ಪಣಂಬೂರಿನಲ್ಲಿ ಮಾನ್ಸೂನ್‌ ಚಾಲೆಂಜ್‌


Team Udayavani, Apr 27, 2018, 9:25 AM IST

Surfing-26-4.jpg

ಮಹಾನಗರ: ಮಂಗಳೂರಿನಲ್ಲಿ ಸರ್ಫಿಂಗ್‌ ಕ್ರೀಡೆಗೆ ಹೊಸ ಆಯಾಮ ತಂದುಕೊಟ್ಟಿರುವ ಸಸಿಹಿತ್ಲು ಕಡಲ ತೀರದಲ್ಲಿ ಈ ಬಾರಿ ಸರ್ಫಿಂಗ್‌ ಸದ್ದು ಮಾಡುತ್ತಿಲ್ಲ. ಆದರೆ ಪಣಂಬೂರು ಬೀಚ್‌ ರಾಷ್ಟ್ರೀಯ ಮಟ್ಟದ ಸರ್ಫಿಂಗ್‌ ಸ್ಪರ್ಧೆಯೊಂದಕ್ಕೆ ಸಿದ್ಧಗೊಳ್ಳುತ್ತಿದ್ದು, ಸರ್ಫಿಂಗ್‌ ಅಭಿಮಾನಿಗಳಿಗೆ ಸಂತಸ ತಂದಿದೆ.

ಸರ್ಫಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾ ಹಾಗೂ ಕೆನರಾ ಸರ್ಫಿಂಗ್‌ ಆ್ಯಂಡ್‌ ವಾಟರ್‌ ನ್ಪೋರ್ಟ್ಸ್ ಪ್ರಮೋಶನ್‌ ಕೌನ್ಸಿಲ್‌, ಮಂತ್ರ ಸರ್ಫ್‌ ಕ್ಲಬ್‌ ಆಶ್ರಯದಲ್ಲಿ ಪಣಂಬೂರು ಬೀಚ್‌ ಟೂರಿಸಂ ಡೆವಲಪ್‌ಮೆಂಟ್‌ ಪ್ರೊಜೆಕ್ಟ್ ಸಹಭಾಗಿತ್ವದಲ್ಲಿ ಜೂ. 2ರಿಂದ 7ರ ವರೆಗೆ ಆಹ್ವಾನಿತ ರಾಷ್ಟ್ರೀಯ ಮಟ್ಟದ ಸರ್ಫಿಂಗ್‌ ಸ್ಪರ್ಧೆ ‘ಮಾನ್ಸೂನ್‌ ಚಾಲೆಂಜ್‌’ ದೊಡ್ಡ ಮಟ್ಟದಲ್ಲಿ ಆಯೋಜನೆಗೊಳ್ಳಲಿದೆ. ಸ್ಪರ್ಧೆಯಲ್ಲಿ ದೇಶದ ವಿವಿಧ ಸರ್ಫಿಂಗ್‌
ಸ್ಕೂಲ್‌ ಹಾಗೂ ಕ್ಲಬ್‌ಗಳ ಸುಮಾರು 30 ಆಹ್ವಾನಿತ ಸರ್ಫಿಂಗ್‌ ಪರಿಣತ ತಂಡಗಳು ಭಾಗವಹಿಸಲಿವೆ. ಪೂರ್ವ ಸಿದ್ಧತೆಗಳು ನಡೆಯುತ್ತಿದ್ದು, ಪಣಂಬೂರಿನಲ್ಲಿ ಸಮುದ್ರದ ಅಲೆಗಳನ್ನು ಆಧರಿಸಿ ಸ್ಪರ್ಧೆಯ ವೇಳಾಪಟ್ಟಿ ರೂಪಿಸಲಾಗುತ್ತಿದೆ.

ರಾಷ್ಟ್ರೀಯ ಮಟ್ಟದ ಸರ್ಫಿಂಗ್‌ ಪಟುಗಳು ಭಾಗಿ
ಪಣಂಬೂರು ಬೀಚ್‌ನ ದೊಡ್ಡ ಅಲೆ ಗಳು ಸರ್ಫಿಂಗ್‌ಗೆ ಪೂರಕವಾಗಿವೆ. ರಾಷ್ಟ್ರೀಯ ಮಟ್ಟದ ಖ್ಯಾತ ಸರ್ಫಿಂಗ್‌ 
ಪಟುಗಳು ‘ಮಾನ್ಸೂನ್‌ಸರ್ಫ್‌ ಚಾಲೆಂಜ್‌’ ಕೂಟದಲ್ಲಿ ಭಾಗವಹಿಸಲಿದ್ದಾರೆ. ಕಡಲ ಅಲೆಗಳ ಜತೆಗಿನ ಸೆಣಸಾಟದ ರೋಮಾಂಚಕ ಸಾಹಸ ಕ್ರೀಡೆ ಸರ್ಫಿಂಗ್‌ ಒಂದು ವಾರ ಕಾಲ ಮಂಗಳೂರಿನಲ್ಲಿ ಸರ್ಫಿಂಗ್‌ ಅಭಿಮಾನಿಗಳ ಕಣ್ಮನ ತಣಿಸಲಿದೆ. ಸ್ಪರ್ಧಿಗಳ ಒಟ್ಟು ಫಲಿತಾಂಶಗಳನ್ನು ಪರಿಗಣಿಸಿ ಮುಂದಿನ ಬಾರಿ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್‌ ಪಟುಗಳನ್ನು ಮಾನ್ಸೂನ್‌ ಸರ್ಫ್‌ ಚಾಲೆಂಜ್‌ ಸ್ಪರ್ಧೆಗೆ ಆಹ್ವಾನಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಸರ್ಫಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾದ ಅಧ್ಯಕ್ಷ ಕಿಶೋರ್‌ ತಿಳಿಸಿದ್ದಾರೆ.

ಸಸಿಹಿತ್ಲು ಸರ್ಫಿಂಗ್‌ ಉತ್ಸವಕ್ಕೆ ಸರಕಾರ 75 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿತ್ತು. ವಿಶ್ವ ಸರ್ಫ್‌ ಲೀಗ್‌ನ ಸ್ಟೀಫ‌ನ್‌ ರಾಬರ್ಟ್‌ಸ್‌ ಅವರು ಸಸಿಹಿತ್ಲು ಬೀಚ್‌ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಮಂಗಳೂರು, ಉಡುಪಿ ಹಾಗೂ ಉತ್ತರಕನ್ನಡ ಮುಂತಾದೆಡೆಗಳ ಸರ್ಫಿಂಗ್‌ ಕ್ಲಬ್‌ ಸದಸ್ಯರು, ಗೋವಾ, ಪಾಂಡಿಚೇರಿ, ತಮಿಳುನಾಡಿನಿಂದ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಫ್ರಾನ್ಸ್‌, ಮಾಲ್ಡೀವ್ಸ್‌, ಮಡಗಾಸ್ಕರ್‌ ಸೇರಿದಂತೆ ಅಂತಾರಾಷ್ಟ್ರೀಯಪಟುಗಳು ನೋಂದಾಯಿಸಿಕೊಂಡಿದ್ದರು.

ಸಸಿಹಿತ್ಲುವಿನಲ್ಲಿ ಈ ಬಾರಿ ಸರ್ಫಿಂಗ್‌ ಉತ್ಸವ ಇಲ್ಲ
ಎರಡು ವರ್ಷಗಳಲ್ಲಿ ಸರ್ಫಿಂಗ್‌ ಉತ್ಸವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದ ಸಸಿಹಿತ್ಲುವಿನಲ್ಲಿ ಈ ಬಾರಿ ಸರ್ಫಿಂಗ್‌ ನಡೆಯುತ್ತಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ಸರ್ಫಿಂಗ್‌ ಉತ್ಸವಕ್ಕೆ ಅನುದಾನ ನೀಡದಿರುವುದು ಹಾಗೂ ರಾಜ್ಯ ವಿಧಾನಸಭಾ ಚುನಾವಣೆ ಇದಕ್ಕೆ ಕಾರಣವಾಗಿದೆ.

ಸಿದ್ಧತೆ ನಡೆಯುತ್ತಿದೆ
ಪಣಂಬೂರು ಬೀಚ್‌ನಲ್ಲಿ ಜೂ. 2ರಿಂದ 7ರ ವರೆಗೆ ರಾಷ್ಟೀಯ ಮಟ್ಟದ ಆಹ್ವಾನಿತ ಮಾನ್ಸೂನ್‌ ಸರ್ಫ್‌ ಚಾಲೆಂಜ್‌ ಕೂಟ ಆಯೋಜಿಸಲು ಸಿದ್ಧತೆ ನಡೆಯುತ್ತಿದೆ. ಇದರಲ್ಲಿ ಸುಮಾರು 25ರಿಂದ 30 ಪರಿಣತ ಸರ್ಫಿಂಗ್‌ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.
– ಯತೀಶ್‌ ಬೈಕಂಪಾಡಿ, ನಿರ್ದೇಶಕ, ಕೆನರಾ ಸರ್ಫಿಂಗ್‌ ಆ್ಯಂಡ್‌ ವಾಟರ್‌ ನ್ಪೋರ್ಟ್ಸ್ ಪ್ರಮೋಶನ್‌ ಕೌನ್ಸಿಲ್‌ 

– ರಾಷ್ಟ್ರೀಯ ಮಟ್ಟದ ಸರ್ಫಿಂಗ್‌ ಸ್ಪರ್ಧೆ
– ಜೂ. 2- 7ರ ವರೆಗೆ  ಸ್ಪರ್ಧೆ
– 30 ಆಹ್ವಾನಿತ ತಂಡಗಳು ಭಾಗಿ

— ಕೇಶವ ಕುಂದರ್‌

ಟಾಪ್ ನ್ಯೂಸ್

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

16

Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್‌

money

Mangaluru: ಸಿಬಿಐ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ 31.12 ಲಕ್ಷ ರೂ. ವಂಚನೆ

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.