ಪ್ರಭಾವಿಗಳ ಖರ್ಚಿನ ಮೇಲೆ ಕಣ್ಣಿಡಲು ವಿಶೇಷ ತಂಡ


Team Udayavani, Apr 22, 2018, 12:21 PM IST

prabhavi.jpg

ಬೆಂಗಳೂರು: ರಾಜಧಾನಿಯ 28 ವಿಧಾನಸಭೆ ಕ್ಷೇತ್ರಗಳ ಪೈಕಿ ಜಿದ್ದಾಜಿದ್ದಿನ ಕಣ ಎಂದೇ ಬಿಂಬಿತವಾಗಿರುವ ಹಾಗೂ ಪ್ರಭಾವಿ ನಾಯಕರು ಸ್ಪರ್ಧಿಸುತ್ತಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಮಾಡುವ ಖರ್ಚು, ವೆಚ್ಚಗಳ ಮೇಲೆ ಹದ್ದಿನ ಕಣ್ಣಿರಿಸಲು ಚುನಾವಣಾ ಆಯೋಗ ಅಧಿಕಾರಿಗಳನ್ನು ನೇಮಿಸಿದೆ.

ರಾಜರಾಜೇಶ್ವರಿ ನಗರ, ಶಿವಾಜಿನಗರ, ಚಿಕ್ಕಪೇಟೆ, ಪದ್ಮನಾಭನಗರ, ಬಿಟಿಎಂ ಬಡಾವಣೆ, ಚಾಮರಾಜಪೇಟೆ, ಸರ್ವಜ್ಞನಗರ, ಮಹದೇವಪುರ, ಕೆ.ಆರ್‌.ಪುರ ಹಾಗೂ ಯಶವಂತಪುರ ಕ್ಷೇತ್ರಗಳಲ್ಲಿ ಒಂದೊಂದು ಕ್ಷೇತ್ರಕ್ಕೆ ಪ್ರತ್ಯೇಕ ಅಧಿಕಾರಿ ನಿಯೋಜಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ವೆಚ್ಚಗಳ ಮಾಹಿತಿ ಪಡೆಯಲು ಹಾಗೂ ನಿಯಮ ಮೀರಿ ಹಣ ಖರ್ಚು ಮಾಡುವವರ ಮೇಲೆ ನಿಗಾವಹಿಸಲು ಎರಡು ಕ್ಷೇತ್ರಗಳಿಗೆ ಒಬ್ಬರಂತೆ ವೀಕ್ಷಕ ಹಾಗೂ ಸಂಪರ್ಕ ಅಧಿಕಾರಿ ನೇಮಿಸಲಾಗಿದೆಯಾದರೂ ಹತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತ್ಯೇಕ ಅಧಿಕಾರಿ ನೇಮಿಸಲಾಗಿದೆ.

ಉಳಿದಂತೆ, ಅಭ್ಯರ್ಥಿಗಳ ಖರ್ಚು ವೆಚ್ಚಗಳ ಪರಿಶೀಲನೆಗಾಗಿ 28 ವಿಧಾನಸಭಾ ಕ್ಷೇತ್ರಗಳಿಗೆ 19 ಮಂದಿ ವೀಕ್ಷಕ ಹಾಗೂ ಸಂಪರ್ಕ ಅಧಿಕಾರಿಗಳನ್ನು ಚುನಾವಣಾ ಆಯೋಗವು ನೇಮಿಸಲಾಗಿದ್ದು, ಖರ್ಚು ವೆಚ್ಚಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಹ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ. 

 ಪ್ರಭಾವಿ ನಾಯಕರು ಸ್ಪರ್ಧಿಸುವ, ನಿಗದಿಗಿಂತ ಹೆಚ್ಚು ಖರ್ಚು-ವೆಚ್ಚ ಮಾಡುವುದು ಸೇರಿದಂತೆ ಈ ಹಿಂದಿನ ಚುನಾವಣೆಗಳಲ್ಲಿ ನಡೆದಿರುವಂತಹ ಘಟನೆಗಳು ಹಾಗೂ ದಾಖಲಾಗಿರುವ ಪ್ರಕರಣಗಳ ಆಧಾರದ ಮೇಲೆ ಕೆಲವೊಂದು ವಿಧಾನಸಭಾ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ 28 ಲಕ್ಷ ರೂ.ವರೆಗೆ ವೆಚ್ಚ ಮಾಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಅದನ್ನು ಮೀರಿ ವೆಚ್ಚ ಮಾಡುವುದು, ಮತದಾರರ ಮೇಲೆ ಒತ್ತಡ ಹೇರುವುದು, ಮತದಾರರಿಗೆ ಆಮೀಷವೊಡ್ಡುವುದು, ಹಣ, ಮದ್ಯ ಹಾಗೂ ಇತರೆ ವಸ್ತುಗಳ ಹಂಚಿಕೆಗಳ ಕುರಿತು ಸಾರ್ವಜನಿಕರು ಚುನಾವಣಾ ಆಯೋಗದ ವತಿಯಿಂದ ಅಭಿವೃದ್ಧಪಡಿಸಿರುವ ಅಥವಾ ಕಂಟ್ರೋಲ್‌ ರೂಂಗೆ ಕರೆ ಮಾಹಿತಿ ಮಾಹಿತಿ ನೀಡಬಹುದಾಗಿದೆ. 

ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮಾಡುವ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಲು 19 ಮಂದಿ ವೀಕ್ಷಕ ಹಾಗೂ ಸಂಪರ್ಕ ಅಧಿಕಾರಿಗಳನ್ನು, 14 ಮಂದಿ ಸಾಮಾನ್ಯ ವೀಕ್ಷಕ ಅಧಿಕಾರಿಗಳು ಹಾಗೂ ಪ್ರತಿ ಏಳು ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬರಂತೆ ಪೊಲೀಸ್‌ ವೀಕ್ಷಕರನ್ನು ನೇಮಿಸಲಾಗಿದೆ.
-ಎನ್‌.ಮಂಜುನಾಥ ಪ್ರಸಾದ್‌, ಜಿಲ್ಲಾ ಚುನಾವಣಾಧಿಕಾರಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.