ಮಳೆ ನಡುವೆ ರಾಹುಲ್‌-ಗೇಲ್‌ ಖೇಲ್‌


Team Udayavani, Apr 22, 2018, 12:41 PM IST

KL-Rahuls-,-Chris-Gayle.jpg

ಕೋಲ್ಕತಾ: ಮಳೆ ನಡುವೆ ಬ್ಯಾಟಿಂಗ್‌ ಮಿಂಚು ಹರಿಸಿದ ಪಂಜಾಬ್‌ ತಂಡದ ಆರಂಭಿಕರಾದ ಕೆ.ಎಲ್‌. ರಾಹುಲ್‌ ಮತ್ತು ಕ್ರಿಸ್‌ ಗೇಲ್‌ ಆತಿಥೇಯ ಕೆಕೆಆರ್‌ಗೆ 9 ವಿಕೆಟ್‌ಗಳ ಭಾರೀ ಸೋಲುಣಿಸಿದ್ದಾರೆ. ಇದು ಪಂಜಾಬ್‌ 5 ಪಂದ್ಯಗಳಲ್ಲಿ ಸಾಧಿಸಿದ 4ನೇ ಜಯವಾಗಿದೆ.

ಬ್ಯಾಟಿಂಗಿಗೆ ಇಳಿಸಲ್ಪಟ್ಟ ಕೆಕೆಆರ್‌ ಗಳಿಕೆ 7 ವಿಕೆಟಿಗೆ 191 ರನ್‌. ಪಂಜಾಬ್‌ 8.2 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 96 ರನ್‌ ಮಾಡಿದ ವೇಳೆ ಮಳೆ ಸುರಿಯಿತು. ಈ ಹಂತದಲ್ಲೇ ಪಂದ್ಯ ಕೊನೆಗೊಂಡಿದ್ದರೂ ಪಂಜಾಬ್‌ ಗೆಲ್ಲುತ್ತಿತ್ತು. ಡಿ-ಎಲ್‌ ನಿಯಮದಂತೆ ಆಗ ಪಂಜಾಬ್‌ 31 ರನ್ನುಗಳ ಮುನ್ನಡೆಯಲ್ಲಿತ್ತು. ಆದರೆ ಮಳೆ ನಿಂತ ಬಳಿಕ ಓವರ್‌ಗಳ ಸಂಖ್ಯೆಯನ್ನು 13ಕ್ಕೆ ಕಡಿತಗೊಳಿಸಿ 125 ರನ್ನುಗಳ ಗುರಿಯನ್ನು ನಿಗದಿಪಡಿಸಲಾಯಿತು. 11.1 ಓವರ್‌ಗಳಲ್ಲಿ ಒಂದು ವಿಕೆಟಿಗೆ 126 ರನ್‌ ಬಾರಿಸುವ ಮೂಲಕ ಅಶ್ವಿ‌ನ್‌ ಪಡೆ ಜಯಭೇರಿ ಮೊಳಗಿಸಿತು.

ಸ್ಫೋಟಕ ಆಟವನ್ನು ಸತತ 3ನೇ ಪಂದ್ಯಕ್ಕೂ ವಿಸ್ತರಿಸಿದ ಗೇಲ್‌ 38 ಎಸೆತಗಳಲ್ಲಿ 62 ರನ್‌ ಬಾರಿಸಿ ಅಜೇಯರಾಗಿ ಉಳಿದರು. ಸಿಡಿಸಿದ್ದು 6 ಸಿಕ್ಸರ್‌ ಹಾಗೂ 5 ಬೌಂಡರಿ. ಇವರಿಗಿಂತ ಬಿರುಸಿನ ಆಟವಾಡಿದ ಕೆ.ಎಲ್‌. ರಾಹುಲ್‌ 27 ಎಸೆತಗಳಿಂದ 60 ರನ್‌ ಸೂರೆಗೈದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 9 ಫೋರ್‌, 2 ಸಿಕ್ಸರ್‌ ಒಳಗೊಂಡಿತ್ತು. ಇವರಿಬ್ಬರ ಮೊದಲ ವಿಕೆಟ್‌ ಜತೆಯಾಟದಲ್ಲಿ 9.4 ಓವರ್‌ಗಳಿಂದ 116 ರನ್‌ ಹರಿದು ಬಂತು.

ಕೆಕೆಆರ್‌ಗೆ ಲಿನ್‌, ಕಾರ್ತಿಕ್‌ ನೆರವು
ಆರಂಭಕಾರ ಕ್ರಿಸ್‌ ಲಿನ್‌ ಮತ್ತು ನಾಯಕ ದಿನೇಶ್‌ ಕಾರ್ತಿಕ್‌ ಅವರ ಹೋರಾಟದ ಫ‌ಲವಾಗಿ ಕೆಕೆಆರ್‌ ಸವಾಲಿನ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿತ್ತು. 16ನೇ ಓವರ್‌ ತನಕ ಪಂಜಾಬ್‌ ಬೌಲಿಂಗ್‌ ದಾಳಿಗೆ ಸವಾಲಾಗಿ ಉಳಿದ ಲಿನ್‌ 41 ಎಸೆತ ನಿಭಾಯಿಸಿ ಸರ್ವಾಧಿಕ 74 ರನ್‌ ಬಾರಿಸಿದರು. 2 ಅತ್ಯುತ್ತಮ ಜತೆಯಾಟಗಳಲ್ಲಿ ಭಾಗಿಯಾದರು. ಈ ಜವಾಬ್ದಾರಿಯುತ ಬ್ಯಾಟಿಂಗ್‌ ವೇಳೆ ಲಿನ್‌ ಬ್ಯಾಟಿನಿಂದ 4 ಸಿಕ್ಸರ್‌ ಹಾಗೂ 6 ಬೌಂಡರಿ ಸಿಡಿಯಿತು. 

ಆದರೆ ಲಿನ್‌ ನಿರ್ಗಮನದ ಬಳಿಕ ಕೆಕೆಆರ್‌ ರನ್‌ ಗಳಿಕೆಯಲ್ಲಿ ತೀವ್ರ ಕುಸಿತ ಕಂಡುಬಂತು. ಅಂತಿಮ 5 ಓವರ್‌ಗಳಲ್ಲಿ ಗಳಿಸಲು ಸಾಧ್ಯವಾದದ್ದು 45 ರನ್‌ ಮಾತ್ರ. ಈ ಹಂತದಲ್ಲಿ ಆ್ಯಂಡ್ರೂé ಟೈ “ಟೈಟ್‌’ ಬೌಲಿಂಗ್‌ ದಾಳಿ ಸಂಘಟಿಸಿ ಕೋಲ್ಕತಾಕ್ಕೆ ಕಡಿವಾಣ ಹಾಕಿದರು. ಟೈ ಸಾಧನೆ 30ಕ್ಕೆ 2 ವಿಕೆಟ್‌. ಸ್ರಾನ್‌ ಕೂಡ 2 ವಿಕೆಟ್‌ ಉರುಳಿಸಿದರೂ 50 ರನ್‌ ನೀಡಿ ದುಬಾರಿಯಾದರು. 

ದಿನೇಶ್‌ ಕಾರ್ತಿಕ್‌ ಕಪ್ತಾನನ ಆಟವಾಡುವಲ್ಲಿ ಯಶಸ್ವಿಯಾದರು. 28 ಎಸೆತ ಎದುರಿಸಿದ ಕಾರ್ತಿಕ್‌ 6 ಬೌಂಡರಿ ನೆರವಿನಿಂದ 43 ರನ್‌ ಬಾರಿಸಿದರು. ಇವರಿಬ್ಬರನ್ನು ಹೊರತುಪಡಿಸಿದರೆ ವನ್‌ಡೌನ್‌ ಬ್ಯಾಟ್ಸ್‌ಮನ್‌ ರಾಬಿನ್‌ ಉತ್ತಪ್ಪ ಅವರ ಆಟ ಉತ್ತಮವಾಗಿತ್ತು. 23 ಎಸೆತ ಎದುರಿಸಿದ ಉತ್ತಪ್ಪ 5 ಬೌಂಡರಿ, ಒಂದು ಸಿಕ್ಸರ್‌ ನೆರವಿನಿಂದ 34 ರನ್‌ ಹೊಡೆದರು. 

ಓಪನರ್‌ ಸುನೀಲ್‌ ನಾರಾಯಣ್‌ (1) ಅವರನ್ನು ಅಗ್ಗಕ್ಕೆ ಕಳೆದುಕೊಂಡ ಕೆಕೆಆರ್‌ ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಆಗ 1.3 ಓವರ್‌ಗಳಲ್ಲಿ ಕೇವಲ 6 ರನ್ನಷ್ಟೇ ಆಗಿತ್ತು. ಈ ಹಂತದಲ್ಲಿ ಜತೆಗೂಡಿದ ಲಿನ್‌-ಉತ್ತಪ್ಪ 8.1 ಓವರ್‌ ತನಕ ಬ್ಯಾಟಿಂಗ್‌ ವಿಸ್ತರಿಸಿ 2ನೇ ವಿಕೆಟಿಗೆ 72 ರನ್‌ ಒಟ್ಟುಗೂಡಿಸುವಲ್ಲಿ ಯಶಸ್ವಿಯಾದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.