ಯಡಿಯೂರಪ್ಪ ಟಿಕೆಟ್ ಮಾರಿದ್ದಾರೆ: ಮಾಜಿ ಸಚಿವ ಬೆಳಮಗಿ ಬಂಡಾಯ
Team Udayavani, Apr 21, 2018, 10:28 AM IST
ಕಲಬುರಗಿ: ಗ್ರಾಮೀಣ ಮೀಸಲು ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತ್ ಸದಸ್ಯ ಬಸವರಾಜ ಮತ್ತಿಮೂಡ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿರುವ ಹಿನ್ನಲೆಯಲ್ಲಿ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅವರು ಬಂಡಾಯವೆದ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಮಗಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕಿಡಿ ಕಾರಿದರು.
ನಾನು ಕೆಜೆಪಿಗೆ ಹೋಗಲಿಲ್ಲ, ಹೀಗಾಗಿ ಯಡಿಯೂರಪ್ಪ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಅವರು ಟಿಕೆಟನ್ನು ಮಾರಾಟ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಬೆಂಬಲಿಗರ ಸಭೆ ನಡೆಸಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಬೆಳಮಗಿ ತಿಳಿಸಿದ್ದಾರೆ.
ಈ ಕ್ಷೇತ್ರದಲ್ಲಿ ಬಾಬುರಾವ ಚವ್ಹಾಣ ಸೇರಿದಂತೆ ಇತರರು ತೀವ್ರ ಟಿಕೆಟ್ ಆಕಾಂಕ್ಷಿಗಳಾಗಿದ್ದರು.ಬೆಳಮಗಿ ಅವರಿಗೆ ಮತ್ತೂಮ್ಮೆ ಮಣೆ ಹಾಕಲಾಗುತ್ತದೆ ಎಂದು ಬಲವಾಗಿ ನಂಬಲಾಗಿತ್ತು. ಆದರೆ ಬಸವರಾಜ ಮತ್ತಿಮೂಡ ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ಬೆಳಮಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಮೀಸಲು ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎದುರು ಪರಾಭವಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.