ಧರೆಗುರುಳಿದ ಮರಗಳು ತೆರವಾಗದೆ ತೊಂದರೆ


Team Udayavani, Apr 27, 2018, 12:35 PM IST

dhare.jpg

ಬೆಂಗಳೂರು: ನಗರದಲ್ಲಿ ಮಂಗಳವಾರ, ಬುಧವಾರ ಸುರಿದ ಮಳೆಯಿಂದಾಗಿ 150ಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿದ್ದು, ಬಿಬಿಎಂಪಿ ಸಿಬ್ಬಂದಿ ಶೀಘ್ರ ಮರಗಳನ್ನು ತೆರವುಗೊಳಿಸದ ಹಿನ್ನೆಲೆಯಲ್ಲಿ ಗುರುವಾರ ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು.

ನಗರದಲ್ಲಿ ಬಿರುಗಾಳಿ ಸಹಿತ ಎರಡು ದಿನ ಸುರಿದ ಮಳೆಯಿಂದಾಗಿ ನಗರದ ಕೇಂದ್ರ ಭಾಗ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಮರಗಳು ಧರೆಗುರುಳಿವೆ. ಆದರೆ, ಪಾಲಿಕೆಯ ಸಿಬ್ಬಂದಿ ಶೀಘ್ರ ಮರಗಳನ್ನು ತೆರವುಗೊಳಿಸದ ಹಿನ್ನೆಲೆಯಲ್ಲಿ ಕೆಲವು ಕಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಅಲ್ಲದೆ, ಕತ್ತರಿಸಿದ ಮರಗಳನ್ನು ಪಾದಚಾರಿ ಮಾರ್ಗದ ಮೇಲೆ ಹಾಕಿರುವುದರಿಂದ ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ. 

ಮಲ್ಲೇಶ್ವರದ 7ನೇ ಅಡ್ಡರಸ್ತೆಯಲ್ಲಿ ಉರುಳಿದ ಬೃಹತ್‌ ಮರವನ್ನು ಪಾಲಿಕೆ ಸಿಬ್ಬಂದಿ ಗುರುವಾರ ಸಂಜೆ ತೆರವುಗೊಳಿಸಿದ್ದಾರೆ. ಆದರೆ, ಮಂಗಳವಾರ ಹಾಗೂ ಬುಧವಾರ ನಗರದ ಕೋರಮಂಗಲ, ಸ್ಯಾಂಕಿ ಕೆರೆ, ಎಚ್‌ಆರ್‌ಬಿಆರ್‌ ಬಡಾವಣೆ, ವೆಸ್ಟ್‌ ಆಫ್ ಕಾರ್ಡ್‌ ರಸ್ತೆ, ಬಸವೇಶ್ವರ ನಗರ, ಸರ್ಕಲ್‌ ಮಾರಮ್ಮ ವೃತ್ತ, ಯಶವಂತಪುರ, ಶ್ರೀನಗರ, ಸದಾಶಿವನಗರ, ಡಾಲರ್ ಕಾಲೋನಿ, ಗಿರಿನಗರ, ಜಯನಗರ, ಕತ್ತರಿಗುಪ್ಪೆ, ವಿಜಯನಗರ, ನವರಂಗ್‌, ಶ್ರೀಗಂಧ ಕಾವಲ್‌, ನಾಗರಬಾವಿ, ರಾಜಾಜಿನಗರ ಸೇರಿದಂತೆ ನಗರದ ಹತ್ತಾರು ಭಾಗಗಳಲ್ಲಿ ಉರುಳಿರುವ ಮರಗಳ ಕೊಂಬೆಗಳು, ತುಂಡುಗಳನ್ನು ಇನ್ನೂ ವಿಲೇವಾರಿ ಮಾಡಿಲ್ಲ.

ಸಿಬ್ಬಂದಿ ಹೈರಾಣ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಮರಗಳು ಉರುಳಿದ ದೂರುಗಳು ಬರುತ್ತಿರುವುದರಿಂದ ಪಾಲಿಕೆಯ ಅರಣ್ಯ ಘಟಕ ತಂಡಗಳ ಸದಸ್ಯರು ಅವುಗಳನ್ನು ತೆರವುಗೊಳಿಸುವಲ್ಲಿ ಹೈರಾಣಾಗಿದ್ದಾರೆ. ಈ ಅವಧಿಯಲ್ಲಿ 40ಕ್ಕೂ ಹೆಚ್ಚು ಬೃಹದಾಕಾರದ ಮರಗಳು ಉರುಳಿ 15 ವಾಹನಗಳು ಜಖಂಗೊಂಡಿವೆ. ಜತೆಗೆ 110ಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಉರುಳಿದ್ದು, ಅವುಗಳನ್ನು ತೆರವುಗೊಳಿಸಲು ಸಿಬ್ಬಂದಿ ಹರಸಾಹಸ ಪಡುವಂತಾಗಿದೆ. 

ಇದರ ಮಧ್ಯೆಯೂ ದೂರುಗಳಿಗೆ ಸ್ಪಂದಿಸುತ್ತಿರುವ ಅರಣ್ಯ ಘಟಕದ ಸಿಬ್ಬಂದಿಯು ರಸ್ತೆಯಲ್ಲಿರುವ ಮರಗಳನ್ನು ಕೂಡಲೇ ವಾಹನ ಸಂಚಾರಕ್ಕೆ ಅನುಕೂಲ ಮಾಡುತ್ತಿದ್ದು,  ತುಂಡರಿಸಿ ಪಾದಚಾರಿ ಮಾರ್ಗಗಳಲ್ಲಿ ಇರಿಸಿ ಬೇರೆ ದೂರುಗಳಿಗೆ ಸ್ಪಂದಿಸಲು ತೆರಳುತ್ತಿದ್ದಾರೆ. ಇದರಿಂದಾಗಿ ಬಹುತೇಕ ಕಡೆಗಳಲ್ಲಿ ಮರದ ಕೊಂಬೆಗಳು ಹಾಗೂ ತುಂಡುಗಳು ಪಾದಚಾರಿ ಮಾರ್ಗಗಳನ್ನು ಆವರಿಸಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. 

ಟಾಪ್ ನ್ಯೂಸ್

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

4-chikkamagaluru

Chikkamagaluru: ಬೆಳ್ಳಂ ಬೆಳಗ್ಗೆ ಒಂಟಿ ಸಲಗದ ಹಾವಳಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.