ಖಾಸಗಿ ಶಾಲೆ ಮೀರಿ ನಿಂತ ಶಂಭೂರು ಸರಕಾರಿ ಪ್ರೌಢಶಾಲೆ 


Team Udayavani, Apr 22, 2018, 10:50 AM IST

22-April-4.jpg

ಬಂಟ್ವಾಳ: ಸರಕಾರಿ ಶಾಲೆ ಎಂದರೆ ಜನಸಾಮಾನ್ಯರಲ್ಲಿ ತಾತ್ಸಾರದ ಭಾವನೆ, ಅಲ್ಲಿನ ಅವ್ಯವಸ್ಥೆ, ಶಿಕ್ಷಕರ ಕೊರತೆಯಿಂದಾಗಿ ಎಲ್ಲರೂ ಖಾಸಗಿ ಶಾಲೆಯನ್ನು ನೆಚ್ಚಿಕೊಳ್ಳು ತ್ತಾರೆ. ಆದರೆ ಇಲ್ಲೊಂದು ಸರಕಾರಿ ಪ್ರೌಢ ಶಾಲೆ ಶೈಕ್ಷಣಿಕ ಸಾಧನೆ -ಸೌಕರ್ಯ – ಸೌಲಭ್ಯ -ವ್ಯವಸ್ಥೆಯಲ್ಲಿ ಖಾಸಗಿ ಶಾಲೆಗಳನ್ನು ಮೀರುವ ಸಾಧನೆಗಳನ್ನು ಮಾಡಿದೆ.

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಅಂತಹ ಸಾಧನೆಯ ಕೀರ್ತಿಗೆ ಪಾತ್ರವಾಗಿದೆ. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸೇರ್ಪಡೆ ಸಂಖ್ಯೆಯನ್ನು ಹೆಚ್ಚಿಸಿಕೊಂಡದ್ದಲ್ಲದೆ, ಊರಿನ ನೆಚ್ಚಿನ ಶಾಲೆಯಾಗಿ ಮಾರ್ಪಟ್ಟಿದೆ. ಶಾಲಾಭಿವೃದ್ಧಿ ಸಮಿತಿಯು ನಿರಂತರವಾಗಿ ಚಿತ್ರಕಲೆ, ಭರತನಾಟ್ಯ, ನಾಟಕ, ಯಕ್ಷಗಾನ ತರಬೇತಿಗಳನ್ನು ಮಕ್ಕಳಿಗೆ ಉಚಿತವಾಗಿ ನೀಡುತ್ತಾ ಪ್ರದರ್ಶನದ ಪ್ರಾಯೋಜಕತ್ವವನ್ನು ವಹಿಸುತ್ತಿದೆ. ಶಾಲೆಯಲ್ಲಿ ಪ್ರಸ್ತುತ ಬೆಳಗ್ಗಿನ ಉಪಹಾರವನ್ನೂ ನೀಡಲಾಗುತ್ತಿದೆ.

ಶಿಕ್ಷಣ ಪ್ರೇಮಿ ದಿ| ಬೊಂಡಾಲ ಜಗನ್ನಾಥ ಶೆಟ್ಟರ ಪ್ರಯತ್ನದಿಂದ 2003-04ನೇ ಸಾಲಿನಲ್ಲಿ ಸರಕಾರಿ ಪ್ರೌಢಶಾಲೆ ಮಂಜೂರಾಗಿತ್ತು. ಅವರು ಶಾಲೆಯನ್ನು ದತ್ತು ಸ್ವೀಕರಿಸಿದ್ದರು. ಅವರು ಸ್ವರ್ಗಸ್ಥರಾದ ಅನಂತರ ಅವರ ಹಿರಿಯ ಸಹೋದರ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಬೊಂಡಾಲ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷರಾಗಿ ಶಾಲೆಯ ಅಭಿವೃದ್ಧಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.

ರಾಷ್ಟ್ರಮಟ್ಟಕ್ಕೆ ಆಯ್ಕೆ
2015-16 ಸಾಲಿನಲ್ಲಿ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ನಾಟಕ ಸ್ಪರ್ಧೆಯು ವಿಭಾಗ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು, ಅದೇ ವರ್ಷದಲ್ಲಿ ಎಂ.ಎಚ್‌.ಆರ್‌.ಡಿ. ಆಶ್ರಯದ ಕಲಾ ಉತ್ಸವದ ನಾಟಕ ಸ್ಪರ್ಧೆಯಲ್ಲಿ 10ನೇ ತರಗತಿ ಕನ್ನಡ ಪಠ್ಯಾಧಾರಿತ ಹಲಗಲಿಯ ಬೇಡರು ನಾಟಕ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ಹೊಸದಿಲ್ಲಿಯಲ್ಲಿ ನಡೆದ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿತ್ತು ಎಂಬುದು ಹೆಮ್ಮೆಯ ವಿಚಾರವಾಗಿದೆ.

8ರಿಂದ ಆಂಗ್ಲ ಮಾಧ್ಯಮ
2015-16ನೇ ಸಾಲಿಗೆ 8ನೆಯ ತರಗತಿಯಿಂದ ಆಂಗ್ಲ ಮಾಧ್ಯಮ ವಿಭಾಗವನ್ನು ಪ್ರಾರಂಭಿಸಿದೆ. 2016-17ನೇ ಸಾಲಿನಲ್ಲಿ 8ನೆಯ ತರಗತಿಗೆ ಒಟ್ಟು 79 ವಿದ್ಯಾರ್ಥಿಗಳು ದಾಖಲಾಗಿದ್ದು, ಶಾಲೆಯ ಒಟ್ಟು ದಾಖಲಾತಿ 228 ಆಗಿದೆ. (118 ವಿದ್ಯಾರ್ಥಿಗಳು+110 ವಿದ್ಯಾರ್ಥಿನಿಯರು).

ವಿಶೇಷವೇನು?
ಶಾಲೆಯಲ್ಲಿ ತರಗತಿಗೊಂದರಂತೆ ಬೋಧನ ಕೊಠಡಿಗಳು, ಕಂಪ್ಯೂಟರ್‌ ಕೊಠಡಿ, ಕ್ರೀಡಾ ಕೊಠಡಿ, ಮುಖ್ಯ ಶಿಕ್ಷಕರ ಕೊಠಡಿ, ಶಿಕ್ಷಕರ ಕೊಠಡಿ, ಎಲ್ಲ ವಿದ್ಯಾರ್ಥಿಗಳು ಏಕಕಾಲದಲ್ಲಿ ಸಮಾವೇಶಗೊಳ್ಳಲು ವಿಶಾಲವಾದ ಸಭಾಂಗಣ, ಪೀಠೊಪಕರಣಗಳು, ಧ್ವನಿವರ್ಧಕ ವ್ಯವಸ್ಥೆ, ಸಭಾ ವೇದಿಕೆ ಹೀಗೆ ಸರ್ವ ರೀತಿಯ ಸೌಲಭ್ಯಗಳನ್ನು ಶಾಲೆ ಹೊಂದಿದೆ.

ಶಾಲೆಯನ್ನು ಸ್ವತ್ಛ ಮಾಡಲು ಆಧುನಿಕ ತಂತ್ರಜ್ಞಾನದ ಸ್ವಚ್ಛತಾ ಯಂತ್ರದ ಅಳವಡಿಕೆ, ಶಾಲಾ ಅಕ್ಷರ ದಾಸೋಹ ಯೋಜನೆಗೆ ಸ್ಟೀಮ್‌ ಅಳವಡಿಕೆ, ಕಂಪ್ಯೂಟರ್‌ ಕೊಠಡಿಗೆ ಏರ್‌ ಕಂಡೀಶನರ್‌ ಅಳವಡಿಕೆ, ತರಗತಿ ಕೊಠಡಿಗಳಿಗೆ ಇಂಟರ್‌ ಕಾಂ ವ್ಯವಸ್ಥೆ, ಶಾಲಾ ಭದ್ರತೆಗಾಗಿ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸಿ.ಸಿ. ಕೆಮರಾ ಅಳವಡಿಕೆ, ಸಭಾಂಗಣ ಮತ್ತು ಶೌಚಾಲಯಗಳಿಗೆ ಟೈಲ್ಸ್‌ ಅಳವಡಿಕೆ, ಅನ್ನಪೂರ್ಣ ಭವನ ನಿರ್ಮಾಣ, ವಿದ್ಯಾರ್ಥಿಗಳಿಗೆ ಉಚಿತ ತಟ್ಟೆ ಮತ್ತು ಲೋಟ ವಿತರಣೆ, ಆಕರ್ಷಕವಾದ ಪ್ರವೇಶ ದ್ವಾರದ ನಿರ್ಮಾಣ, ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ನೀಡಿಕೆ, ಗೌರವ ಶಿಕ್ಷಕರ ಸಂಭಾವನೆ, ವಾರ್ಷಿಕ ವಿದ್ಯುತ್‌/ ದೂರವಾಣಿ ಶುಲ್ಕಗಳನ್ನು ಪಾವತಿಸುವುದರ ಮೂಲಕ ಶಾಲೆಯ ಸಂಪೂರ್ಣ ನಿರ್ವಹಣೆಯನ್ನು ದತ್ತು ಸ್ವೀಕಾರ ಸಮಿತಿ ಮಾಡುತ್ತಿರುವುದು ಇಲ್ಲಿನ ವಿಶೇಷತೆ. 

ದತ್ತು ಸ್ವೀಕಾರ
ಪ್ರಸ್ತುತ ವರ್ಷದಿಂದ ಕಡು ಬಡವರ ಶಿಕ್ಷಣ ವಂಚಿತರಾಗುವ ಹತ್ತು ವಿದ್ಯಾರ್ಥಿಗಳ ಸಂಪೂರ್ಣ ಖರ್ಚುವೆಚ್ಚದೊಂದಿಗೆ ದತ್ತು ಸ್ವೀಕರಿಸಲಾಗುವುದು. ಆಂಗ್ಲ ಮಾಧ್ಯಮ ಶಿಕ್ಷಣಕ್ಕಾಗಿ ಹೆಚ್ಚುವರಿ ಶಿಕ್ಷಕರ ನೇಮಕವನ್ನು ಸ್ವಂತ ವೆಚ್ಚದಿಂದ ನೀಡಲಾಗುತ್ತದೆ. ನಾನೊಬ್ಬನೇ ಕನಸು ಕಂಡರೆ ಅದು ಬರಿ ಕನಸಾಗುತ್ತದೆ. ನಾವೆಲ್ಲ ಒಡಗೂಡಿ ಕನಸು ಕಂಡರೆ ಅದು ನನಸಾಗುತ್ತದೆ. ಶಿಕ್ಷಣವೆಂದರೆ ಕೇವಲ ಓದಲ್ಲ, ಪುಸ್ತಕದ ಜ್ಞಾನವೂ ಅಲ್ಲ, ಅದು ಮಾನವತೆಯ ಸರ್ವತೋಮುಖ ಅಭಿವೃದ್ಧಿಯ ವಿಕಾಸ ಎಂದು ನಂಬಿದ್ದೇನೆ.
– ಸಚ್ಚಿದಾನಂದ ಶೆಟ್ಟಿ,
ಬೊಂಡಾಲ
ಅಧ್ಯಕ್ಷರು,ಬೊಂಡಾಲ ಚಾರಿಟೆಬಲ್‌
ಟ್ರಸ್ಟ್‌, ಶಾಲಾಭಿವೃದ್ಧಿ ಸಮಿತಿಯ
ಕಾರ್ಯಾಧ್ಯಕ್ಷರು

ರಾಜಾ ಬಂಟ್ವಾಳ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.