ಬಹುಮಹಡಿ ನಿವಾಸಿಗಳ ಚಿತ್ತ ಪ್ರಣಾಳಿಕೆಯತ್ತ


Team Udayavani, Apr 21, 2018, 11:56 AM IST

bahu-mahadi.jpg

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ ನಿವಾಸಿಗಳ ಚಿತ್ತ ಈಗ ವಿವಿಧ ಪಕ್ಷಗಳು ಬಿಡುಗಡೆ ಮಾಡಲಿರುವ ಚುನಾವಣಾ ಪ್ರಣಾಳಿಕೆಯತ್ತ ನೆಟ್ಟಿದ್ದು, ತಮ್ಮ ಸಮಸ್ಯೆಗಳನ್ನು ನಿವಾರಿಸುವ ಭರವಸೆ ನೀಡುವವರ ಬೆಂಬಲಿಸಲು ಮುಂದಾಗಿದ್ದಾರೆ.

ಬೆಳ್ಳಂದೂರು ಕೆರೆ ನೊರೆ ಸಮಸ್ಯೆ ಉಂಟಾದಾಗೆಲ್ಲಾ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳಲ್ಲಿ ನಡುಕ ಹುಟ್ಟುತ್ತದೆ. ಈ ಬಗ್ಗೆ ಜನಪ್ರತಿನಿಧಿಗಳಿಂದ ಯಾವುದೇ ನೆರವು ತಮಗೆ ಸಿಗುತ್ತಿಲ್ಲ. ಇದರಿಂದ ಕಂಗೆಟ್ಟ ಅಪಾರ್ಟ್‌ಮೆಂಟ್‌ ನಿವಾಸಿಗಳು, ಚುನಾವಣೆಯನ್ನು ಅಸ್ತ್ರವಾಗಿ ಬಳಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಅಡಿ ಒಗ್ಗಟ್ಟಾಗಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ನಿರ್ಧರಿಸಿದ್ದಾರೆ. 

ಕೊಳಚೆನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಅಳವಡಿಕೆಯಲ್ಲಿರುವ ಗೊಂದಲ ಈಗಲೂ ಮುಂದುವರಿದಿದೆ. ಇದಕ್ಕೊಂದು ಸರಿಯಾದ ಮಾರ್ಗಸೂಚಿ ಇಲ್ಲ. ಈ ಎಸ್‌ಟಿಪಿಗೆ ಬಳಸಲಾಗುವ ವಿದ್ಯುತ್‌ಗೆ “ವಾಣಿಜ್ಯ ಉದ್ದೇಶ’ದ ದರ ವಿಧಿಸಲಾಗುತ್ತಿದೆ. ನೀರಿನ ಬಳಕೆ ಶುಲ್ಕ ಸಾಮಾನ್ಯ ಬಳಕೆದಾರರಿಗಿಂತ ಮೂರುಪಟ್ಟು ಹೆಚ್ಚು ವಸೂಲು ಮಾಡಲಾಗುತ್ತಿದೆ.

ಇಂತಹ ಹತ್ತುಹಲವು ಸಮಸ್ಯೆಗಳನ್ನು ಬೆಂಗಳೂರು ಅಪಾರ್ಟ್‌ಮೆಂಟ್‌ಗಳು ಎದುರಿಸುತ್ತಿವೆ. ಈ ಸಮಸ್ಯೆಗಳನ್ನು ಪ್ರಸ್ತಾಪಿಸುವ ಪ್ರಣಾಳಿಕೆಯನ್ನು ಅಪಾರ್ಟ್‌ಮೆಂಟ್‌ ನಿವಾಸಿಗಳು ಎದುರುನೋಡುತ್ತಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಯ ಭರವಸೆ ನೀಡುವಂತಹ ಪಕ್ಷಗಳ ಪರವಾಗಿ ನಿಲ್ಲಲು ಚಿಂತನೆ ನಡೆಸಿದ್ದಾರೆ. 

ಈ ಕುರಿತು ಚರ್ಚಿಸಲು ಏಪ್ರಿಲ್‌ 22ರಂದು ನಗರದ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮತ್ತು ಆಮ್‌ ಆದ್ಮಿ ಪಕ್ಷದ ಮುಖಂಡರನ್ನು ಆಹ್ವಾನಿಸಿದ್ದು, ಅಲ್ಲಿ ನಮ್ಮ ಸಮಸ್ಯೆಗಳನ್ನು ಆ ನಾಯಕರ ಮುಂದಿಡಲಾಗುವುದು. ನಂತರ ಯಾವ್ಯಾವ ಪಕ್ಷಗಳು ಏನು ಭರವಸೆ ನೀಡಿವೆ ಎಂಬುದನ್ನು ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ತಿಳಿಸಲಾಗುವುದು. ಅದನ್ನು ಆಧರಿಸಿ ಸ್ವತಃ ನಿವಾಸಿಗಳು ಯಾರನ್ನು ಬೆಂಬಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ ಎಂದು ಬೆಂಗಳೂರು ಅಪಾರ್ಟ್‌ಮೆಮಟ್‌ ಫೆಡರೇಷನ್‌ (ಬಿಎಎಫ್) ಕಾರ್ಯದರ್ಶಿ ಕೆ.ವಿ. ಪ್ರಸನ್ನ “ಉದಯವಾಣಿ’ಗೆ ತಿಳಿಸಿದರು. 

ಹಠಕ್ಕೆ ಬಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು: ಎಸ್‌ಟಿಪಿ ಸೇರಿದಂತೆ ಹಲವು ಸಮಸ್ಯೆಗಳನ್ನು ತೆಗೆದುಕೊಂಡು ಅನೇಕ ಬಾರಿ ಸ್ಥಳೀಯ ಕಾರ್ಪೋರೇಟರ್‌, ಶಾಸಕರ ಬಳಿ ಹೋಗಿದ್ದೇವೆ. ಆದರೆ, ಅವರೆಲ್ಲರಿಂದ “ನೀವು (ಅಪಾರ್ಟ್‌ಮೆಂಟ್‌ ನಿವಾಸಿಗಳು) ವೋಟು ಹಾಕುವುದೇ ಇಲ್ವಲ್ಲಾ’ ಎಂಬ ಉತ್ತರ ಬರುತ್ತಿತ್ತು. ಆಗ, ನಮ್ಮ ಮತದಾನದ ಹಕ್ಕಿನ ಬಗ್ಗೆ ಮನದಟ್ಟಾಯ್ತು.

ಇದೇ ಕಾರಣಕ್ಕೆ ಹಠಕ್ಕೆ ಬಿದ್ದು, ಮತದಾರರ ನೋಂದಣಿ ಮಾಡಿಸಿದ್ದೇವೆ. ಇದರ ಫ‌ಲವಾಗಿ ಸುಮಾರು 25 ಸಾವಿರಕ್ಕೂ ಅಧಿಕ ಮತದಾರರು ಸೇರ್ಪಡೆಯಾಗಿದ್ದಾರೆ. ತಮ್ಮ ಊರುಗಳಲ್ಲಿರುವ ಮತದಾರರ ಗುರುತಿನ ಚೀಟಿ ರದ್ದುಪಡಿಸಿ, ಬೆಂಗಳೂರಿನಲ್ಲಿ ನೋಂದಣಿ ಮಾಡಿಸಿದ್ದೇವೆ. ಅಲ್ಲದೆ, ಗರಿಷ್ಠ ಮತದಾನಕ್ಕೆ ಪಣತೊಟ್ಟಿದ್ದೇವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮತ ಚಲಾಯಿಸುವಂತೆ ಮನವಿ ಮಾಡಲಾಗುತ್ತಿದೆ.

ಅಪಾರ್ಟ್‌ಮೆಂಟ್‌ಗಳಲ್ಲಿ ಈ ಸಂಬಂಧದ ಹೋಲ್ಡಿಂಗ್‌ ಹಾಕಲಾಗಿದೆ. ವಾಯುವಿಹಾರಕ್ಕೆ ಸಿಕ್ಕಲ್ಲಿ ಮತ ಹಾಕುವಂತೆ ಕೋರುವುದು ಸೇರಿದಂತೆ ಹಲವು ರೀತಿಯ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರಸನ್ನ ಮಾಹಿತಿ ನೀಡಿದರು. ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಈ ಅಪಾರ್ಟ್‌ಮೆಂಟ್‌ ನಿವಾಸಿಗಳ ಮತದಾನದ ಪ್ರಮಾಣ ಶೇ. 20ಕ್ಕಿಂತ ಕಡಿಮೆ ಇರುತ್ತದೆ. ಈ ಸಲ ಇದನ್ನು ಶೇ. 80ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದೂ ಅವರು ಹೇಳಿದರು. 

ನಿರ್ಣಾಯಕ ಆಗುವ ಸಾಧ್ಯತೆ: ನಗರದಲ್ಲಿ 100ಕ್ಕೂ ಅಧಿಕ ಫ್ಲ್ಯಾಟ್‌ಗಳಿರುವ 4-5 ಸಾವಿರ ಅಪಾರ್ಟ್‌ಮೆಂಟ್‌ಗಳೂ ಸೇರಿ ಒಟ್ಟಾರೆ 10 ಸಾವಿರಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿದ್ದು, ಇದರಲ್ಲಿ ಸುಮಾರು ಎರಡು ಲಕ್ಷ ಮತದಾರರು ಇದ್ದಾರೆ. ಬೊಮ್ಮನಹಳ್ಳಿ, ಹೆಬ್ಟಾಳ, ಸಿ.ವಿ. ರಾಮನ್‌ನಗರ, ಮಹದೇವಪುರ, ಬೆಂಗಳೂರು ದಕ್ಷಿಣ, ಬನ್ನೇರುಘಟ್ಟ ರಸ್ತೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಅಪಾರ್ಟ್‌ಮೆಂಟ್‌ಗಳು ಹೆಚ್ಚಿನ ಸಂಖ್ಯೆಯಲ್ಲಿವೆ.

ಅಲ್ಲೆಲ್ಲಾ ಅಂದುಕೊಂಡಂತೆ ಗರಿಷ್ಠ ಪ್ರಮಾಣದಲ್ಲಿ ಮತ ಚಲಾಯಿಸಿದರೆ, ಈ ಅಪಾರ್ಟ್‌ಮೆಂಟ್‌ ನಿವಾಸಿಗಳು ನಿರ್ಣಾಯಕ ಆಗುವ ಸಾಧ್ಯತೆ ಇದೆ ಎಂದು ಯುವ ಮತದಾರ ನೋಂದಣಿ ಮತ್ತು ಜಾಗೃತಿ ಅಭಿಯಾನ ಕಾರ್ಯಕರ್ತ ಡಿ.ವಿ. ಆನಂದ್‌ ಅಭಿಪ್ರಾಯಪಡುತ್ತಾರೆ. ಕಳೆದ ಚುನಾವಣೆಗಳಿಗೆ ಹೋಲಿಸಿದರೆ, ಅಪಾರ್ಟ್‌ಮೆಂಟ್‌ ನಿವಾಸಿಗಳಲ್ಲಿ ಈ ಬಾರಿ ಆಸಕ್ತಿ ಇದೆ. ಮತ ಚಲಾಯಿಸಲು ಅವರೆಲ್ಲಾ ಉತ್ಸುಕರಾಗಿದ್ದಾರೆ. ಸಾವಿರಾರು ಮತದಾರರನ್ನು ಸ್ವತಃ ನಾನೇ ನೋಂದಣಿ ಮಾಡಿಸಿದ್ದೇನೆ ಎಂದೂ ಆನಂದ್‌ ತಿಳಿಸುತ್ತಾರೆ. 

ಬೇಡಿಕೆಗಳು: ಕೊಳಚೆನೀರು ಸಂಸ್ಕರಣಾ ಘಟಕಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು. ನೀರಿನ ಶುಲ್ಕ ಸಾಮಾನ್ಯವಾಗಿರಬೇಕು. ಘನತ್ಯಾಜ್ಯ ಸಂಗ್ರಹಕ್ಕೆ ಸೆಸ್‌ ಪಡೆಯಲಾಗುತ್ತಿದೆ. ಆದರೆ, ಅದಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಿಲ್ಲ. ಇದನ್ನು ಪೂರೈಸಬೇಕು. ವಿನಾಕಾರಣ ಅಪಾರ್ಟ್‌ಮೆಂಟ್‌ಗಳನ್ನು ಟಾರ್ಗೆಟ್‌ ಮಾಡಬಾರದು. 

-10 ಸಾವಿರ ನಗರದಲ್ಲಿರುವ ಅಂದಾಜು ಅಪಾರ್ಟ್‌ಮೆಂಟ್‌ಗಳು
-2 ಲಕ್ಷ ಅಪಾರ್ಟ್‌ಮೆಂಟ್‌ಗಳಲ್ಲಿರುವ ಮತದಾರರು
-25 ಸಾವಿರ ಅಪಾರ್ಟ್‌ಮೆಂಟ್‌ಗಳಿಂದ ಹೊಸದಾಗಿ ಸೇರ್ಪಡೆಗೊಂಡ ಮತದಾರರು
-250 ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ನಲ್ಲಿರುವ ಗ್ರೂಪ್‌ಗ್ಳು

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.