ಮೊಳಕಾಲ್ಮೂರಲ್ಲಿ ರಾಮುಲು ಶಕ್ತಿ ಪ್ರದರ್ಶನ


Team Udayavani, Apr 22, 2018, 6:00 AM IST

37.jpg

ಶನಿವಾರವೂ ವಿವಿಧ ಪಕ್ಷಗಳ ಮುಖಂಡರು ಭಾರೀ ಮೆರವಣಿಗೆ, ಕಾರ್ಯಕರ್ತರ ಜೈಕಾರದೊಂದಿಗೆ ಉಮೇದುವಾರಿಕೆ ಸಲ್ಲಿಸಿದರು. ಮೊಳಕಾಲ್ಮೂರಲ್ಲಿ ಶ್ರೀರಾಮುಲು ಬಿಜೆಪಿ ರಾಜ್ಯ, ರಾಷ್ಟ್ರೀಯ ನಾಯಕರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದರೆ, ಹೊಳೆನರಸೀಪುರದಲ್ಲಿ ಎಚ್‌.ಡಿ.ರೇವಣ್ಣ ಶನಿವಾರ ಮತ್ತೂಂದು ನಾಮ ಪತ್ರ ಸಲ್ಲಿಸಿದರು. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಎ.ರಾಮದಾಸ್‌, ಬಳ್ಳಾರಿ ನಗರ ಕ್ಷೇತ್ರದಿಂದ ಸೋಮಶೇಖರ ರೆಡ್ಡಿ, ಹೊಸದುರ್ಗ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ನಟ ಶಶಿಕುಮಾರ್‌ ಉಮೇದುವಾರಿಕೆ ಸಲ್ಲಿಸಿದರು.

ಮೊಳಕಾಲ್ಮೂರು: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಎಸ್‌ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಶನಿವಾರ ನಾಮಪತ್ರ ಸಲ್ಲಿಸಿದರು. ಟಿಕೆಟ್‌ ಘೋಷಣೆ ಸಂದರ್ಭದಿಂದಲೂ ರಾಜ್ಯದ ಗಮನ ಸೆಳೆದ ಈ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯಂದೇ ರಾಮುಲು ತಮ್ಮ ಶಕ್ತಿ ಪ್ರದರ್ಶನ ನಡೆಸಿದರು. ಸುಮಾರು 25-30 ಸಾವಿರಕ್ಕೂ ಅಧಿಕ ಕಾರ್ಯಕರ್ತರಿದ್ದ
ಅದೂಟಛಿರಿ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ಚೌಹಾಣ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್‌, ಶಾಸಕ ಎನ್‌.ವೈ. ಗೋಪಾಲಕೃಷ್ಣ ಹಾಗೂ ಇತರೆ ಪ್ರಮುಖರು 
ಶ್ರೀರಾಮುಲು ಅವರಿಗೆ ಸಾಥ್‌ ನೀಡಿದರು. ಮೆರವಣಿಗೆಗೆ ನಂತರ ಬಿ. ಶ್ರೀರಾಮುಲು ನಾಲ್ವರೊಂದಿಗೆ ತೆರಳಿ ಚುನಾವಣಾಧಿ ಕಾರಿ ಲಕ್ಷ್ಮಣ್‌ ಅವರಿಗೆ ನಾಮಪತ್ರ ಸಲ್ಲಿಸಿದರು.

ಸೋಮಶೇಖರ್‌ ರೆಡ್ಡಿ ಉಮೇದುವಾರಿಕೆ
ಬಳ್ಳಾರಿ: ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ ಶನಿವಾರ ನಾಮಪತ್ರ ಸಲ್ಲಿಸಿದರು. ನಗರದ ಎಸ್‌ಪಿ ವೃತ್ತದಿಂದ ನೂರಾರು ಕಾರ್ಯಕರ್ತ ರೊಂದಿಗೆ ತೆರೆದ ವಾಹನದಲ್ಲಿ ಬೃಹತ್‌ ಮೆರವಣಿಗೆ ಮೂಲಕ ಆಗಮಿಸಿದ ಸೋಮಶೇಖರರೆಡ್ಡಿ, ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾನಗರ ಪಾಲಿಕೆ ಕಚೇರಿಗೆ ತೆರಳಿದರು. ಬಳಿಕ ಚುನಾವಣಾಧಿಕಾರಿ ಎಚ್‌.ನಾರಾ ಯಣಪ್ಪ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.  ಸೋಮಶೇಖರರೆಡ್ಡಿ ಆಂಜನೇಯ ಸ್ವಾಮಿಯ ಪರಮಭಕ್ತ. ಅವರು ಏನೇ ಕಾರ್ಯಕ್ರಮ ಮಾಡಿದರೂ, ಆಂಜನೇಯ ಸ್ವಾಮಿ ನೆನೆಯದೆ ಇರಲಾರರು. ಹೀಗಾಗಿ ಅವರು ಆಂಜನೇಯ ಫೋಟೋ ಸಹಿತ ತಮ್ಮ ಉಮೇದುವಾರಿಕೆ ಸಲ್ಲಿಸಿ, ಬಳಿಕ ವಾಪಸ್‌ ಪಡೆದಿದ್ದು ಗಮನ ಸೆಳೆಯಿತು.

ಎಚ್‌.ಡಿ.ರೇವಣ್ಣ ಎರಡನೇ ಬಾರಿ ನಾಮಪತ್ರ ಸಲ್ಲಿಕೆ
ಬೆಂಗಳೂರು: ಮಾವ ಶ್ರೀನಿವಾಸ್‌ ಪ್ರಸಾದ್‌ ಎರಡು ಬಾರಿ ಪ್ರತಿನಿಧಿಸಿದ್ದ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ ಶನಿವಾರ ಮೆರವಣಿಗೆಯೊಂದಿಗೆ ನಂಜನಗೂಡು ತಾಲೂಕು ಕಚೇರಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಕೊಳ್ಳೇಗಾಲ ವಿಧಾನಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎ.ಆರ್‌.ಕೃಷ್ಣಮೂರ್ತಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಕುಂದಾಪುರದ ಕಾಂಗ್ರೆಸ್‌ ಅಭ್ಯರ್ಥಿ ರಾಕೇಶ್‌  ಮಲ್ಲಿ ಚುನಾವಣಾಧಿಕಾರಿ ಟಿ. ಭೂಬಾಲನ್‌ ಅವರಿಗೆ ನಾಮಪತ್ರ ಸಲ್ಲಿಸಿದರು. ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿರುವ ಮಲ್ಲಿ ನಾಮಪತ್ರ ಸಲ್ಲಿಕೆಗೆ ಮುನ್ನ ಕೊಲ್ಲೂರು ದೇವಿಯ ದರ್ಶನ ಪಡೆದರು.  

ಶುಕ್ರವಾರ ಮೂರು ನಾಮಪತ್ರಗಳನ್ನು ಸಲ್ಲಿಸಿದ್ದ ಹೊಳೆನರಸೀಪುರದ ಹಾಲಿ ಶಾಸಕ ಎಚ್‌.ಡಿ.ರೇವಣ್ಣ ಅವರು ಶನಿವಾರ ಮತ್ತೂಂದು ನಾಮಪತ್ರ ಸಲ್ಲಿಸಿದರು. ಶುಕ್ರವಾರ  ಮಧ್ಯಾಹ್ನ 2.26 ರಲ್ಲಿ ತಮ್ಮ ಕುಟುಂಬ ಸಮೇತ ಆಗಮಿಸಿ ಮೂರು ನಾಮಪತ್ರಗಳನ್ನು ಸಲ್ಲಿಸಿದ್ದರು.

ಠೇವಣಿಗೆ 20 ಸಾವಿರ ಮೊತ್ತದ 1ರೂ. ನಾಣ್ಯ ಕೊಟ್ಟ ರಾಮದಾಸ್‌
ಮೈಸೂರು: ಭಾರೀ ಪೈಪೋಟಿಯ ನಡುವೆಯೂ 3ನೇ ಪಟ್ಟಿಯಲ್ಲಿ ಟಿಕೆಟ್‌ ಗಿಟ್ಟಿಸುವಲ್ಲಿ ಯಶಸ್ವಿಯಾದ ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಾರ್ಯಕರ್ತರ ಜತೆಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.

ಠೇವಣಿಗೆ 1ರೂ. ನಾಣ್ಯ: ರಾಮದಾಸ್‌ ಕಚೇರಿಯಿಂದ ಕೆ.ಆರ್‌. ಕ್ಷೇತ್ರದ 56 ಸಾವಿರ ಕುಟುಂಬಗಳಿಗೆ ಒಂದು ರೂ. ನಾಣ್ಯ ಕೊಟ್ಟು ಆಶೀರ್ವಾದ ಮಾಡುವಂತೆ ಬರೆದಿದ್ದ ಪತ್ರಕ್ಕೆ ಸ್ಪಂದಿಸಿ 36 ಸಾವಿರ ಮನೆಗಳಿಂದ 36 ಸಾವಿರ ರೂ. ಸಂಗ್ರಹವಾಗಿತ್ತು. ಎರಡು ಡಬ್ಬಗಳಲ್ಲಿ ಈ ನಾಣ್ಯವನ್ನು ತಂದ ರಾಮದಾಸ್‌, ಚುನಾವಣಾಧಿಕಾರಿಗೆ ಠೇವಣಿ ಹಣವಾಗಿ 20 ಸಾವಿರ ರೂ. ಮೊತ್ತದ ನಾಣ್ಯವನ್ನು ಪಾವತಿಸಿ ಗಮನಸೆಳೆದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.