ಕೃತಕ ನೆರೆ, ಚರಂಡಿ ಸಮಸ್ಯೆ ಎದುರಿಸಲು ಸಿದ್ಧತೆ 


Team Udayavani, Apr 21, 2018, 10:01 AM IST

21-April-1.jpg

ಮಹಾನಗರ: ಮಳೆಗಾಲ ಶುರುವಾಯಿತು ಅಂದರೆ ಸ್ಮಾರ್ಟ್‌ ಸಿಟಿ ಎನಿಸಿಕೊಂಡಿರುವ ಮಂಗಳೂರಿನಂಥ ನಗರದಲ್ಲಿಯೂ ಕೃತಕ ನೆರೆ ಭೀತಿ ಸೃಷ್ಟಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕಾರ್ಯ ಪ್ರವೃತ್ತಗೊಂಡಿರುವ ಮಹಾನಗರ ಪಾಲಿಕೆಯು ಚರಂಡಿಗಳ ಹೂಳೆತ್ತುವ ಕಾರ್ಯ ನಡೆಸುತ್ತಿದೆ.

ನಗರದಲ್ಲಿರುವ ದೊಡ್ಡ ತೋಡುಗಳಲ್ಲಿ ಜೆಸಿಬಿ ಬಳಸಿ ಹೂಳು, ಕೆಸರು ಹಾಗೂ ಕಸ- ಕಡ್ಡಿ ತೆಗೆದು ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಅನುವು ಮಾಡಿಕೊಡುವ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಅತ್ತಾವರ, ಕಂಕನಾಡಿ, ಕುದ್ರೋಳಿ, ಬಲ್ಲಾಳ್‌ಬಾಗ್‌, ಜೆಪ್ಪಿನಮೊಗರು, ಪಂಪ್‌ವೆಲ್‌, ಕೊಟ್ಟಾರಚೌಕಿ, ಕೋಡಿಕಲ್‌, ಮಾಲೆಮಾರ್‌, ಉಜ್ಜೋಡಿ, ಜೆಪ್ಪು ಮಹಾಕಾಳಿಪಡ್ಪು , ಕೊಂಚಾಡಿ, ಪಾಂಡೇಶ್ವರ ಸಹಿತ ನಗರದಲ್ಲಿರುವ ದೊಡ್ಡ ತೋಡುಗಳನ್ನು
ಸ್ವತ್ಛಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

ಒಂದು ಮೀ. ಆಳವಿರುವ ತೋಡುಗಳನ್ನು ಪಾಲಿಕೆಯ ಆರೋಗ್ಯ ವಿಭಾಗದ ಉಸ್ತುವಾರಿಯಲ್ಲಿ ಆ್ಯಂಟನಿ ವೇಸ್ಟ್‌ ಮ್ಯಾನೇಜ್‌ ಮೆಂಟ್‌ ಕಂಪೆನಿಯ ಸಿಬಂದಿ ಮೂಲಕ ಸ್ವಚ್ಛಗೊಳಿಸುವ ಪ್ರಕ್ರಿಯೆ ನಡೆಯಲಿದೆ.

ಗ್ಯಾಂಗ್‌ಗಳ ರಚನೆ
ಪಾಲಿಕೆ 60 ವಾರ್ಡ್‌ಗಳಲ್ಲಿ ಮಳೆ ನೀರು ಹರಿದು ಹೋಗುವ ಚರಂಡಿಗಳಲ್ಲಿ ತುಂಬುವ ಹೂಳು ಹಾಗೂ ಮಣ್ಣು ತೆಗೆದು ಸ್ವಚ್ಛಗೊಳಿಸುವ ಕಾರ್ಯಕ್ಕೆ ಈಗಾಗಲೇ 25 ಗ್ಯಾಂಗ್‌ಗಳನ್ನು ರಚಿಸಲಾಗಿದೆ. ಇವುಗಳ ಉಸ್ತುವಾರಿಗೆ ಪಾಲಿಕೆಯ ಎಂಜಿನಿಯರ್‌ಗಳನ್ನು ನಿಯುಕ್ತಿಗೊಳಿಸಿ ಅವರಿಗೆ ವಾರ್ಡ್‌ಗಳನ್ನು ವಿಂಗಡಿಸಿ ನೀಡಲಾಗುತ್ತದೆ. ಮಳೆಗಾಲದಲ್ಲಿ ತುರ್ತು ಸಂದರ್ಭಗಳಲ್ಲಿ ಕಾರ್ಯ ನಿರ್ವಹಿಸಲು ತುರ್ತು ಕಾರ್ಯಾಚರಣೆ ತಂಡವನ್ನು ರಚಿಸಲಾಗುತ್ತಿದೆ. ಪ್ರಾಕೃತಿಕ ವಿಕೋಪಗಳಿಗೆ ತುರ್ತು ಸ್ಪಂದಿಸಲು ಪಾಲಿಕೆಯಲ್ಲಿ ಸಹಾಯವಾಣಿಯನ್ನು ಕೂಡ ಸ್ಥಾಪಿಸಲಾಗುತ್ತದೆ.

ಮುನ್ನೆಚ್ಚರಿಕೆ ಕ್ರಮಗಳು ಅಗತ್ಯ
ತೋಡು, ಚರಂಡಿಗಳಲ್ಲಿ ಹೂಳೆತ್ತುವ ಕಾರ್ಯ ಪ್ರತಿವರ್ಷ ನಡೆಯುತ್ತಿದೆ. ಕೃತಕ ನೆರೆಯೂ ಪುನಾರಾವರ್ತನೆಯಾಗುತ್ತಿದೆ. ಈ ಹಿಂದಿನ ವರ್ಷಗಳಲ್ಲಿ ಕೃತಕ ನೆರೆ ಸಂಭವಿಸಿದ ಪ್ರದೇಶಗಳಲ್ಲಿ ಮಳೆ ನೀರು ಸುಗಮವಾಗಿ ಹರಿದು ಹೋಗುವ ವ್ಯವಸ್ಥೆಯ ಬಗ್ಗೆ ಹೆಚ್ಚು ನಿಗಾವಹಿಸುವುದು ಅವಶ್ಯ. ಹಾಗಾಗಿ ನೀರು ಹರಿದು ಹೋಗಲು ಇರುವ ಅಡಚಣೆಗಳನ್ನು ನಿವಾರಿಸಲು ಕೈಗೊಳ್ಳುವ ಕ್ರಮಗಳು, ತೋಡು, ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯ ಸಮರ್ಪಕವಾಗಿ ನಡೆದಿದೆಯೇ ಎಂಬ ಬಗ್ಗೆ ಅಧಿಕಾರಿಗಳು ಹಾಗೂ ವಾರ್ಡ್‌ ಗಳ ಜನಪ್ರತಿನಿಧಿಗಳು ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಬೇಕಾಗಿದೆ.

ನಗರದ ತಗ್ಗು ಪ್ರದೇಶಗಳು ಮತ್ತು ಕೃತಕ ನೆರೆ ಸಂಭವನೀಯ ಪ್ರದೇಶಗಳಾದ ಕೊಟ್ಟಾರ ಜಂಕ್ಷನ್‌, ಜೆಪ್ಪಿನಮೊಗರು, ಅತ್ತಾವರ, ಹೊಗೆ ಬಜಾರ್‌ ಮುಂತಾದ ಪ್ರದೇಶಗಳ ಬಗ್ಗೆ ನಿಗಾವಹಿಸಿ ಪೂರಕ ಕ್ರಮಗಳನ್ನು ಕೈಗೊಂಡರೆ ಮಳೆಗಾಲದಲ್ಲಿ ಆಗುವ ಸಂಭಾವ್ಯ ಸಮಸ್ಯೆಗಳನ್ನು ನಿವಾರಿಸಬಹುದಾಗಿದೆ. 

ರಸ್ತೆಗಳು ತೋಡುಗಳಾಗದಿರಲಿ 
ನಗರದಲ್ಲಿ ಹೆಚ್ಚಿನ ರಸ್ತೆಗಳಲ್ಲಿ ಕಾಂಕ್ರೀಟ್‌ ಕಾಮಗಾರಿಗಳು ಬಹುತೇಕ ಮುಗಿದಿವೆ ಆದರೆ ಅನೇಕ ರಸ್ತೆಗಳ ಬದಿಯಲ್ಲಿ ಚರಂಡಿ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ನಗರದ ಬಂಟ್ಸ್‌ಹಾಸ್ಟೆಲ್‌, ಕದ್ರಿ ಕಂಬಳ, ಬಿಜೈ, ಕೆ.ಎಸ್‌.ಆರ್‌. ರಾವ್‌ ರಸ್ತೆ ಮುಂತಾದೆಡೆಗಳಲ್ಲಿ ಈ ಮಳೆಗಾಲದಲ್ಲಿ ರಸ್ತೆಯೇ ತೋಡು ಆಗಿ ಪರಿವರ್ತನೆಯಾಗುತ್ತಿರುವ ಸಮಸ್ಯೆ ಪ್ರತಿವರ್ಷ ಆಗುತ್ತಿದೆ. ನಗರದ ಪಂಪ್‌ವೆಲ್‌ನಲ್ಲಿ ಫ್ಲೈಓವರ್‌ ಸಹಿತ ಕೆಲವು ಕಡೆಗಳಲ್ಲಿ ಇನ್ನೂ ಆಮೆಗತಿಯಲ್ಲಿರುವ ಹೆದ್ದಾರಿ ಚತುಷ್ಪಥ ಕಾಮಗಾರಿಯು ಈ ಬಾರಿ ಮತ್ತೆ ಸಮಸ್ಯೆ ಸೃಷ್ಟಿಸುವ ಸಂಭವವಿದೆ. 

ಮಳೆಗಾಲದ ಸಿದ್ಧತೆ ಆರಂಭಿಸಲಾಗಿದೆ
ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ಈಗಾಗಲೇ ಪೂರಕ ಸಿದ್ಧತೆಗಳನ್ನು ಆರಂಭಿಸಲಾಗಿದೆ. ದೊಡ್ಡ ತೋಡುಗಳ ಹೂಳೆತ್ತುವ ಕಾರ್ಯ ನಡೆಯುತ್ತಿದೆ. 60 ವಾರ್ಡ್‌ಗಳಿಗೆ 25 ಗ್ಯಾಂಗ್‌ಗಳನ್ನು ರಚಿಸಲಾಗಿದ್ದು , ಚರಂಡಿಗಳ ಹೂಳು ಹಾಗೂ ಮಣ್ಣು ತೆಗೆಯುವುದು ಸಹಿತ ಅವಶ್ಯ ಕೆಲಸಗಳನ್ನು ನಿರ್ವಹಿಸಲಿದ್ದಾರೆ.
– ಮಹಮ್ಮದ್‌ ನಜೀರ್‌,
ಆಯುಕ್ತರು,ಮನಪಾ

 ಕೇಶವ ಕುಂದರ್‌

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.