ಹಿರಿಯಡಕ ಕ್ಷೇತ್ರ: ಇಂದು ಬ್ರಹ್ಮಕಲಶೋತ್ಸವ ಸಂಭ್ರಮ


Team Udayavani, Apr 22, 2018, 6:15 AM IST

210418hbre2a.jpg

ಹಿರಿಯಡಕ: 26 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ  ಸುಮಾರು  800  ವರ್ಷ ಇತಿಹಾಸ ವಿರುವ  ಶ್ರೀ ವೀರಭದ್ರ ಸ್ವಾಮಿ ದೇಗುಲದಲ್ಲಿ ಎ. 22 ರಂದು ಬ್ರಹ್ಮಕಲಶೋತ್ಸವ ಜರಗಲಿದೆ. 

ಆದಿ-ಆಲಡೆ ಎಂದು ಗುರುತಿಸಲ್ಪಡುವ ಈ ಕ್ಷೇತ್ರದಲ್ಲಿ ಎ. 16ರಿಂದ ಎ. 25ರ ತನಕ ವಿವಿಧ ಕಾರ್ಯಕ್ರಮ ನಡೆದಿದ್ದು ಎ. 22ರಂದು ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸಹಸ್ರ ಸಂಖ್ಯೆಯ ಭಕ್ತ ಸಾಗರ ಸಾಕ್ಷಿಯಾಗಲಿದೆ.

ಆಲಡೆ ಕ್ಷೇತ್ರವಾದ ಹಿರಿಯಡಕ ಕ್ಷೇತ್ರ ಅತ್ಯಾಕರ್ಷಕ ಕೆತ್ತನೆ, ದಾರುಶಿಲ್ಪದ  ಮೂಲಕ ಭಕ್ತ ಸಮೂಹವನ್ನು ಆಕರ್ಷಿ ಸುತ್ತಿದೆ. ಉಡುಪಿ, ದ.ಕ., ಶಿವಮೊಗ್ಗ, ಚಿಕ್ಕಮಗಳೂರು ಮೊದಲಾದ ಪ್ರದೇಶಗಳಿಂದ ಆಗಮಿಸುವ ಭಕ್ತರಿಗೆ ಯಾವುದೇ  ಅಡಚಣೆಯಾಗದಂತೆ   ಜೀರ್ಣೋದ್ಧಾರ ಸಮಿತಿ ಸುಮಾರು 1,500 ಸ್ವಯಂ ಸೇವಕರ ಮೂಲಕ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.

ಸುಸಜ್ಜಿತ  ಪಾರ್ಕಿಂಗ್‌ ವ್ಯವಸ್ಥೆ 
ಸುಮಾರು 3 ಸಾವಿರಕ್ಕೂ ಮಿಕ್ಕಿ ವಾಹನಗಳ ನಿಲುಗಡೆಗೆ 6 ಪ್ರದೇಶಗಳಲ್ಲಿ ಸುಸಜ್ಜಿತ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದ್ದು ಉಡುಪಿ, ಮಣಿಪಾಲ ದಿಂದ ಆಗಮಿಸುವ  ಭಕ್ತರಿಗೆ   ಮಾಧವ ಮಂಗಲ ಸಭಾಭವನದ ಬಳಿ, ಹೆಬ್ರಿ ಕಡೆಯಿಂದ ಆಗಮಿಸುವವರಿಗೆ ಹಿರಿಯಡಕ ಗಾಂಧಿ ಮೈದಾನ ಬಳಿ, ಕಾರ್ಕಳ ಕಡೆಯಿಂದ ಬರುವವರಿಗೆ ಕೋಟ್ನಕಟ್ಟೆ ಗಾಂಧಿ ಮೈದಾನ ಬಳಿ, ಬ್ರಹ್ಮಾವರ ಪೇತ್ರಿ ಕಡೆಯಿಂದ ಬರುವವರಿಗೆ ಬಜೆ ರಸ್ತೆಯ ಸಪ್ನಾ ರೆಸ್ಟೋರೆಂಟ್‌ ಬಳಿ, ಪುರೋಹಿತರು ಮತ್ತು ಸ್ವಯಂಸೇವಕರಿಗೆ ದೇವಸ್ಥಾನದ ಹಿಂಬದಿ ಮಾದ್ರಿ ರಸ್ತೆ ಬಳಿ ಪಾರ್ಕಿಂಗ್‌ ವ್ಯವಸ್ಥೆ  ಮಾಡಲಾಗಿದೆ.

ದೇವಸ್ಥಾನಕ್ಕೆ ಉಚಿತ ವಾಹನ 
ಪಾರ್ಕಿಂಗ್‌ ಸ್ಥಳದಿಂದ ದೇವಸ್ಥಾನಕ್ಕೆ ಸುಮಾರು 50ಕ್ಕೂ ಹೆಚ್ಚು ವಾಹನಗಳಿಂದ ಉಚಿತ ವ್ಯವಸ್ಥೆ ಮಾಡಲಾಗಿದೆ.

ಶೀಘ್ರ ದೇವರ ದರ್ಶನ 
ಅಪಾರ ಭಕ್ತರು ದೇವರ ದರ್ಶನಕ್ಕೆ ಬರುವುದರಿಂದ ಯಾವುದೇ ನೂಕು ನುಗ್ಗಲು ಆಗದಂತೆ ಕೇವಲ 15 ನಿಮಿಷಗಳ‌ ಒಳಗೆ ದೇವರ ದರ್ಶನ ಮಾಡಿ ಬರುವಂತೆ  ವ್ಯವಸ್ಥೆ ಕಲ್ಪಿಸಲಾಗಿದೆ.60 ಸಾವಿರಕ್ಕೂ  ಅಧಿಕ ಮಂದಿಗೆ ಅನ್ನಸಂತರ್ಪಣೆ ಎ. 16ರಿಂದ ನಿರಂತರ ಉಪಾಹಾರ, ಅನ್ನಸಂತರ್ಪಣೆ   ನಡೆಯುತ್ತಿದ್ದು ಎ. 22ರಂದು ನಡೆಯುವ ಬ್ರಹ್ಮ ಕಲಶೋತ್ಸವಕ್ಕೆ ಸುಮಾರು 60 ಸಾವಿರಕ್ಕೂ ಮಿಕ್ಕಿ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.  ನೂಕುನುಗ್ಗಲು   ತಡೆ ಯಲು ಏಕಕಾಲದಲ್ಲಿ 3 ಸಾವಿರ ಮಂದಿ  ಕುಳಿತು ಊಟ ಮಾಡುವ ಟೇಬಲ್‌ ವ್ಯವಸ್ಥೆ,  6 ಸಾವಿರ ಜನರಿಗಾಗುವಷ್ಟು  ಬಫೆ  ಕೌಂಟರ್‌  ವ್ಯವಸ್ಥೆ  ಮಾಡಲಾಗಿದೆ.

ಸುಧರ್ಮ ಸಭೆ
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಸುಧರ್ಮ ಸಭೆ  ಶ್ರೀ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನ್ಯಾ| ಮೂ|  ಶ್ರೀ ವಿಶ್ವನಾಥ ಶೆಟ್ಟಿ, ಡಾ| ಬಿ.ಎಂ. ಹೆಗ್ಡೆ, ಎಸ್‌.ಎನ್‌. ಹೆಗ್ಡೆ, ಡಾ| ರತನ್‌ ಕೇಳ್ಕರ್‌, ಮುನಿಯಂಗಳ ಪ್ರಸಾದ್‌ ಭಟ್‌, ನಾಡೋಜ ಜಿ. ಶಂಕರ್‌, ಡಾ| ಎಂ. ಮೋಹನ್‌ ಆಳ್ವ,  ಸದನಂ ನಾರಾಯಣ ಪುದುವಾಳ್‌, ಬಿ. ಜಗನ್ನಾಥ ಶೆಟ್ಟಿ, ಡಾ| ಶಶಿಕಿರಣ್‌ ಶೆಟ್ಟಿ, ಎನ್‌.ಬಿ. ಶೆಟ್ಟಿ, ಪ್ರಕಾಶ್‌ ಶೆಟ್ಟಿ  ಪರೀಕ, ಪಿ.ಎ. ಕಿಣಿ, ಬಸ್ತಿ ಸರ್ವೋತ್ತಮ ಪೈ, ಕೊಡಿಬೈಲು ನಾರಾಯಣ ಹೆಗ್ಡೆ, ಅರುಣಾಕರ ಡಿ. ಶೆಟ್ಟಿ ಭಾಗವಹಿಸಲಿದ್ದಾರೆ. 

ಸಾಂಸ್ಕೃತಿಕ ವೈವಿಧ್ಯ
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದಲ್ಲಿ  ರಾಷ್ಟ್ರ ಮಟ್ಟದ  ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದು ಎ. 22ರಂದು ಸಂಜೆ 7ರಿಂದ ಪಂ| ಪ್ರವೀಣ್‌ ಗೋಡಿRಂಡಿ ಮತ್ತು ಬಳಗ ಬೆಂಗಳೂರು ಅವರಿಂದ ಕೊಳಲು ವಾದನ, ರಾತ್ರಿ 9ಕ್ಕೆ ಸನಾತನ ನಾಟ್ಯಾಲಯ ಮಂಗಳೂರು, ನೃತ್ಯ ನಿಕೇತನ ಕೊಡವೂರು, ವಸಂತ ನಾಟ್ಯಾಲಯ ಕುಂದಾಪುರ ಅವರಿಂದ ನೃತ್ಯ ಸಿಂಚನ ನಡೆಯಲಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.