“ನಾನೇನು ಮಾಡಿದ್ದೇನೆಂದು ಕ್ಷೇತ್ರದ ಜನರಿಗೆ ಗೊತ್ತಿದೆ’
Team Udayavani, May 1, 2018, 7:05 AM IST
ಕುಂದಾಪುರ: ಕ್ಷೇತ್ರದ ಅಭಿವೃದ್ಧಿಗೆ ಏನೆಲ್ಲ ಕೆಲಸ-ಕಾರ್ಯ ಮಾಡಿದ್ದೇನೆ ಹಾಗೂ ಕಸ್ತೂರಿ ರಂಗನ್,ಸಿಆರ್ಝಡ್, ಡೀಮ್ಡ್ ಫಾರೆಸ್ಟ್ ಇನ್ನಿತರ ಪ್ರಮುಖ ಸಭೆಗಳಲ್ಲಿ ಪಾಲ್ಗೊಂಡ ಬಗ್ಗೆ ದಾಖಲೆಗಳು ನನ್ನಲ್ಲಿವೆ. ಅಗತ್ಯ ಬಿದ್ದಾಗ ಅದನ್ನು ಬಹಿರಂಗಪಡಿಸುತ್ತೇನೆ. ನಾನು ಏನು ಕೆಲಸ ಮಾಡಿದ್ದೇನೆ ಎನ್ನುವುದು ಜನರಿಗೆ ಗೊತ್ತಿದೆ ಎಂದು ಕುಂದಾಪುರ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.
ಮೇ 1ರಂದು ಪ್ರಧಾನಿ ಮೋದಿ ಉಡುಪಿ ಭೇಟಿ ಕುರಿತು ಕುಂದಾಪುರ ಬಿಜೆಪಿ ಕಚೇರಿಯಲ್ಲಿ ರವಿವಾರ ಕರೆಯಲಾದ ನಗರ ಹಾಗೂ ತಾಲೂಕಿನ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಿಜೆಪಿ ಸೇರ್ಪಡೆ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ಕಚೇರಿಗೆ ಭೇಟಿ ಕೊಟ್ಟ ಹಾಲಾಡಿಯವರು ಮೇ 1ರಂದು ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಕುರಿತು ಚರ್ಚಿಸಿದರು.
ಬಿಜೆಪಿಗೆ ಸೇರ್ಪಡೆ
ಇದೇ ವೇಳೆ ಬಿಜೆಪಿಗೆ ಸೇರ್ಪಡೆಯಾದ ಕುಂದಾಪುರ ಹೂವಿನ ಮಾರುಕಟ್ಟೆ ಸಂಘದ ಅಧ್ಯಕ್ಷ ಶಿವ ಮೆಂಡನ್, ಬುದ್ದರಾಜ ಶೆಟ್ಟಿ ಕೋಟೇಶ್ವರ ಅವರಿಗೆ ಹಾಲಾಡಿ ಶ್ರೀನಿವಾಸ ಶೆಟ್ಟರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ರಾಜ್ಯ ಕಾರ್ಯಕಾರಣಿ ಸದಸ್ಯ ಕಿರಣ್ ಕೊಡ್ಗಿ, ಕುಂದಾಪುರ ಪ್ರಭಾರಿ ಸಂಧ್ಯಾ ರಮೇಶ್, ನಾಯಕರಾದ ರಾಘವೇಂದ್ರ, ಹೊರರಾಜ್ಯದ ಪ್ರಮುಖ ಜೇಸ್ ಡಯಾಸ್, ಮೋಹನ್ದಾಸ್ ಶೆಣೈ, ಜಾನಕಿ ಬಿಲ್ಲವ, ಭಾಸ್ಕರ ಬಿಲ್ಲವ ಇದ್ದರು. ಕುಂದಾಪುರದ ಬಿಜೆಪಿ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಪ್ರ. ಕಾರ್ಯದರ್ಶಿ ಶಂಕರ ಅಂಕದಕಟ್ಟೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.