ಮಕ್ಕಳ ಅತ್ಯಾಚಾರಿಗಳಿಗೆ ನೇಣಿನ ಕುಣಿಕೆ


Team Udayavani, Apr 22, 2018, 6:00 AM IST

24.jpg

ಹೊಸದಿಲ್ಲಿ: ಕಥುವಾ, ಸೂರತ್‌ನಲ್ಲಿನ ಮಕ್ಕಳ ಮೇಲಿನ ಹಾಗೂ ಉನ್ನಾವ್‌ನ ಯುವತಿ ಮೇಲಿನ ಅತ್ಯಾಚಾರ ಪ್ರಕರಣಗಳ ಬಿಸಿ ತಾರಕಕ್ಕೇರಿರುವ ಬೆನ್ನಲ್ಲೇ 12 ವರ್ಷದೊಳಗಿನ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಠಿನ ಕಾನೂನು ಜಾರಿಗೆ ತರಲು ಕೇಂದ್ರ ಸರಕಾರ ಅಧ್ಯಾದೇಶ ಹೊರಡಿಸಿದೆ.

ಈ ಪ್ರಕರಣಗಳ ಸಂಬಂಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದರೂ ವಿವಿಧೆಡೆ ಇನ್ನೂ ಅತ್ಯಾಚಾರಿಗಳಿಗೆ ಮಕ್ಕಳು ಬಲಿಯಾಗುತ್ತಿರುವುದು ಮುಂದುವರಿದೇ ಇದೆ. ಹೀಗಾಗಿ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ)ಗೆ ತಿದ್ದುಪಡಿ ಮಾಡಲು ಅಧ್ಯಾದೇಶ ತರಲಾಗಿದೆ. ಐದು ದಿನಗಳ ವಿದೇಶ ಪ್ರವಾಸಕ್ಕೆಂದು ತೆರಳಿದ್ದ ಪ್ರಧಾನಿ ಮೋದಿ ಶನಿವಾರ ದಿಲ್ಲಿಗೆ ವಾಪಸ್‌ ಆದ ಒಂದೆರಡು ಗಂಟೆಗಳಲ್ಲಿ ಕೇಂದ್ರ ಸಂಪುಟ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಅಧ್ಯಾದೇಶವನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಲಾಗಿದೆ.

ಸದ್ಯದ ಮಟ್ಟಿಗೆ ಜೀವಾವಧಿ ಅಥವಾ ನಿಗದಿತ ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಮಾತ್ರವೇ ಅತ್ಯಾಚಾರಿಗಳಿಗೆ ನೀಡಬಹುದಾಗಿರುವ ಗರಿಷ್ಠ ಶಿಕ್ಷೆಯಾಗಿರುವುದರಿಂದ ಈ ಕಾನೂನಿನಲ್ಲಿ ಗರಿಷ್ಠ ಶಿಕ್ಷೆಯನ್ನು ಮರಣ ದಂಡನೆಗೆ ಹೆಚ್ಚಿಸಲು, ಭಾರತೀಯ ದಂಡ ಸಂಹಿತೆ (ಐಪಿಸಿ), ಸಾಕ್ಷ್ಯಾಧಾರ ಕಾಯ್ದೆ, ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಹಾಗೂ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ)ಗಳಿಗೆ ತಿದ್ದುಪಡಿ ತರುವ ಪ್ರಸ್ತಾವನೆಯನ್ನು ಅಧ್ಯಾದೇಶದಲ್ಲಿ ವಿವರಿಸಲಾಗಿದೆ.

ಇಂತಿಷ್ಟೇ ದಿನದಲ್ಲಿ ಪ್ರಕರಣದ ತನಿಖೆ, ವಿಚಾರಣೆ ಮುಗಿಸಿ ಶಿಕ್ಷೆ ಪ್ರಮಾಣ ಘೋಷಿಸಬೇಕು ಎಂಬ ಅಂಶವನ್ನೂ ಸೇರಿಸಲಾಗಿದ್ದು, ನಿರೀಕ್ಷಣಾ ಜಾಮೀನು ಅವಕಾಶವನ್ನೇ ತೆಗೆದು ಹಾಕಲಾಗಿದೆ. ಅಲ್ಲದೆ, ವೇಗಗತಿಯಲ್ಲಿ ಪ್ರಕರಣದ ತನಿಖೆ ಪೂರ್ಣಗೊಳ್ಳಬೇಕು ಎಂಬ ಕಾರಣಕ್ಕಾಗಿ ದೇಶದ ಎಲ್ಲ ಪೊಲೀಸ್‌ ಠಾಣೆ ಮತ್ತು ಆಸ್ಪತ್ರೆಗಳಿಗೆ ವಿಧಿವಿಜ್ಞಾನ ಕಿಟ್‌ ನೀಡಲೂ ಒಪ್ಪಿಗೆ ಸೂಚಿಸಲಾಗಿದೆ.

ಜಾಮೀನಿಗೆ ನಿಬಂಧನೆಗಳು
16 ವರ್ಷದೊಳಗಿನವರ ಮೇಲೆ ಅತ್ಯಾಚಾರ ಅಥವಾ ಸಾಮೂಹಿಕ ಅತ್ಯಾಚಾರ ಎಸಗಿರುವವರಿಗೆ ನಿರೀಕ್ಷಣಾ ಜಾಮೀನು ಇಲ್ಲ.

ಆರೋಪಿ ಸಲ್ಲಿಸುವ ಜಾಮೀನು ಅರ್ಜಿಯನ್ನು ಇತ್ಯರ್ಥಗೊಳಿಸುವ ಮುನ್ನ ನ್ಯಾಯಾಧೀಶರು, ಸರಕಾರಿ ಅಭಿಯೋಜಕರಿಗೆ ಹಾಗೂ ಆರೋಪಿ ಪರ ವಕೀಲರಿಗೆ 15 ದಿನಗಳಲ್ಲಿ ಅಹವಾಲು ಸಲ್ಲಿಸಲು ನೋಟಿಸ್‌ ಜಾರಿ ಮಾಡಬೇಕು.

ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಹೈಕೋರ್ಟ್‌ ಗಳ ಜತೆ ಸಮಾಲೋಚನೆ ನಡೆಸಿ ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪನೆ.

ತ್ವರಿತ ವಿಚಾರಣೆಗಾಗಿ ನೂತನ ಸರಕಾರಿ ಅಭಿಯೋಜಕರ ನೇಮಕ ಹಾಗೂ ಸೂಕ್ತ ಮೂಲಸೌಕರ್ಯಗಳನ್ನು ಒದಗಿಸುವುದು

ಎಲ್ಲ ಪೊಲೀಸ್‌ ಠಾಣೆಗಳಿಗೆ, ಆಸ್ಪತ್ರೆಗಳಿಗೆ ವಿಶೇಷ ವಿಧಿವಿಜ್ಞಾನ ಕಿಟ್‌ ನೀಡಿಕೆ.

ತನಿಖೆಗಾಗಿ ನಿಗದಿತ ಅವಧಿಯಲ್ಲಿ ಅಗತ್ಯಕ್ಕೆ ತಕ್ಕಂತೆ ಪ್ರತ್ಯೇಕ ಸಿಬಂದಿ.

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆ

ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯಲ್ಲಿ ಲೈಂಗಿಕ ಅಪರಾಧಿ ಗಳಿಗಾಗಿ ಪ್ರತ್ಯೇಕ ಡೇಟಾಬೇಸ್‌.

ನಿಗದಿತ ಕಾಲಘಟ್ಟದಲ್ಲಿ ಡೇಟಾಬೇಸ್‌ನಲ್ಲಿನ ಅಪರಾಧಿಗಳ ಮಾಹಿತಿ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ರವಾನೆ.

ಸಂತ್ರಸ್ತೆಯರ ನೆರವಿಗಾಗಿ ಪ್ರಸ್ತುತ ಚಾಲ್ತಿಯಲ್ಲಿರುವ “ಒನ್‌ ಸ್ಟಾಪ್‌’ ಕೇಂದ್ರಗಳನ್ನು ಎಲ್ಲ ಜಿಲ್ಲೆಗಳಲ್ಲಿ ತೆರೆಯುವುದು.

ಯಾವುದರಲ್ಲಿ ಏನೇನು ಬದಲಾವಣೆ?
ಕ್ರಿಮಿನಲ್‌ ಕಾನೂನು
ಮಹಿಳೆಯರ ಮೇಲಿನ ಅತ್ಯಾಚಾರ
ಇನ್ನು ಮುಂದೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ. ಇದುವರೆಗೆ ಕನಿಷ್ಠ ಏಳು ವರ್ಷವಿತ್ತು, ಇನ್ನು ಮುಂದೆ ಇದು ಜೀವಾವಧಿವರೆಗೂ ವಿಸ್ತರಿಸಬಹುದು.

16 ವರ್ಷದೊಳಗಿನ ಸಂತ್ರಸ್ತೆ
ಶಿಕ್ಷೆಯ ಪ್ರಮಾಣ ಈಗಿರುವ 10ರಿಂದ 20 ವರ್ಷ ಅಥವಾ ಜೀವಾವಧಿವರೆಗೂ ವಿಸ್ತರಣೆ.

16 ವರ್ಷದೊಳಗಿನ ಸಂತ್ರಸ್ತೆ ಮೇಲೆ ಗ್ಯಾಂಗ್‌ರೇಪ್‌
ಅತ್ಯಾಚಾರಿಗಳಿಗೆ ಜೀವಾವಧಿ ಶಿಕ್ಷೆ.

 12 ವರ್ಷದೊಳಗಿನ ಮಕ್ಕಳು
ಅತ್ಯಾಚಾರಿಗೆ 20 ವರ್ಷಗಳ ಕಾರಾಗೃಹ ಅಥವಾ ಜೀವಾವಧಿ ಅಥವಾ ಮರಣದಂಡನೆ.

 12 ವರ್ಷದೊಳಗಿನ ಬಾಲಕಿ ಮೇಲಿನ ಗ್ಯಾಂಗ್‌ರೇಪ್‌
ಜೀವಾವಧಿ ಅಥವಾ ಗಲ್ಲುಶಿಕ್ಷೆ.

 ವೇಗದ ತನಿಖೆ ಮತ್ತು ವಿಚಾರಣೆ
ಸಂಪೂರ್ಣ ತನಿಖೆಗೆ 2 ತಿಂಗಳ ಗಡುವು
ವಿಚಾರಣೆಗೆ 2 ತಿಂಗಳ ಕಾಲಾವಧಿ
ಮೇಲ್ಮನವಿಯ ಇತ್ಯರ್ಥಕ್ಕೆ ಆರು ತಿಂಗಳ ಗಡುವು.

ಟಾಪ್ ನ್ಯೂಸ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.