ಎಲ್ಲಿಗೆ ಹೋದರು ಇವರು!?


Team Udayavani, Apr 22, 2018, 11:24 AM IST

MISSING.jpg

ಮಂಗಳೂರು: ಬುದ್ಧಿವಂತರು, ಕಾನೂನನ್ನು ಗೌರವಿಸುವ ಸಜ್ಜನರ ಜಿಲ್ಲೆ ಎಂಬುದಾಗಿ ಗುರುತಿಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷಕ್ಕೆ 100ಕ್ಕೂ ಅಧಿಕ ಮಂದಿ ನಾನಾ ಕಾರಣಗಳಿಗೆ ನಾಪತ್ತೆಯಾಗುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಕಾಣೆಯಾಗಿರುವವರ ಸಂಖ್ಯೆ 2,110. ಈ ಪೈಕಿ 238 ಮಂದಿ ಇನ್ನೂ ಪತ್ತೆಯಾಗಿಲ್ಲ.

ಆರ್‌ಟಿಐನಡಿ ಜಿಲ್ಲಾ ಪೊಲೀಸರು ನೀಡಿರುವ ಅಂಕಿಅಂಶದ ಪ್ರಕಾರ, ಬಂಟ್ವಾಳ ತಾಲೂಕಿನಲ್ಲಿ 2013 ರಿಂದ 2017ರ ವರೆಗೆ ಒಟ್ಟು 226 ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 91 ಮಂದಿ ಮಹಿಳೆಯರು. ಆದರೆ 88 ಮಂದಿ ಮಾತ್ರ ಪತ್ತೆಯಾಗಿದ್ದಾರೆ. 118 ಪುರುಷರು ಕಾಣೆಯಾಗಿದ್ದು, 93 ಮಂದಿ ಪತ್ತೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಐದು ವರ್ಷಗಳಲ್ಲಿ ಒಟ್ಟು 216 ನಾಪತ್ತೆ ಪ್ರಕರಣ ದಾಖಲಾಗಿದ್ದು, 106 ಮಂದಿ ಪುರುಷರು ಮತ್ತು 75 ಮಂದಿ ಮಹಿಳೆಯರು. ಕಾಣೆಯಾದವರಲ್ಲಿ 96 ಮಂದಿ ಪುರುಷರು ಹಾಗೂ 71 ಮಂದಿ ಮಹಿಳೆಯರು ಪತ್ತೆಯಾಗಿದ್ದಾರೆ.

ಪುತ್ತೂರು ತಾಲೂಕಿನಲ್ಲಿ ಐದು ವರ್ಷಗಳಲ್ಲಿ ಒಟ್ಟು 223 ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, 109 ಪುರುಷರು, 88 ಮಹಿಳೆಯರು. 95 ಪುರುಷರು, 81 ಮಹಿಳೆಯರನ್ನು ಈಗಾಗಲೇ ಪತ್ತೆ ಹಚ್ಚಲಾಗಿದೆ. ಸುಳ್ಯ ತಾಲೂಕಿನಲ್ಲಿ 113 ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, 46 ಪುರುಷರು, 46 ಮಹಿಳೆಯರು. 38 ಪುರುಷರು ಪತ್ತೆಯಾಗಿದ್ದು, ಎಲ್ಲ 46 ಮಂದಿ ಮಹಿಳೆಯರೂ ಪತ್ತೆಯಾಗಿದ್ದಾರೆ. 

ಕಾಣೆಯಾಗಲೇನು ಕಾರಣ?
ಸಾಮಾನ್ಯವಾಗಿ 18 ವರ್ಷದೊಳಗಿನವರು ಕಾಣೆಯಾದರೆ ನಾಪತ್ತೆ ಪ್ರಕರಣದ ಬದಲು ಅಪಹರಣ ಪ್ರಕರಣವನ್ನು ಪೊಲೀಸರು ದಾಖಲಿಸುತ್ತಾರೆ. ಈ ರೀತಿ ಮಕ್ಕಳು ಏಕಾಏಕಿ ಮನೆ ಬಿಟ್ಟು ಹೋಗುವುದಕ್ಕೆ ಹೆಚ್ಚಾಗಿ ಕ್ಷುಲ್ಲಕ ಕೌಟುಂಬಿಕ ಸಮಸ್ಯೆಗಳು ಕಾರಣ. ಮಲತಾಯಿ/ತಂದೆಯ ಕಿರುಕುಳ, ಪೋಷಕರ ಒತ್ತಡ, ಐಷಾರಾಮಿ ಜೀವನದ ಸೆಳೆತ, ಪ್ರೇಮ ಪ್ರಕರಣಗಳು ಕಾರಣವಾಗುತ್ತವೆ. ವಯಸ್ಕರಲ್ಲಿ ಗಂಡ/ಹೆಂಡತಿ ಕಲಹ, ಅನೈತಿಕ ಸಂಬಂಧ, ಕೌಟುಂಬಿಕ ವಿಚಾರ, ಸಾಲದ ಹೊರೆ, ಜೂಜು, ದುಷcಟಗಳಿಂದ ನಾಪತ್ತೆ ಸಾಧ್ಯತೆಗಳಿರುತ್ತವೆ. ಕೆಲವರು ಈ ಕಾರಣಕ್ಕೆ ಜಿಗುಪ್ಸೆಗೊಂಡು ನಿಗೂಢವಾಗಿ ಆತ್ಮಹತ್ಯೆಗೂ ಶರಣಾಗಬಹುದು ಎನ್ನುವುದು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಬ್ಯೂರೋ ಸಿಬಂದಿಯೊಬ್ಬರ ಅಭಿಪ್ರಾಯ.

ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾದ ಕೂಡಲೇ ರಾಜ್ಯದ ಎಲ್ಲ ಪೊಲೀಸ್‌ ಠಾಣೆಗಳಿಗೆ ನೋಟಿಸ್‌ ರವಾನಿಸಲಾಗುತ್ತದೆ. ರೈಲ್ವೇ, ಬಸ್‌ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಹಿತಿ ಪೋಸ್ಟರ್‌ ಅಂಟಿಸಲಾಗುತ್ತದೆ. ನಾಪತ್ತೆಯಾದವರು ಪತ್ತೆಯಾದರೆ ಪೊಲೀಸ್‌ ಸಮಕ್ಷಮ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತದೆ. ಒಂದು ನಾಪತ್ತೆ ಪ್ರಕರಣವನ್ನು ಭೇದಿಸಲು ಸ್ಥಳೀಯ ಪೊಲೀಸ್‌ ಠಾಣೆಗೆ 6 ತಿಂಗಳ ಕಾಲಾವಕಾಶ ನೀಡಲಾಗುತ್ತದೆ. ಅಷ್ಟರೊಳಗೆ ಪತ್ತೆಯಾಗದಿದ್ದರೆ ಸರ್ಕಲ್‌ ಇನ್ಸ್‌ಪೆಕ್ಟರ್‌ ತನಿಖೆ ನಡೆಸುತ್ತಾರೆ ಎನ್ನುತ್ತಾರೆ ಪೊಲೀಸರು.

ಮಂಗಳೂರಿನಲ್ಲೇ ಹೆಚ್ಚು 
ಜಿಲ್ಲೆಯ ಬೇರೆ ತಾಲೂಕುಗಳಿಗೆ ಹೋಲಿಸಿದರೆ ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ ನಾಪತ್ತೆ ಯಾದವರ ಸಂಖ್ಯೆ ಅತಿ ಹೆಚ್ಚು. ಐದು ವರ್ಷಗಳಲ್ಲಿ 1,252 ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, 1,080 ಮಂದಿ ಮಾತ್ರ ಪತ್ತೆಯಾಗಿದ್ದಾರೆ, 172 ಮಂದಿಯ ಸುಳಿವೇ ಇಲ್ಲ.

ನಾಪತ್ತೆಯಾದ ಪ್ರಕರಣಗಳ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಕ್ಕಳನ್ನು ಪತ್ತೆಹಚ್ಚಲು ವಿಶೇಷ ಒತ್ತು ನೀಡಿ ದ್ದೇವೆ. ನನ್ನ ಸಮಕ್ಷಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಬ್ಯೂರೋದ ಸಭೆ ಪ್ರತೀ ತಿಂಗಳು ನಡೆಯುತ್ತದೆ. ತ್ವರಿತಗತಿಯಲ್ಲಿ ಪ್ರಕರಣವನ್ನು ಭೇದಿಸಲು ತಿಳಿಸುತ್ತೇವೆ. ಮಕ್ಕಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಮೂಡಿಸುತ್ತೇವೆ.
– ಶಶಿಕಾಂತ್‌ ಸೆಂಥಿಲ್‌, 
ದ.ಕ. ಜಿಲ್ಲಾಧಿಕಾರಿ

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.