ಶ್ರೀಕೃಷ್ಣನ ನಾಡಿಗೆ ಇಂದು ಮೋದಿ


Team Udayavani, May 1, 2018, 7:40 AM IST

300418Astro10.jpg

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಪೈಕಿ ಉಡುಪಿಗೇ ಮೊದಲಿಗೆ ವಿಧಾನಸಭಾ ಚುನಾವಣೆ ಪ್ರಚಾರ ಸಂಬಂಧ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಉಡುಪಿ ಜಿಲ್ಲಾ ಬಿಜೆಪಿ ಸಜ್ಜಾಗಿದೆ.

ಮೋದಿ ಪ್ರಧಾನಿಯಾದ ಬಳಿಕ 
ಮೊದಲ ಭೇಟಿ

ವಿಶೇಷವೆಂದರೆ ಜಿಲ್ಲಾ ಜನರಿಗೆ ನರೇಂದ್ರ ಮೋದಿ ಪ್ರಧಾನಿ. ಬಿಜೆಪಿ ಪಕ್ಷದವರಿಗೆ ಅವರು ಪ್ರಧಾನಿ ಮತ್ತು ತಮ್ಮ ಪಕ್ಷದ ವರಿಷ್ಠ. ಈ ಹಿಂದೆ ಮೂರು ಬಾರಿ ಮೋದಿಯವರು ಉಡುಪಿಗೆ ಬಂದಿದ್ದರೂ ಈ ಬಾರಿ ವಿಶೇಷವೇ ಬೇರೆ. ಎರಡು ಬಾರಿ ಬಂದಾಗಲೂ ಅವರು ಒಂದು ರಾಜ್ಯದ ಮುಖ್ಯಮಂತ್ರಿ. ಈ ಬಾರಿ ದೇಶದ ಪ್ರಧಾನಿ. ಪ್ರಧಾನಿ ಪಟ್ಟಕ್ಕೇರಿದ ಬಳಿಕ ಉಡುಪಿಗೆ ಇದು ಮೊದಲ ಭೇಟಿ.

ಈ ಐತಿಹಾಸಿಕ ಕ್ಷಣಕ್ಕೆ ವೇದಿಕೆ ಯಾಗಲಿರುವ ಎಂಜಿಎಂ ಕಾಲೇಜು ಮೈದಾನವನ್ನು ಮೇ 1ರ ಬಹಿರಂಗ ಸಮಾವೇಶಕ್ಕೆ ಸಂಪೂರ್ಣವಾಗಿ ಸಿದ್ಧಗೊಳಿ ಸಲಾಗುತ್ತಿದೆ. ಸುಮಾರು ಒಂದು ಲಕ್ಷ ಮಂದಿ ಸೇರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ಸಣ್ಣ ಲೋಪವೂ ಆಗದಂತೆ ಪೂರ್ವ ಸಿದ್ಧತಾ ಸಭೆಗಳನ್ನು ನಡೆಸಿ ಸ್ಥಳೀಯ ಮುಖಂಡರು ಕ್ರಮ ಕೈಗೊಳ್ಳುತ್ತಿದ್ದಾರೆ. ಮಧ್ಯಾಹ್ನ ವೇಳೆ ಕಾರ್ಯಕ್ರಮ ನಡೆಯುತ್ತಿರುವುದರಿಂದ ಬಿಸಿಲಿನ ತಾಪದಿಂದ ರಕ್ಷಿಸಲು ಇಡೀ ಮೈದಾನಕ್ಕೆ ಪೆಂಡಾಲ್‌ ಹಾಕಲಾಗಿದೆ. ಸುಮಾರು 1 ಸಾವಿರ ಮಂದಿ ಸ್ವಯಂಸೇವಕರನ್ನು ಕಾರ್ಯಕ್ರಮದ ಯಶಸ್ವಿಗೆ ನಿಯೋಜಿಸಲಾಗಿದೆ.

ಬಿಗಿ ಭದ್ರತೆ 
ಪ್ರಧಾನಿಯವರು ಪಾಲ್ಗೊಳ್ಳುವ ಬಹಿರಂಗ ಸಭೆಗೆ ಜಿಲ್ಲಾ ಪೊಲೀಸ್‌ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಳ್ಳುತ್ತಿದೆ. ಈಗಾಗಲೇ ಮೋದಿಯವರ ಆಗಮನ, ನಿರ್ಗಮನ ವೇಳೆ ಹಾಗೂ ಕಾರ್ಯಕ್ರಮದ ಸಂದರ್ಭದಲ್ಲೂ ಯಾವುದೇ ಅವಘಡ, ಗೊಂದಲಗಳು ಉದ್ಭವಿಸದಂತೆ ವಾಹನ ಸಂಚಾರದಲ್ಲಿ ಕೆಲವು ಬದಲಾವಣೆಗಳನ್ನು ಕೈಗೊಳ್ಳಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಭೆ ನಡೆಸಿ ಸಿಬಂದಿಯನ್ನು ನಿಯೋಜಿಸಿದ್ದಾರೆ. 

ರಸ್ತೆ ದುರಸ್ತಿ, ಸ್ವತ್ಛತೆ
ನಗರದ ಪ್ರಮುಖ ರಸ್ತೆಯಾದ ಉಡುಪಿ-ಮಣಿಪಾಲ ಮುಖ್ಯರಸ್ತೆಯನ್ನು ನಗರಸಭೆ ಸಿಬಂದಿ ಸ್ವತ್ಛಗೊಳಿಸುವಲ್ಲಿ ಕಾರ್ಯೋನ್ಮುಖವಾಗಿದೆ. ರಸ್ತೆ ಅಕ್ಕಪಕ್ಕದ ಕಳೆಗಿಡಗಳನ್ನು ಕತ್ತರಿಸುವುದು, ಪ್ರಧಾನಿಯವರು ಸಾಗುವ ಪ್ರಮುಖ ರಸ್ತೆಯ ಗುಂಡಿಗಳಿಗೆ ತೇಪೆ ಹಾಕುತ್ತಿರುವುದಲ್ಲದೇ, ಸಮಾವೇಶ ನಡೆಯುವ ಮೈದಾನದ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಬಿ.ಎಡ್‌. ಕಾಲೇಜು ರಸ್ತೆಯನ್ನು ಸೋಮವಾರ ದುರಸ್ತಿಪಡಿಸಲಾಯಿತು.

ಟಾಪ್ ನ್ಯೂಸ್

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.