ರಾಜಕಾರಣದಲ್ಲಿದ್ದಾರೆ ಕ್ರಿಮಿನಲ್ಗಳು
Team Udayavani, Apr 22, 2018, 3:48 PM IST
ಶಹಾಬಾದ: ಜೈಲಿನಲ್ಲಿರಬೇಕಾದ ಕ್ರಿಮಿನಲ್ಗಳು ರಾಜಕಾರಣಕ್ಕೆ ಬಂದು ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂದು ಜನಾಂದೋಲನ ಮಹಾಮೈತ್ರಿ ನಾಯಕ ಎಸ್.ಆರ್.ಹಿರೇಮಠ ಆರೋಪಿಸಿದರು.
ನಗರದಲ್ಲಿ ಏರ್ಪಡಿಸಲಾಗಿದ್ದ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಕಲಬುರಗಿ ಗ್ರಾಮೀಣ ಮೀಸಲು ಮತಕ್ಷೇತ್ರದ ಅಭ್ಯರ್ಥಿ ಗಣಪತರಾವ್ ಕೆ.ಮಾನೆ ಅವರ ಚುನಾವಣಾ ಪ್ರಚಾರದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಸ್ವಜನ ಪಕ್ಷಪಾತ, ಅಕ್ರಮ ಸಂಪತ್ತು ಗಳಿಕೆ ಹಾಗೂ ಹಗಲು ದರೋಡೆ ಮಾಡಿ ಗದ್ದುಗೆ ಏರಿರುವ ಇಂದಿನ ಬಹುತೇಕ ರಾಜಕಾರಣಿಗಳು ಸಾರ್ವಜನಿಕ ಜೀವನಕ್ಕೆ ಯೋಗ್ಯರಲ್ಲ ಎಂದು ಹರಿಹಾಯ್ದರು. ಸಾರ್ವಜನಿಕರು ನಿರ್ಭಯವಾಗಿ ಪ್ರಶ್ನೆ ಮಾಡುವ ಧೈರ್ಯ ಬೆಳೆಸಿಕೊಳ್ಳುವ ಮೂಲಕ ಅನೈತಿಕ ರಾಜಕಾರಣ ಸೋಲಿಸಿ,
ಪ್ರಜಾತಾಂತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯಲು ರಾಜಿರಹಿತರವಾಗಿ ಸಂಘಟಿತರಾಗಬೇಕು ಎಂದು ಕರೆ ನೀಡಿದರು. ಎಸ್ಯುಸಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಾಮ್ರೇಡ್ ಎಚ್.ವಿ.ದಿವಾಕರ ಮಾತನಾಡಿ, ದೇಶದಲ್ಲಿ ಕೃಷಿ ಸಂಕಟ, ನಿರುದ್ಯೋಗ,
ಬೆಳೆಯುತ್ತಿರುವ ಭ್ರಷ್ಟಾಚಾರ, ಖಾಸಗೀಕರಣವಾಗುತ್ತಿರುವ ಶಿಕ್ಷಣ, ಆರೋಗ್ಯ ಹಾಗೂ ಮಹಿಳೆಯರ ಬಗ್ಗೆ ಯಾವ ಕಾಳಜಿಯೂ ಇಲ್ಲದೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಇಷ್ಟು ಕಾಲ ದುರಾಡಳಿತ ನಡೆಸಿವೆ. ಚುನಾವಣೆ ಪ್ರಕ್ರಿಯೆಯನ್ನೂ ಭ್ರಷ್ಟಗೊಳಿಸಿವೆ.
ಇವೆಲ್ಲದರ ವಿರುದ್ಧ ಜನಾಂದೋಲನ ಬೆಳೆಸುವ ಅಗತ್ಯವಿದೆ ಎಂದರು. ಹಿರಿಯ ಹೋರಾಟಗಾರ ರಾಘವೇಂದ್ರ ಕುಷ್ಟಗಿ, ಎಸ್ಯುಸಿಐ ಜಿಲ್ಲಾ ಸಮಿತಿ ಸದಸ್ಯ ರಾಮಣ್ಣ ಇಬ್ರಾಹಿಂಪುರ, ಅಭ್ಯರ್ಥಿ ಗಣಪತರಾವ್ ಮಾನೆ ಮಾತನಾಡಿದರು.
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಲಬುರಗಿ ದಕ್ಷಿಣ ಮತಕ್ಷೇತ್ರದ ಅಭ್ಯರ್ಥಿ ಅಹ್ಮದ್ ಬಾರಿ, ಕಾಮ್ರೇಡ್ ವ್ಹಿ. ನಾಗಮ್ಮಾಳ, ರಾಘವೇಂದ್ರ ಎಂ.ಜಿ., ಗುಂಡಮ್ಮ ಮಡಿವಾಳ, ಜಗನ್ನಾಥ ಎಸ್.ಎಚ್., ನಿಂಗಣ್ಣ ಜಂಬಗಿ, ಸಿದ್ದು ಚೌಧರಿ, ಭರತಕುಮಾರ ವಿಜಯಪುರ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ
MUST WATCH
ಹೊಸ ಸೇರ್ಪಡೆ
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.