ಉಡುಪಿ: ಶೇ. 95ರಷ್ಟು ಪರವಾನಿಗೆ ಸಹಿತ ಶಸ್ತ್ರಾಸ್ತ್ರ ಜಮೆ


Team Udayavani, Apr 21, 2018, 8:50 AM IST

Weapon-20-4.jpg

ಉಡುಪಿ: ಚುನಾವಣೆ ನೀತಿ ಸಂಹಿತೆ ಜಾರಿಯಾದ ತತ್‌ ಕ್ಷಣದಿಂದ ಪರವಾನಿಗೆ ಪಡೆದು ಆತ್ಮರಕ್ಷಣೆಗಾಗಿ ಬಂದೂಕು ಇಲ್ಲವೇ ಕೋವಿಗಳನ್ನು ಇರಿಸಿ ಕೊಂಡಿರುವವರು ಕೂಡಲೇ ಹತ್ತಿರದ ಪೊಲೀಸ್‌ ಠಾಣೆಯಲ್ಲಿ ಅವುಗಳನ್ನು ಜಮೆ ಮಾಡುವಂತೆ ಆದೇಶ ನೀಡಲಾಗಿದೆ. ಅದರಂತೆ ಶೇ.95ರಷ್ಟು ಶಸ್ತ್ರಾಸ್ತ್ರಗಳು ಜಮೆಯಾಗಿವೆ.

3,840 ಕೋವಿ ಜಮೆ
ಉಡುಪಿ ಜಿಲ್ಲೆಯಲ್ಲಿ 4,757 ಮಂದಿ ಶಸ್ತ್ರಾಸ್ತ್ರ ಇರಿಸಿಕೊಳ್ಳಲು ಪರವಾನಿಗೆ ಹೊಂದಿದ್ದು, 4 ಸಾವಿರ ಶಸ್ತ್ರಾಸ್ತ್ರಗಳು ಮಾತ್ರ ಇವೆ. ಅವುಗಳಲ್ಲಿ 3,840 ಕೋವಿಗಳು ವಿವಿಧ ಪೊಲೀಸ್‌ ಠಾಣೆಗಳಲ್ಲಿ ಜಮಾ ಆಗಿವೆ. ಉಳಿದ ಕೋವಿಗಳನ್ನು ಕೆಲವು ಸೆಕ್ಯೂರಿಟಿ ಗಾರ್ಡ್‌ ಮತ್ತು ಜ್ಯುವೆಲ್ಲರಿ ಅಂಗಡಿಗಳ ಮಾಲಕರಿಗೆ ವಿಶೇಷ ಪ್ರಕರಣದಲ್ಲಿ ನೀಡಲಾಗಿದೆ ಎಂದು ಉಡುಪಿ ಎಸ್‌ಪಿ ಲಕ್ಷ್ಮಣ್‌ ನಿಂಬರಗಿ ಉದಯವಾಣಿಗೆ ತಿಳಿಸಿದ್ದಾರೆ. ಇನ್ನು 4,697 ನವೀಕರಣಗೊಳ್ಳದ ಪರವಾನಿಗೆಗಳಿವೆ. 17 ಪರವಾನಿಗೆಗಳು ವರ್ಗಾವಣೆಗೊಂಡಿವೆ. 34 ಶಸ್ತ್ರಾಸ್ತ್ರ ಪರವಾನಿಗೆ ಹೊಂದಿದ ವ್ಯಕ್ತಿಗಳು ಮೃತಪಟ್ಟಿದ್ದಾರೆ. 8 ಪರವಾನಿಗೆಗಳು ಸರಂಡರ್‌ ಆಗಿವೆ.

ಆತ್ಮರಕ್ಷಣೆ ಉದ್ದೇಶಕ್ಕೆ ವಿನಾಯಿತಿ
ಪ್ರಾಣಾಪಾಯ ಇದ್ದು ಆತ್ಮರಕ್ಷಣೆಗಾಗಿ ಬಂದೂಕು ಹೊಂದಿರುವುದು ಅತೀ ಅಗತ್ಯವೆಂದು ಕಂಡುಬಂದಲ್ಲಿ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳಬಹುದು. ಜಿಲ್ಲಾಧಿಕಾರಿಗಳು ಸತ್ಯಾಸತ್ಯತೆಯನ್ನು ಅರಿತು ಶಸ್ತ್ರಾಸ್ತ್ರ ಹೊಂದಿರಲು ಅನುಮತಿ ನೀಡಬಹುದು. ಇಲ್ಲವೇ ನ್ಯಾಯಾಲಯಕ್ಕೆ ಮನವಿಯನ್ನು ಸಲ್ಲಿಸಿ ನ್ಯಾಯಾಧೀಶರು ಸಮ್ಮತಿಸಿದರೆ ಇರಿಸಿಕೊಳ್ಳಬಹುದಾಗಿದೆ ಎಂದು ಎಸ್‌.ಪಿ ತಿಳಿಸಿದ್ದಾರೆ.

ರಾಜ್ಯದಲ್ಲಿ 94 ಸಾವಿರ ಪರವಾನಿಗೆದಾರರು
ರಾಜ್ಯದಲ್ಲಿ ಒಟ್ಟು 94,454 ಮಂದಿ ಶಸ್ತ್ರಾಸ್ತ್ರ ಇರಿಸಿಕೊಳ್ಳಲು ಪರವಾನಿಗೆ ಹೊಂದಿದ್ದಾರೆ. ಕಾರವಾರದಲ್ಲಿ ಪರವಾನಿಗೆ ಪಡೆದು ಬಂದೂಕು ಹೊಂದಿದವರು ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಅಲ್ಲಿ 10,226 ಶಸ್ತ್ರಾಸ್ತ್ರಗಳಿವೆ.

ಜಮೆ ಮಾಡದಿರುವುದು ಅಪರಾಧ
ಭಾರತೀಯ ಶಸ್ತ್ರಾಸ್ತ್ರ ಕಾನೂನು 1959ರ ಪ್ರಕಾರ ಪರವಾನಿಗೆ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದುವುದು ಅಪರಾಧ. ಪರವಾನಿಗೆ ಪಡೆದು ಕೋವಿ, ರಿವಾಲ್ವರ್‌ ಇರಿಸಿಕೊಳ್ಳಬಹುದಾದರೂ, ಚುನಾವಣೆಯಂತಹ ಸಂದರ್ಭಗಳಲ್ಲಿ ಅವುಗಳನ್ನು ಜಮೆ ಮಾಡಬೇಕು. ಹಾಗೆ ಮಾಡದೇ ಇರುವುದೂ ಅಪರಾಧವಾಗುತ್ತದೆ.

— ಆಸ್ಟ್ರೋ ಮೋಹನ್‌

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.