ಚಿನ್ನದ ಸರಕ್ಕಾಗಿ ಮಹಿಳೆಯ ಕೊಂದವನ ಸೆರೆ


Team Udayavani, Apr 21, 2018, 11:55 AM IST

s-6.jpg

ಬೆಂಗಳೂರು: ಪರಿಚಯಸ್ತರ ಮನೆಗೇ ನುಗ್ಗಿದ ದುಷ್ಕರ್ಮಿ, ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಚಿನ್ನದ ಸರದೊಂದಿಗೆ ಪರಾರಿಯಾದ ಘಟನೆ ಗುರುವಾರ ನಡೆದಿದ್ದು, ಪ್ರಕರಣ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಚಿಕ್ಕಜಾಲ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರಮೇಶ್‌(35) ಬಂಧಿತ ಆರೋಪಿ. ಹುಣಸಮಾರನಹಳ್ಳಿಯ ಭಾರತೀನಗರದ ಶ್ರೀನಿವಾಸ್‌ ಎಂಬುವರ ಪತ್ನಿ ಚಂದ್ರಕಲಾ (35) ಮೃತರು. ಶ್ರೀನಿವಾಸ್‌ ಸಲೂನ್‌ ಶಾಪ್‌ ಹೊಂದಿದ್ದು, ಪತ್ನಿ ಮತ್ತು ಮಕ್ಕಳೊಂದಿಗೆ ಭಾರತೀನಗರದಲ್ಲೇ ಮನೆ ಮಾಡಿದ್ದಾರೆ. ಸಲೂನ್‌ ಪಕ್ಕದಲ್ಲೇ ವಾಸವಿರುವ ಆರೋಪಿ ರಮೇಶ್‌, ಶ್ರೀನಿವಾಸ್‌ರ ಕುಟುಂಬಕ್ಕೆ ಪರಿಚಿತನಾಗಿದ್ದು, ಆಗಾಗ ಅವರ ಮನೆಗೆ ಹೋಗಿಬರುತ್ತಿದ್ದ.

ಶಾಲೆಗೆ ಬೇಸಿಗೆ ರಜೆ ಇರುವ ಕಾರಣ, ಶ್ರೀನಿವಾಸ್‌ರ ಮಕ್ಕಳು ಅಜ್ಜಿ ಮನೆಗೆ ತೆರಳಿದ್ದರು. ಗುರುವಾರ ಶ್ರೀನಿವಾಸ್‌ ಅಂಗಡಿಗೆ ತೆರಳಿದ ಬಳಿಕ ಚಂದ್ರಕಲಾ ಒಬ್ಬರೇ ಮನೆಯಲ್ಲಿದ್ದರು. ಸಂಜೆ ನಾಲ್ಕು ಗಂಟೆ ಸುಮಾರಿಗೆ ಮನೆಗೆ ಬಂದ ರಮೇಶ್‌, ಚಿನ್ನದ ಸರ ನೀಡುವಂತೆ ಚಂದ್ರಕಲಾರನ್ನು ಕೇಳಿದ್ದ.

ಆದರೆ, ಅವರು ನಿರಾಕರಿಸಿದಾಗ ಕತ್ತು ಹಿಸುಕಿ ಅವರ ಕೊಲೆಗೈದು ಚಿನ್ನದ ಸರ ಕಸಿದು ಪರಾರಿಯಾಗಿದ್ದ. ಸಂಜೆ 5 ಗಂಟೆ ಸುಮಾರಿಗೆ ಚಂದ್ರಕಲಾ ತಾಯಿ ಮನೆಗೆ ಬಂದಾಗ ಮಗಳು ಬಿದ್ದಿರುವುದು ಕಂಡು ಅಕ್ಕ-ಪಕ್ಕದ ನಿವಾಸಿಗಳಿಗೆ ವಿಚಾರ ತಿಳಿಸಿದರು. ಸ್ಥಳಕ್ಕೆ ಬಂದ ಸ್ಥಳೀಯರೊಬ್ಬರು ಚಂದ್ರಕಲಾ ಮೃತಪಟ್ಟಿರುವುದಾಗಿ ತಿಳಿಸಿದರು.

ಕೂಡಲೇ ಶ್ರೀನಿವಾಸ್‌ರನ್ನು ಕರೆಸಿ ಪೊಲೀಸರಿಗೆ ದೂರು ನೀಡಲಾಯಿತು. ಪ್ರಕರಣ ದಾಖಲಿಸಿಕೊಂಡ ಚಿಕ್ಕಜಾಲ ಠಾಣೆ ಪೊಲೀಸರು, ರಮೇಶ್‌ ಬಗ್ಗೆ ಅನುಮಾನಗೊಂಡು ಶುಕ್ರವಾರ ಬೆಳಗ್ಗೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.