ಅಪ್ರಾಪ್ತೆಯ ವೇಶ್ಯಾವಾಟಿಕೆಗೆ ದೂಡಿದ ಐವರ ಬಂಧನ


Team Udayavani, Apr 21, 2018, 11:56 AM IST

arrest2.jpg

ಬೆಂಗಳೂರು: ಆಶ್ರಯ ನೀಡುವ ನೆಪದಲ್ಲಿ ಅಪ್ರಾಪ್ತೆಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿಯ ಸ್ನೇಹಿತೆ ಸೇರಿ ಐವರು ಆರೋಪಿಗಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆಯ ತಾಯಿಯ ಸ್ನೇಹಿತೆ ಆಶಾ, ಈಕೆಯ ಪತಿ ವೀರೇಶ್‌, ಸಂಬಂಧಿ ಜಸ್ಸಿಕಾ, ಭರತ್‌ ಹಾಗೂ ಮುರುಳಿ ಎಂಬುವವರನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪೊಕೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ನೀಡಿರುವ ದೂರಿನಲ್ಲಿ ಇನ್ನೂ ಮೂವರು ಆರೋಪಿಗಳ ಹೆಸರಿದ್ದು, ಅವರನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಮೂಲದ ಸಂತ್ರಸ್ತೆಯ ತಾಯಿ 2010ರಲ್ಲಿ ಮೃತಪಟ್ಟಿದ್ದು, ಬಳಿಕ ಮಾವ ಸಗಾಯ್‌ ರಾಜ್‌ ಹಾಗೂ ಅತ್ತೆ ಮೇರಿ ಜತೆ ದೊರೆಸ್ವಾಮಿ ಪಾಳ್ಯದ ಅವರ ಮನೆಯಲ್ಲಿ ಸಂತ್ರಸ್ತೆ ವಾಸವಿದ್ದಳು. ಕೆಲ ದಿನಗಳ ಬಳಿಕ ಸಂತ್ರಸ್ತೆಯ ತಾಯಿಯ ಸ್ನೇಹಿತೆ ಆಶಾ ಬಂದು, ಆಕೆಗೆ ನಾನು ಆಶ್ರಯ ನೀಡುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಸಗಾಯ್‌ ರಾಜ್‌ ಬಾಲಕಿಯನ್ನು ಆಶಾ ಜತೆ ಕಳುಹಿಸಿಕೊಟ್ಟಿದ್ದರು.

ಸಂತ್ರಸ್ತೆ ಕೆಲ ತಿಂಗಳ ಕಾಲ ಆಶಾಳ ಮನೆಯಲ್ಲಿ ವಾಸವಿದ್ದಳು. ಈ ವೇಳೆ ಆಶಾಳ ಪತಿ ವೀರೇಶ್‌ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ. ಇದು ಗೊತ್ತಿದ್ದರೂ ಸುಮ್ಮನಿದ್ದ ಆಶಾ, ನಂತರ ಸಂತ್ರಸ್ತೆಯನ್ನು ಜೆಸ್ಸಿಕಾ ಎಂಬ ತನ್ನ ಸಂಬಂಧಿ ಮನೆಗೆ ಕಳುಹಿಸಿಕೊಟ್ಟಿದ್ದಳು. ಆದರೆ, ಹಣದಾಸೆಗೆ ಬಿದ್ದ ಜೆಸ್ಸಿಕಾ, ಅಪ್ರಾಪ್ತೆಯನ್ನು ವೇಶ್ಯಾವಾಟಿಕೆ ದಂಧೆಗೆ ದೂಡಿ, ಹಣ ಕೊಟ್ಟವರ ಜತೆ ಆಕೆಯನ್ನು ಕಳುಹಿಸುತ್ತಿದ್ದಳು. ಜಸ್ಸಿಕಾಳ ಕಾರು ಚಾಲಕ ಮುರಳಿ ಕೂಡ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ.

ಕೆಲ ಸಮಯದ ಬಳಿಕ ಇವರಿಂದ ತಪ್ಪಿಸಿಕೊಂಡ ಸಂತ್ರಸ್ತೆ, ತಮಿಳುನಾಡಿನ ವಿಳ್ಳುಪುರಂಗೆ ತೆರಳಿ ಮನೆಯೊಂದರಲ್ಲಿ ಆಶ್ರಯ ಪಡೆದಿದ್ದಳು. ಆದರೆ, ಆಶಾಳ ಪತಿ ವೀರೇಶ್‌ನ ಸಂಬಂಧಿ ಭರತ್‌ ಎಂಬಾತ ವಿಳ್ಳುಪುರಂಗೆ ತೆರಳಿ, ಮನೆಗೆ ನುಗ್ಗಿ ಸಂತ್ರಸ್ತೆ ಮೇಲೆ ಹಲ್ಲೆ ನಡೆಸಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ತಮಿಳುನಾಡಿನ ವಿಳ್ಳುಪುರಂ ಠಾಣೆ ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿ ಮಕ್ಕಳ ರಕ್ಷಣಾ ಸಮಿತಿಗೆ ಒಪ್ಪಿಸಿದ್ದರು. ಅನಂತರ ಆಕೆಯನ್ನು ಬೆಂಗಳೂರಿನ ಮಕ್ಕಳ ರಕ್ಷಣಾ ಸಮಿತಿಗೆ ಸ್ಥಳಾಂತರಿಸಲಾಗಿತ್ತು.

ಇದೀಗ ನಗರದ ಬಾಲಗೃಹ ಒಂದರಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತೆ ನಡೆದ ಘಟನೆಗಳನ್ನು ಪೊಲೀಸರಿಗೆ ವಿವರಿಸಿದ್ದಾಳೆ. ಆಶಾಳ ಮನೆಯಲ್ಲಿ ತನ್ನ ಮೇಲೆ ದೌರ್ಜನ್ಯ ನಡೆಯುತ್ತಿರುವ ವಿಷಯ ತಿಳಿದಿದ್ದರೂ, ಅತ್ತೆ ಮೇರಿ ಹಾಗೂ ಮಾವ ಸಗಾಯ್‌ ರಾಜ್‌ ತನ್ನನ್ನು ಮನೆಗೆ ಕರೆದುಕೊಂಡು ಹೋಗದೆ ನಿರ್ಲಕ್ಷ್ಯವ ವಹಿಸಿದ್ದಾರೆ ಎಂದು ವಿವರಿಸಿರುವ ಸಂತ್ರಸ್ತೆ, ತನ್ನ ಅತ್ತೆ, ಮಾವ, ತಾಯಿಯ ಸ್ನೇಹಿತೆ ಸೇರಿದಂತೆ 8 ಮಂದಿ ವಿರುದ್ಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದರಂತೆ ಪೊಲೀಸರು ಆರೋಪಿಗಳ ವಿರುದ್ಧ ಪೊಕೊÕà ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.