“ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಿಲ್ಲ’


Team Udayavani, Apr 22, 2018, 6:30 AM IST

210418use1b.jpg

ಉಡುಪಿ: ಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ. ಸ್ಪರ್ಧಿಸಲು ಸಂಕಲ್ಪ ಮಾಡಿದ್ದೇನೆ. ಹಾಗಾಗಿ ಎರಡನೇ ಮಾತಿಲ್ಲ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶನಿವಾರದಂದು ನಾಮಪತ್ರ ಸಲ್ಲಿಸಿದ ಶೀರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಪಕ್ಷೇತರನಾದರೂ ಬಿಜೆಪಿಗೇ ಲಾಭ
ನಾಮಪತ್ರ ಸಲ್ಲಿಕೆಗೂ ಮೊದಲು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ನಾನು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೆ. ಟಿಕೆಟ್‌ ಸಿಗುವ ವಿಶ್ವಾಸವಿತ್ತು. ಆದರೆ ಈಗ ಬೇರೆಯವರಿಗೆ ಟಿಕೆಟ್‌ ನೀಡಲಾಗಿದೆ. ಹಾಗಾಗಿ ಪಕ್ಷೇತರ ನಾಗಿ ಸ್ಪರ್ಧಿಸುತ್ತಿದ್ದೇನೆ. ನರೇಂದ್ರ ಮೋದಿ, ಅಮಿತ್‌ ಶಾ ಮತ್ತು ಯೋಗಿ ಆದಿತ್ಯನಾಥ್‌ ಅವರ ಮೇಲೆ ಭರವಸೆ ಇಟ್ಟಿದ್ದೇನೆ. ಪಕ್ಷೇತರನಾಗಿ ಸ್ಪರ್ಧಿಸಿದರೂ ನರೇಂದ್ರ ಮೋದಿಯವರಿಗೇ ಲಾಭ’ ಎಂದು ಹೇಳಿದರು.

“ನರೇಂದ್ರ ಮೋದಿಯವರು ಬಂದು ನಾಮಪತ್ರ ವಾಪಸ್ಸು ಪಡೆಯಲು ಹೇಳಿದರೆ ನಿರ್ಧಾರ ಪುನರ್‌ ಪರಿಶೀಲಿಸುತ್ತೀರಾ?’ ಎಂದು ಪ್ರಶ್ನಿಸಿದಾಗ “ಕೊನೆ ಕ್ಷಣದಲ್ಲಿ ನರೇಂದ್ರ ಮೋದಿ ಅವರು ಬಂದು ಮಾತನಾಡಿದರೆ ಆಗ ನೋಡೋಣ..’ ಎಂದು ಶೀರೂರು ಶ್ರೀ ಹೇಳಿದರು.

ನಾನೂ ಬಿಜೆಪಿಯವನು
ನಾನು 41 ವರ್ಷಗಳಿಂದ ಬಿಜೆಪಿಗೆ ಮತ ಹಾಕುತ್ತಿದ್ದೇನೆ. ಬಿಜೆಪಿ ಮತ ಹಾಕುವವರೆಲ್ಲರೂ ಬಿಜೆಪಿಯವರೇ. ನನಗೆ ಗೆಲ್ಲುವ ವಿಶ್ವಾಸ ಇದೆ. ಉಡುಪಿ ಜನತೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಒಂದು ವೇಳೆ ಬಿಜೆಪಿಯಿಂದ ಬಿ-ಫಾರಂ ಸಿಕ್ಕಿದರೆ ಇನ್ನೂ ಕೂಡ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಶೀರೂರು ಶ್ರೀ ಹೇಳಿದರು. 

ಕಾಂಗ್ರೆಸ್‌ ಬೆಂಬಲಿಸಿಲ್ಲ
ನನ್ನ ಸ್ಪರ್ಧೆಯಿಂದ ಕಾಂಗ್ರೆಸ್‌ಗೆ ಲಾಭ ಎಂದು ಕೆಲವು ಜನರು ತಪ್ಪು ತಿಳಿದುಕೊಂಡಿದ್ದಾರೆ. ನಾನು ಕೆಲವರ ಜತೆ ವಿಶ್ವಾಸದಲ್ಲಿ ಇರು ವುದನ್ನೇ ಜನ ತಪ್ಪಾಗಿ ತಿಳಿದುಕೊಂಡಿದ್ದಾರೆ. ನಾನು ಈ ಹಿಂದೊಮ್ಮೆ ಕಾಂಗ್ರೆಸ್‌ ಕಾರ್ಯ ಕ್ರಮಕ್ಕೆ ಹೋದದ್ದು ಅಚಾನಕ್‌. ಯಾವುದೋ ಕಾರ್ಯಕ್ರಮಕ್ಕೆ ಹೋದಾಗ ಸಿಕ್ಕಿಬಿದ್ದಿದ್ದೆ ಅಷ್ಟೆ ಎಂದು ಶೀರೂರು ಶ್ರೀಗಳು ಹೇಳಿದರು. 

ದೇಗುಲದಿಂದ ಚುನಾವಣಾಧಿಕಾರಿ ಕಚೇರಿವರೆಗೆ…
ಸುಮಾರು 12 ಗಂಟೆಯ ವೇಳೆಗೆ ಕಡಿಯಾಳಿ ದೇಗುಲಕ್ಕೆ ಆಗಮಿಸಿ ದೇವರ ದರ್ಶನಗೈದ ಶೀರೂರು ಶ್ರೀಗಳು ಅಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು ಸೀಯಾಳ ಕುಡಿದು ಅಲ್ಲಿಂದ ಹೊರಟು ಬನ್ನಂಜೆಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ 12.25ರ ವೇಳೆಗೆ ತಲುಪಿದರು. 12.30ಕ್ಕೆ ನಾಮಪತ್ರ ಸಲ್ಲಿಸುವುದಾಗಿ ನಿಗದಿಯಾಗಿದ್ದರೂ ನಾಮಪತ್ರ ದಾಖಲೆಗಳಿಗೆ ಸಹಿ ಹಾಕುವುದು, ದಾಖಲೆಗಳ ಕ್ರೋಢೀಕರಣ ಸೇರಿದಂತೆ ವಿವಿಧ ಪ್ರಕ್ರಿಯೆಗಳು ನಡೆಯಬೇಕಾಗಿದ್ದ ಕಾರಣದಿಂದ ಚುನಾವಣಾಧಿಕಾರಿಗಳ ಕಚೇರಿಯ ಪಕ್ಕದಲ್ಲೇ ಇದ್ದ ಕಚೇರಿಯಲ್ಲಿ ಕುಳಿತು ವಿಶ್ರಾಂತಿ ಪಡೆದರು. ಅಲ್ಲಿಯೂ ಸೀಯಾಳ ಕುಡಿದು ದಣಿವಾರಿಸಿಕೊಂಡರು. ಅವರ ಬೆಂಬಲಿಗರು ಉಪಚರಿಸಿದರು. 1.30ರ ವೇಳೆಗೆ ನಾಮಪತ್ರ ಸಲ್ಲಿಸಿದರು. ದಾಖಲೆಗಳ ಪರಿಶೀಲನೆಗಳು ಮುಗಿದು 2 ಗಂಟೆಯ ಸುಮಾರಿಗೆ ಚುನಾವಣಾಧಿಕಾರಿಗಳಿ ಕಚೇರಿಯಿಂದ ನಿರ್ಗಮಿಸಿದರು. 

“ಕಳೆದ 3 ದಿನಗಳಿಂದ ನೇಮೋತ್ಸವ ಇದ್ದುದರಿಂದ ಬಳಲಿಕೆ ಇದೆ ಅಷ್ಟೆ. ಶೀಘ್ರದಲ್ಲೇ ಪತ್ರಿಕಾಗೋಷ್ಠಿ ಕರೆದು ಸ್ಪರ್ಧೆ ಕುರಿತು ಮತ್ತಷ್ಟು ವಿವರ ನೀಡುತ್ತೇನೆ’ ಎಂದು ಶ್ರೀಗಳು ಈ ಸಂದರ್ಭದಲ್ಲಿ ತಿಳಿಸಿದರು.  

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.