ವಿಶೇಷ ವರದಿ : ನಿರ್ಭೀತ ಚುನಾವಣೆಗೆ ಪೊಲೀಸ್‌ ಇಲಾಖೆ ಸಜ್ಜು


Team Udayavani, Apr 21, 2018, 8:25 AM IST

Election-Symbolic-600.jpg

ಕುಂದಾಪುರ: ನಕ್ಸಲ್‌ ಬಾಧಿತ ಪ್ರದೇಶಗಳಿಗೆ ವಿಶೇಷ ಸಿಬಂದಿಗಳನ್ನು, CRPF ಯೋಧರನ್ನು ನೇಮಿಸಲಾಗುತ್ತದೆ. ಅಲ್ಲಲ್ಲಿ ಚೆಕ್‌ ಪೋಸ್ಟ್‌ ಗಳನ್ನು ಮಾಡಿ ಚುನಾವಣಾ ಅವ್ಯವಹಾರ ತಡೆಯಲಾಗುತ್ತಿದೆ. ಜನತೆ ಯಾವುದೇ ಹೆದರಿಕೆ ಇಲ್ಲದೆ ನಿರ್ಭೀತರಾಗಿ ಮತ ಚಲಾಯಿಸಬೇಕು ಎನ್ನುವುದೇ ಉದ್ದೇಶ ಎಂದು ಕುಂದಾಪುರ ಉಪವಿಭಾಗ ಡಿ.ವೈ.ಎಸ್‌.ಪಿ. ಬಿ.ಪಿ. ದಿನೇಶ್‌ ಕುಮಾರ್‌ ಹೇಳಿದ್ದಾರೆ. ಈಚೆಗಷ್ಟೇ ಕುಂದಾಪುರ ವಿಭಾಗ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ದಿನೇಶ್‌ ಕುಮಾರ್‌ ಚುನಾವಣೆ ತಯಾರಿ ಬಗ್ಗೆ ‘ಉದಯವಾಣಿ’ ಜತೆ ಮಾತಕತೆ ನಡೆಸಿದರು. 

ಚುನಾವಣಾ ಅಕ್ರಮ ತಡೆಗೆ ಶಿರೂರು, ದಳಿ, ಹಾಲಾಡಿ, ಹೊಸಂಗಡಿ, ಕಂಡೂÉರಿನಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಫ್ಲೈಯಿಂಗ್‌ ಸ್ಕ್ವಾಡ್‌ ಮೊದಲಾದ ಜಾಗೃತದಳಗಳು ಇದ್ದು ಅವು ಅಕ್ರಮ ಮದ್ಯ ಪೂರೈಕೆ, ಹಣ ಹಂಚುವಿಕೆಯಂತಹ ಪ್ರಕರಣ, ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಕಂಡು ಬಂದರೆ ದಾಳಿ ನಡೆಸುತ್ತಾರೆ. ಅನಂತರ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿ ಕಾನೂನು ಕ್ರಮ ಜರುಗುತ್ತದೆ. ಅಕ್ರಮಗಳ ವಿರುದ್ಧ  ಹದ್ದಿನ ಕಣ್ಣು ಇಡಲಾಗಿದೆ ಎಂದರು.


ಯೋಧರ ನಿಯೋಜನೆ

1 ಪ್ಲಟೂನ್‌ CRPF ಯೋಧರ ತಂಡ ಆಗಮಿಸಿದ್ದು ಇದನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಳಸಿಕೊಳ್ಳಲಾಗಿದೆ. ಇನ್ನೊಂದು ಪ್ಲಟೂನ್‌ ಆಗಮಿಸುತ್ತಿದ್ದು ಇದನ್ನು ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಲಾಗುವುದು. ವಿವಿಧ ಚೆಕ್‌ ಪೋಸ್ಟ್‌ಗಳಲ್ಲಿ ಸಿಆರ್‌ಪಿಎಫ್ನವರನ್ನು ಬಳಸಿಕೊಳ್ಳಲಾಗಿದೆ. ಒಟ್ಟು 160 ಯೋಧರು ಕರ್ತವ್ಯದಲ್ಲಿರುತ್ತಾರೆ. ಈಗಾಗಲೇ ಅನೇಕ ಕಡೆ ಪಥಸಂಚಲನ ನಡೆಸುವ ಮೂಲಕ ಪೊಲೀಸರು, ಯೋಧರು ಭದ್ರತೆ ಭಾವನೆ ಬಿತ್ತಿದ್ದಾರೆ ಎಂದರು.

ನಕ್ಸಲ್‌ ಬಾಧಿತ
ಕುಂದಾಪುರದಲ್ಲಿ 44, ಬೈಂದೂರಿನಲ್ಲಿ 49 ಸೂಕ್ಷ್ಮ ಮತಗಟ್ಟೆಗಳಿವೆ. ಕುಂದಾಪುರದಲ್ಲಿ 8, ಬೈಂದೂರಿನಲ್ಲಿ 19 ನಕ್ಸಲ್‌ ಬಾಧಿತ ಮತಗಟ್ಟೆಗಳಿವೆ. ಇವುಗಳಲ್ಲಿ ಕೂಡ ಸೂಕ್ತ ಬಂದೋಬಸ್ತು ಕೈಗೊಳ್ಳಲಾಗಿದೆ. ಡಿಸಿ ಹಾಗೂ ಎಸ್‌.ಪಿಯವರು ಈ ಪ್ರದೇಶಗಳಿಗೆ ಭೇಟಿ ನೀಡಿದ್ದು ಹಳ್ಳಿಹೊಳೆಯಲ್ಲಿ ಸಭೆ ನಡೆಸಿದ್ದಾರೆ. ಜನರಿಗೆ ಧೈರ್ಯ ತುಂಬಿದ್ದಾರೆ ಎಂದರು.

ಪೊಲೀಸರಿಗೆ ಆಹಾರ
ಸಾಮಾನ್ಯವಾಗಿ ಚುನಾವಣಾ ಕರ್ತವ್ಯ ನಿರತ ಪೊಲೀಸರಿಗೆ ಆಹಾರದ ಲಭ್ಯತೆ ಇರುವುದಿಲ್ಲ. ಎಲ್ಲೆಲ್ಲೋ ಕರ್ತವ್ಯ ನಿರ್ವಹಿಸಬೇಕಾದ ಕಾರಣ ಅಲ್ಲಿ ಸ್ಥಳೀಯವಾಗಿ ಹೊಟೇಲ್‌ ಗ‌ಳು ಇಲ್ಲದೇ ಪರದಾಟ ಸಾಮಾನ್ಯವಾಗಿತ್ತು. ಆದರೆ ಈಗ ಅಂತಹ ಸಮಸ್ಯೆ ಇಲ್ಲ. ಈ ಬಾರಿ ಆಹಾರ ಪೊಟ್ಟಣದ ವ್ಯವಸ್ಥೆ  ಮಾಡಲಾಗಿದೆ. ಚುನಾವಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.

– ಕುಂದಾಪುರ, ಬೈಂದೂರಿನಲ್ಲಿ ಸಿಆರ್‌ಪಿಎಫ್ ಪಡೆ  
– ಕುಂದಾಪುರ 44, ಬೈಂದೂರು 49 ಸೂಕ್ಷ್ಮ ಮತಗಟ್ಟೆಗಳು
– ಕುಂದಾಪುರ 8, ಬೈಂದೂರು 19 ನಕ್ಸಲ್‌ ಬಾಧಿತ ಮತಗಟ್ಟೆಗಳು
– 5 ಕಡೆ ಚೆಕ್‌ಪೋಸ್ಟ್‌ಗಳು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.