, Apr 21, 2018, 7:00 AM IST
ಹೊಸದಿಲ್ಲಿ: 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವಂಥ ರಾಕ್ಷಸರಿಗೆ ಮರಣದಂಡನೆ ವಿಧಿಸುವ ಕುರಿತಂತೆ ಪೋಕ್ಸೋ ಕಾಯ್ದೆಗೆ ತಿದ್ದುಪಡಿ ತರಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಅರಿಕೆ ಮಾಡಿಕೊಂಡಿದೆ. ಇದೇ ವೇಳೆ, ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವ ಮಾತುಗಳೂ ಕೇಳಿಬಂದಿದ್ದು, ಶನಿವಾರ ನಡೆಯಲಿರುವ ಕೇಂದ್ರ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ.
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಆರೋಪಿಗಳಿಗೆ ಗರಿಷ್ಠ ಮಟ್ಟದ ಶಿಕ್ಷೆ ವಿಧಿಸಬೇಕೆಂಬ ಕೂಗು ರಾಷ್ಟ್ರ ವ್ಯಾಪಿ ಕೇಳಿ ಬರುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. 8 ತಿಂಗಳ ಶಿಶುವಿನ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರಕಾರ ಈ ರೀತಿ ಪ್ರತಿಕ್ರಿಯೆ ನೀಡಿದೆ. ಮುಂದಿನ ವಿಚಾರಣೆ 27ರಂದು ನಡೆಯಲಿದೆ. ಈ ಹಿಂದೆ ಕಥುವಾ ಪ್ರಕರಣ ಸಂಬಂಧ ಅಲಾಖ್ ಅಲೋಕ್ ಶ್ರೀವಾಸ್ತವ ಇದೇ ಆಗ್ರಹ ಮಾಡಿದ್ದರು. ಆಗ ಎಲ್ಲದಕ್ಕೂ ಗಲ್ಲು ಶಿಕ್ಷೆಯೇ ಪರಿಹಾರವಲ್ಲ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್ ನರಸಿಂಹ ಹೇಳಿದ್ದರು. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಈ ಅಂಶ ಪ್ರಸ್ತಾಪಿಸಿದ್ದರು.
ಸಂಬಂಧಿ ಇದ್ದಾರಾ?: “ನಿಮ್ಮ ಸಂಬಂಧಿ ಯಾರಾದರೂ ಅತ್ಯಾಚಾರಕ್ಕೀಡಾಗಿದ್ದಾರಾ? ಸಂತ್ರಸ್ತರ ಕುಟುಂಬದ ಯಾರಾದರೂ ನಮ್ಮ ಮುಂದೆ ಬಂದು ನಿಂತಿದ್ದಾರಾ? ಹೀಗೆಂದು ಪ್ರಶ್ನಿಸಿದ್ದು ಸುಪ್ರೀಂ ಕೋರ್ಟ್. ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಜನ ಪ್ರತಿನಿಧಿಗಳು ಭಾಗಿಯಾಗಿದ್ದು, ಅವರ ವಿರುದ್ಧ ಪೊಲೀಸರು ಆರೋಪಪಟ್ಟಿ ದಾಖ ಲಿಸುತ್ತಿಲ್ಲ ಎಂದು ಆರೋಪಿಸಿ ಕೋರ್ಟ್ ಮೊರೆ ಹೋಗಿದ್ದ ವಕೀಲರೊಬ್ಬರಿಗೆ ನ್ಯಾಯಪೀಠ ಇಂಥ ಪ್ರಶ್ನೆ ಹಾಕಿದೆ. ಉನ್ನಾವ್ ಪ್ರಕರಣಕ್ಕೂ, ನಿಮಗೂ ಸಂಬಂಧ ಇಲ್ಲದಿರುವಾಗ ಅರ್ಜಿ ಸಲ್ಲಿಸಿದ್ದೇಕೆ ಎಂದೂ ಪ್ರಶ್ನಿಸಿರುವ ನ್ಯಾಯಪೀಠ, ವಕೀಲ ಶರ್ಮಾ ಅವರ ಅರ್ಜಿ ವಜಾ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.