![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
ಬೇಜಾನ್ CD ಗಳಿವೆ..! H.C ಬಾಲಕೃಷ್ಣ vs ನಿಖಿಲ್ ಕುಮಾರಸ್ವಾಮಿ
Team Udayavani, Apr 28, 2018, 3:45 PM IST
![1-bgtre.jpg](https://www.udayavani.com/wp-content/uploads/2018/04/28/1-bgtre.jpg)
ಮಾಗಡಿ: ಜೆಡಿಎಸ್ ವಿರುದ್ದ ಬಂಡೆದ್ದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮತ್ತು ಜೆಡಿಎಸ್ ತಾರಾ ಪ್ರಚಾರಕರಾಗಿರುವ ನಿಖಿಲ್ ಕುಮಾರಸ್ವಾಮಿ ನಡುವೆ ಹೊಸ ಸಮರ ಶುರುವಾಗಿದ್ದು ಇಬ್ಬರೂ ಏಟಿಗೆ ಇದಿರೇಟು ನೀಡಿದ್ದಾರೆ.
ತುಮಕೂರಿನಲ್ಲಿ ಪ್ರಚಾರದ ವೇಳೆ ಬಂಡಾಯವೆದ್ದು ಕಾಂಗ್ರೆಸ್ ಸೇರಿದ ಶಾಸಕರ ವಿರುದ್ದ ವಾಗ್ಧಾಳಿ ನಡೆಸಿದ್ದ ನಿಖಿಲ್ ‘ಅವರೆಲ್ಲಾ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ’ ಎಂದಿದ್ದರು.
ಇದಕ್ಕೆ ಮಾಗಡಿಯಲ್ಲಿ ಶುಕ್ರವಾರ ನಡೆದ ಬಹಿರಂಗ ಸಭೆಯಲ್ಲಿ ತಿರುಗೇಟು ನೀಡಿದ ಬಾಲಕೃಷ್ಣ ‘ನಿಖಿಲ್ನ ಬೇಜಾನ್ ಸೀಡಿಗಳು ನಮ್ಮಲ್ಲೂ ಇವೆ. ಬಂದವರು ವೋಟ್ ಕೇಳಬೇಕು ಅಷ್ಟೇ. ನಮ್ಮ ಬಗ್ಗೆ ಮಾತನಾಡಿದರೆ, ನಮ್ಮತ್ರನೂ ಬಹಳಷ್ಟು ಕ್ಯಾಸೆಟ್ಗಳಿವೆ’ ಎಂದು ಬಾಂಬ್ ಸಿಡಿಸಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ನಿಖಿಲ್ ‘ತಾಕತ್ ಇದ್ರೆ ಕ್ಯಾಸೆಟ್ ಬಿಡುಗಡೆ ಮಾಡಲಿ. ಅವರ ಯೋಗ್ಯತೆ ಏನು ಎಂದು ಆರುವರೆ ಕೋಟಿ ಕನ್ನಡಿಗರು ನೋಡಿದ್ದಾರೆ. ಹೇಗೆ ಬೆನ್ನಿಗೆ ಚೂರಿ ಚುಚ್ಚಿ ಹೋಗಿದ್ದಾರೆ ಎಂದು. ಬರೆದುಕೊಳ್ಳಿ ..ಮಾಗಡಿ ಬಾಲಕೃಷ್ಣ ಅವರು ಈ ಚುನಾವಣೆ ಬಳಿಕ ರಾಜಕೀಯ ನಿವೃತ್ತಿ ಹೊಂದಬೇಕು. ನೋಡೋಣ ಅದು ಹೇಗೆ ರಾಜಕೀಯ ಮಾಡುತ್ತಾರೆ’ ಎಂದು ನಿಖಿಲ್ ಪ್ರತಿಸವಾಲು ಹಾಕಿದ್ದಾರೆ.
ಟಾಪ್ ನ್ಯೂಸ್
![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![RadhaMohan-das](https://www.udayavani.com/wp-content/uploads/2024/07/RadhaMohan-das-150x90.jpg)
BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
![Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ](https://www.udayavani.com/wp-content/uploads/2024/07/sedam-150x94.jpg)
Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ
![Channapatna Bypoll; I am the candidate of alliance party…: What did CP Yogeshwar say?](https://www.udayavani.com/wp-content/uploads/2024/07/channapatna-150x83.jpg)
Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.