ತ.ನಾ. ದೇವಸ್ಥಾನದಲ್ಲಿ ಅನ್ನ ಪ್ರಸಾದ ತಿಂದು 73 ಮಂದಿ ಆಸ್ಪತ್ರೆಗೆ
Team Udayavani, Apr 30, 2018, 12:16 PM IST
ಕಡಲೂರು, ತಮಿಳು ನಾಡು : ಜಿಲ್ಲೆಯ ದೇವಸ್ಥಾನವೊಂದರಲ್ಲಿ ಅನ್ನ ಪ್ರಸಾದ ತಿಂದ ಆರು ಮಕ್ಕಳು ಮತ್ತು 14 ಮಹಿಳೆಯರು ಸೇರಿದಂತೆ ಒಟ್ಟು 73 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ ಘಟನೆ ವರದಿಯಾಗಿದೆ.
ಹಬ್ಬದ ಅಂಗವಾಗಿ ವಿ ಶತಮಂಗಲಂ ಗ್ರಾಮದ ಅಮ್ಮನ್ ದೇವಳದಲ್ಲಿ ಭಕ್ತಾದಿಗಳು ಅನ್ನ – ಸಾಂಬಾರು ಪ್ರಸಾದ ತಿಂದು ಅಸ್ವಸ್ಥರಾದರೆಂದು ಪೊಲೀಸರು ತಿಳಿಸಿದ್ದಾರೆ.
ಅನ್ನ ಪ್ರಸಾದ ತಿಂದ ಭಕ್ತಾದಿಗಳು ತಲೆ ಸುತ್ತುವಿಕೆ ಅನುಭವಿಸಿ ವಾಂತಿ ಮಾಡಿಕೊಂಡಾಗ ಅವರನ್ನು ಕೂಡಲೇ ಇಲ್ಲಿಗೆ ಸಮೀಪದ ವಿರೂದಾಚಲಂ ಸರಕಾರಿ ಆಸ್ಪತ್ರೆಗೆ ಸೇರಿಸಲಾಯಿತು.
ಅನ್ನ ಸಾಂಬಾರ್ನಲ್ಲಿ ಸತ್ತ ಹಲ್ಲಿಯೊಂದು ಕಂಡು ಬಂದಿತ್ತು ಎಂದು ಕೆಲವು ಭಕ್ತರು ಹೇಳಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಳೆದ ಎ.5ರಂದು ಕೊಯಮುತ್ತೂರು ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪ್ರಸಾದ ತಿಂದು 30 ಮಂದಿ ಅಸ್ವಸ್ಥರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.